<p><strong>ಜಗಳೂರು:</strong> ತುಂಗಭದ್ರಾ ನದಿಯಿಂದ ತಾಲ್ಲೂಕಿನ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ದೇವಿಕೆರೆ ಸಮೀಪ ಪೈಪ್ ಲೈನ್ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಳೆಗಾಲದಲ್ಲಿ ಎಲ್ಲಾ ಕೆರೆಗಳಿಗೆ ನೀರು ಬರಲಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.</p>.<p>ಪಟ್ಟಣದಲ್ಲಿ ಪಂಚಾಯಿತಿ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದ ನಂತರ ಸಾರ್ವಜನಿಕರ ಅಹವಾಲು ಆಲಿಸಿ ಅವರು ಮಾತನಾಡಿದರು.</p>.<p>ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದೆ. ಶೀಘ್ರ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ತ್ವರಿತ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.</p>.<p>ಪಟ್ಟಣದಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕಾಗಿ ₹ 5 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸಿದ್ದು, ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.</p>.<p>ಪಟ್ಟಣದ ಕೆರೆಗೆ ಹೊಂದಿಕೊಂಡಿರುವ ಜೋಗಪ್ಪನ ಗುಡಿ ಪ್ರದೇಶದಲ್ಲಿ ಎರಡು ವರ್ಷದ ಹಿಂದೆ ಕೆರೆಗೆ ಹೆಚ್ಚು ನೀರು ಹರಿದು ಬಂದಿದ್ದರಿಂದ ತೆರವುಗೊಳಿಸಲಾಗಿದ್ದ 40ಕ್ಕೂ ಹೆಚ್ಚು ಮನೆಗಳ ನಿವಾಸಿಗಳ ಸಂತ್ರಸ್ತರು ತಮಗೆ ಶಾಶ್ವತ ಮನೆಗಳನ್ನು ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದರು.</p>.<p>‘ಎಲ್ಲ ಸಂತ್ರಸ್ತರೂ ಒಟ್ಟಿಗೆ ಬನ್ನಿ. ಚರ್ಚೆ ಮಾಡಿ ಪರಿಹಾರದ ಬಗ್ಗೆ ಯೋಚಿಸೋಣ’ ಎಂದು ಶಾಸಕರು ಹೇಳಿದರು.</p>.<p>ಪಟ್ಟಣದ ಹೊಸ ಹಾಗೂ ಹಳೆ ಬಸ್ ನಿಲ್ದಾಣಗಳಲ್ಲಿರುವ ಶೌಚಾಲಯ ಹಾಗೂ ಆವರಣವನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿಯೊಂದಿಗೆ ಸೇರಿ ಶಾಸಕರು ಸ್ವಚ್ಛಗೊಳಿಸಿದರು. ನಂತರ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಇಂದಿರಾ ಕ್ಯಾಂಟೀನ್ನಲ್ಲಿ ಉಪಾಹಾರ ಸೇವಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಸದಸ್ಯರಾದ ರವಿಕುಮಾರ್, ರಮೇಶ್, ಅಹಮದ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್, ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಮಂಜುನಾಥ್, ಹಟ್ಟಿ ತಿಪ್ಪೇಸ್ವಾಮಿ, ಎ.ಎಲ್. ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ತುಂಗಭದ್ರಾ ನದಿಯಿಂದ ತಾಲ್ಲೂಕಿನ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ದೇವಿಕೆರೆ ಸಮೀಪ ಪೈಪ್ ಲೈನ್ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಳೆಗಾಲದಲ್ಲಿ ಎಲ್ಲಾ ಕೆರೆಗಳಿಗೆ ನೀರು ಬರಲಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.</p>.<p>ಪಟ್ಟಣದಲ್ಲಿ ಪಂಚಾಯಿತಿ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದ ನಂತರ ಸಾರ್ವಜನಿಕರ ಅಹವಾಲು ಆಲಿಸಿ ಅವರು ಮಾತನಾಡಿದರು.</p>.<p>ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದೆ. ಶೀಘ್ರ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ತ್ವರಿತ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.</p>.<p>ಪಟ್ಟಣದಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕಾಗಿ ₹ 5 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸಿದ್ದು, ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.</p>.<p>ಪಟ್ಟಣದ ಕೆರೆಗೆ ಹೊಂದಿಕೊಂಡಿರುವ ಜೋಗಪ್ಪನ ಗುಡಿ ಪ್ರದೇಶದಲ್ಲಿ ಎರಡು ವರ್ಷದ ಹಿಂದೆ ಕೆರೆಗೆ ಹೆಚ್ಚು ನೀರು ಹರಿದು ಬಂದಿದ್ದರಿಂದ ತೆರವುಗೊಳಿಸಲಾಗಿದ್ದ 40ಕ್ಕೂ ಹೆಚ್ಚು ಮನೆಗಳ ನಿವಾಸಿಗಳ ಸಂತ್ರಸ್ತರು ತಮಗೆ ಶಾಶ್ವತ ಮನೆಗಳನ್ನು ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದರು.</p>.<p>‘ಎಲ್ಲ ಸಂತ್ರಸ್ತರೂ ಒಟ್ಟಿಗೆ ಬನ್ನಿ. ಚರ್ಚೆ ಮಾಡಿ ಪರಿಹಾರದ ಬಗ್ಗೆ ಯೋಚಿಸೋಣ’ ಎಂದು ಶಾಸಕರು ಹೇಳಿದರು.</p>.<p>ಪಟ್ಟಣದ ಹೊಸ ಹಾಗೂ ಹಳೆ ಬಸ್ ನಿಲ್ದಾಣಗಳಲ್ಲಿರುವ ಶೌಚಾಲಯ ಹಾಗೂ ಆವರಣವನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿಯೊಂದಿಗೆ ಸೇರಿ ಶಾಸಕರು ಸ್ವಚ್ಛಗೊಳಿಸಿದರು. ನಂತರ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಇಂದಿರಾ ಕ್ಯಾಂಟೀನ್ನಲ್ಲಿ ಉಪಾಹಾರ ಸೇವಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಸದಸ್ಯರಾದ ರವಿಕುಮಾರ್, ರಮೇಶ್, ಅಹಮದ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್, ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಮಂಜುನಾಥ್, ಹಟ್ಟಿ ತಿಪ್ಪೇಸ್ವಾಮಿ, ಎ.ಎಲ್. ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>