<p><strong>ಹೊನ್ನಾಳಿ:</strong> ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಭಾನುವಾರ ರಾಮ ದೇವಸ್ಥಾನದ ಗೃಹಪ್ರವೇಶ, ಕಳಶಾರೋಹಣ ಮತ್ತು ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.</p>.<p>ಶನಿವಾರ ಸುಂಕದಕಟ್ಟೆ, ದೇವರಹೊನ್ನಾಳಿ, ಬೇಲಿಮಲ್ಲೂರು, ಮಾಸಡಿ, ನರಸಗೊಂಡನಹಳ್ಳಿ ಗ್ರಾಮಗಳ ದೇವರು ಉತ್ಸವ ಮೂರ್ತಿಗಳೊಂದಿಗೆ ತೆರಳಿ ಗಂಗೆಪೂಜೆ ನೆರವೇರಿಸಲಾಗಿತ್ತು. ನಂತರ ದೇವಸ್ಥಾನ ಪ್ರವೇಶ, ಮಹಾಗಣಪತಿ ಪೂಜೆ, ಮಹಾ ಮೃತ್ಯಂಜಯ ಹೋಮ, ಗಣಹೋಮ, ರುದ್ರಹೋಮಗಳು ಕುಮಾರ ಭಟ್ಟರ ನೇತೃತ್ವದಲ್ಲಿ ನಡೆದಿದ್ದವು.</p>.<p>ಭಾನುವಾರ ನೂತನ ರಾಮನಮೂರ್ತಿಗೆ ಮಹಾರುದ್ರಾಭಿಷೇಕ ನಡೆಯಿತು. ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ರಾಮನ ಶಿಲಾಮೂರ್ತಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಹಾಗೂ ಗೋಪುರ ಕಳಶಾರೋಹಣ ನೆರವೇರಿಸಿದರು.</p>.<p>ನಂತರ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಶಾಸಕ ಡಿ.ಜಿ. ಶಾಂತನಗೌಡ, ‘ಶ್ರೀರಾಮ ವನವಾಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ ಹಾದು ಹೋಗಿದ್ದರು ಎಂಬ ಐತಿಹ್ಯವಿದೆ. ಹೋಗುವಾಗ ಈ ಜಾಗದಲ್ಲಿ ಲಿಂಗು ಪ್ರತಿಷ್ಠಾಪನೆ ಮಾಡಿದ್ದರಿಂದ ಈ ಪ್ರದೇಶಕ್ಕೆ ರಾಮನಗುಡಿ ಎಂಬ ಹೆಸರು ಪ್ರಾಪ್ತವಾಯಿತು. ಹಳೆಯ ಕಲ್ಲಿನ ಕಟ್ಟಡವನ್ನು ತೆರವುಗೊಳಿಸಿ ಯುವಕರು, ಗ್ರಾಮಸ್ಥರ ಸಹಕಾರದಿಂದ ದೇವಸ್ಥಾನ ನಿರ್ಮಾಣ ಮಾಡಲಾಗಿದೆ’ ಎಂದರು.</p>.<p>‘ರಾಮನಗುಡಿ ಇರುವ ಜಾಗವನ್ನು ವಿಜಯಪ್ಪ ಗೌಡರು ದಾನ ಮಾಡಿದ್ದು, ಈ ಜಾಗದಲ್ಲಿ ರಾಮನ ಮಂದಿರವನ್ನು ಗ್ರಾಮಸ್ಥರು ನಿರ್ಮಿಸಿದ್ದಾರೆ. ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದಂತೆ ಸರ್ಕಾರಿ ಶಾಲೆಗಳನ್ನು ಜೀರ್ಣೋದ್ಧಾರ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗ್ರಾಮಸ್ಥರಿಗೆ ಮನವಿ ಮಾಡಿದರು.</p>.<p>ಗ್ರಾಮದ ಮುಖಂಡರಾದ ವಿಜಯಪ್ಪ ಗೌಡ, ಜಿ.ಪಿ. ಶ್ರೀನಿವಾಸ್, ಷಣ್ಮುಖಪ್ಪ, ರುದ್ರಪ್ಪ, ಎ.ಬಿ. ಮಂಜಪ್ಪ, ಜಿ.ಪಂ. ಸದಸ್ಯ ಸುರೇಂದ್ರನಾಯ್ಕ, ಸತೀಶ್ ಗೌಡ, ಗೋವಿಂದಸ್ವಾಮಿ, ತಾ.ಪಂ. ಮಾಜಿ ಅಧ್ಯಕ್ಷ ರಮೇಶ್ ದಾಸಹಳ್ಳಿ, ಶಿಕ್ಷಕ ಸುನೀಲ್, ತಿಮ್ಮಪ್ಪ ಸೇರಿದಂತೆ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಭಾನುವಾರ ರಾಮ ದೇವಸ್ಥಾನದ ಗೃಹಪ್ರವೇಶ, ಕಳಶಾರೋಹಣ ಮತ್ತು ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.</p>.<p>ಶನಿವಾರ ಸುಂಕದಕಟ್ಟೆ, ದೇವರಹೊನ್ನಾಳಿ, ಬೇಲಿಮಲ್ಲೂರು, ಮಾಸಡಿ, ನರಸಗೊಂಡನಹಳ್ಳಿ ಗ್ರಾಮಗಳ ದೇವರು ಉತ್ಸವ ಮೂರ್ತಿಗಳೊಂದಿಗೆ ತೆರಳಿ ಗಂಗೆಪೂಜೆ ನೆರವೇರಿಸಲಾಗಿತ್ತು. ನಂತರ ದೇವಸ್ಥಾನ ಪ್ರವೇಶ, ಮಹಾಗಣಪತಿ ಪೂಜೆ, ಮಹಾ ಮೃತ್ಯಂಜಯ ಹೋಮ, ಗಣಹೋಮ, ರುದ್ರಹೋಮಗಳು ಕುಮಾರ ಭಟ್ಟರ ನೇತೃತ್ವದಲ್ಲಿ ನಡೆದಿದ್ದವು.</p>.<p>ಭಾನುವಾರ ನೂತನ ರಾಮನಮೂರ್ತಿಗೆ ಮಹಾರುದ್ರಾಭಿಷೇಕ ನಡೆಯಿತು. ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ರಾಮನ ಶಿಲಾಮೂರ್ತಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಹಾಗೂ ಗೋಪುರ ಕಳಶಾರೋಹಣ ನೆರವೇರಿಸಿದರು.</p>.<p>ನಂತರ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಶಾಸಕ ಡಿ.ಜಿ. ಶಾಂತನಗೌಡ, ‘ಶ್ರೀರಾಮ ವನವಾಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ ಹಾದು ಹೋಗಿದ್ದರು ಎಂಬ ಐತಿಹ್ಯವಿದೆ. ಹೋಗುವಾಗ ಈ ಜಾಗದಲ್ಲಿ ಲಿಂಗು ಪ್ರತಿಷ್ಠಾಪನೆ ಮಾಡಿದ್ದರಿಂದ ಈ ಪ್ರದೇಶಕ್ಕೆ ರಾಮನಗುಡಿ ಎಂಬ ಹೆಸರು ಪ್ರಾಪ್ತವಾಯಿತು. ಹಳೆಯ ಕಲ್ಲಿನ ಕಟ್ಟಡವನ್ನು ತೆರವುಗೊಳಿಸಿ ಯುವಕರು, ಗ್ರಾಮಸ್ಥರ ಸಹಕಾರದಿಂದ ದೇವಸ್ಥಾನ ನಿರ್ಮಾಣ ಮಾಡಲಾಗಿದೆ’ ಎಂದರು.</p>.<p>‘ರಾಮನಗುಡಿ ಇರುವ ಜಾಗವನ್ನು ವಿಜಯಪ್ಪ ಗೌಡರು ದಾನ ಮಾಡಿದ್ದು, ಈ ಜಾಗದಲ್ಲಿ ರಾಮನ ಮಂದಿರವನ್ನು ಗ್ರಾಮಸ್ಥರು ನಿರ್ಮಿಸಿದ್ದಾರೆ. ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದಂತೆ ಸರ್ಕಾರಿ ಶಾಲೆಗಳನ್ನು ಜೀರ್ಣೋದ್ಧಾರ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗ್ರಾಮಸ್ಥರಿಗೆ ಮನವಿ ಮಾಡಿದರು.</p>.<p>ಗ್ರಾಮದ ಮುಖಂಡರಾದ ವಿಜಯಪ್ಪ ಗೌಡ, ಜಿ.ಪಿ. ಶ್ರೀನಿವಾಸ್, ಷಣ್ಮುಖಪ್ಪ, ರುದ್ರಪ್ಪ, ಎ.ಬಿ. ಮಂಜಪ್ಪ, ಜಿ.ಪಂ. ಸದಸ್ಯ ಸುರೇಂದ್ರನಾಯ್ಕ, ಸತೀಶ್ ಗೌಡ, ಗೋವಿಂದಸ್ವಾಮಿ, ತಾ.ಪಂ. ಮಾಜಿ ಅಧ್ಯಕ್ಷ ರಮೇಶ್ ದಾಸಹಳ್ಳಿ, ಶಿಕ್ಷಕ ಸುನೀಲ್, ತಿಮ್ಮಪ್ಪ ಸೇರಿದಂತೆ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>