ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಆಧಾರ ಇಟ್ಟುಕೊಂಡು ಮಾತನಾಡಲಿ. ಡಿ.ಕೆ. ಶಿವಕುಮಾರ್ ಅವರಲ್ಲಿ ದಿಟ್ಟತನವಿದ್ದರೆ ಕಾಂಗ್ರೆಸ್ಗೆ ಮರಳಲಿರುವವರ ಹೆಸರನ್ನು ಈಗಲೇ ಬಹಿರಂಗಪಡಿಸಲಿ. ಅದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ದೂರಿದರು.