<p><strong>ಹರಿಹರ</strong>: ಸಂವಿಧಾನ ಸಮಾನತೆಯನ್ನು ಸಾರಿದ್ದರೂ ಕೆಲ ಶ್ರೀಮಂತರು ಅಟ್ಟಹಾಸ ಮೆರೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.</p>.<p>ನಗರದ ಗಾಂಧಿ ಮೈದಾನದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅಂಬೇಡ್ಕರ್ರವರು ಹಕ್ಕುಗಳ ಜೊತೆಗೆ ಜವಾಬ್ದಾರಿಯನ್ನೂ ನಿಭಾಯಿಸಲು ಒತ್ತು ನೀಡಿದ್ದಾರೆ ಎಂದು ತಿಳಿಸಿದರು.</p>.<p>ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸುರೇಶ್ ಹನಗವಾಡಿಯವರ ಸಾಧನೆಯನ್ನು ಸ್ಮರಿಸಿದರು.</p>.<p>ನಮ್ಮ ಸಾಮಾಜಿಕ ಹಾಗೂ ಆರ್ಥಿಕ ಬದುಕಿನಲ್ಲಿ ಸಮಾನತೆ ಇದ್ದರೆ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಧ್ವಜಾರೋಹಣ ನೆರೆವೇರಿಸಿದ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಿಗೆ ಹಾಗೂ ಪೌರ ಕಾರ್ಮಿಕರನ್ನು ಸತ್ಕರಿಸಲಾಯಿತು.<br /> ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಮೂರು ಸ್ಥಾನ ಪಡೆದ ವಿಧ್ಯಾರ್ಥಿಗಳಿಗೆ ತಲಾ ₹ 50 ಸಾವಿರ ನಗದು ನೀಡಿ ಗೌರವಿಸಲಾಯಿತು.</p>.<p>ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ತಾಲ್ಲೂಕು ಪಂಚಾಯಿತಿ ಇಒ ಬಸವರಾಜ್, ಪೌರಾಯುಕ್ತ ವಿನಯ ಕುಮಾರ್, ಬಿಇಒ ಡಿ.ದುರುಗಪ್ಪ, ಇನ್ಸ್ಪೆಕ್ಟರ್ ಸುರೇಶ ಸಗರಿ, ಆರ್.ಎಫ್. ದೇಸಾಯಿ ಹಾಗೂ ಸಿಬ್ಬಂದಿ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಸಂವಿಧಾನ ಸಮಾನತೆಯನ್ನು ಸಾರಿದ್ದರೂ ಕೆಲ ಶ್ರೀಮಂತರು ಅಟ್ಟಹಾಸ ಮೆರೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.</p>.<p>ನಗರದ ಗಾಂಧಿ ಮೈದಾನದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅಂಬೇಡ್ಕರ್ರವರು ಹಕ್ಕುಗಳ ಜೊತೆಗೆ ಜವಾಬ್ದಾರಿಯನ್ನೂ ನಿಭಾಯಿಸಲು ಒತ್ತು ನೀಡಿದ್ದಾರೆ ಎಂದು ತಿಳಿಸಿದರು.</p>.<p>ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸುರೇಶ್ ಹನಗವಾಡಿಯವರ ಸಾಧನೆಯನ್ನು ಸ್ಮರಿಸಿದರು.</p>.<p>ನಮ್ಮ ಸಾಮಾಜಿಕ ಹಾಗೂ ಆರ್ಥಿಕ ಬದುಕಿನಲ್ಲಿ ಸಮಾನತೆ ಇದ್ದರೆ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಧ್ವಜಾರೋಹಣ ನೆರೆವೇರಿಸಿದ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಿಗೆ ಹಾಗೂ ಪೌರ ಕಾರ್ಮಿಕರನ್ನು ಸತ್ಕರಿಸಲಾಯಿತು.<br /> ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಮೂರು ಸ್ಥಾನ ಪಡೆದ ವಿಧ್ಯಾರ್ಥಿಗಳಿಗೆ ತಲಾ ₹ 50 ಸಾವಿರ ನಗದು ನೀಡಿ ಗೌರವಿಸಲಾಯಿತು.</p>.<p>ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ತಾಲ್ಲೂಕು ಪಂಚಾಯಿತಿ ಇಒ ಬಸವರಾಜ್, ಪೌರಾಯುಕ್ತ ವಿನಯ ಕುಮಾರ್, ಬಿಇಒ ಡಿ.ದುರುಗಪ್ಪ, ಇನ್ಸ್ಪೆಕ್ಟರ್ ಸುರೇಶ ಸಗರಿ, ಆರ್.ಎಫ್. ದೇಸಾಯಿ ಹಾಗೂ ಸಿಬ್ಬಂದಿ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>