ಚನ್ನಗಿರಿ: ತಾಲ್ಲೂಕಿನಾದ್ಯಂತ ದಿನೇ ದಿನೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಕಟ್ಟೆ, ಹೊಂಡ, ಬಾವಿಗಳು ನೀರಿಲ್ಲದೇ ಸಂಪೂರ್ಣ ಒಣಗಿವೆ. ಪರಿಣಾಮವಾಗಿ ಪಕ್ಷಿ ಸಂಕುಲ ಅಪಾಯಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಕಚೇರಿಗಳ ತಾರಸಿ ಮೇಲೆ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ತಾಲ್ಲೂಕಿನ ಎಲ್ಲ ಸರ್ಕಾರಿ ಕಚೇರಿಗಳ ತಾರಸಿ ಮೇಲೆ ಭಾನುವಾರದಿಂದಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.