<p>ಪ್ರಜಾವಾಣಿ ವಾರ್ತೆ</p>.<p>ದಾವಣಗೆರೆ: ‘ನಮಗೋಸ್ಕರ ಮಾಸ್ಕ್ ಹಾಕಬೇಡಿ, ನಿಮ್ಮ ಪ್ರಾಣ ಉಳಿಸಿಕೊಳ್ಳಲು ಮಾಸ್ಕ್ ಹಾಕಿಕೊಳ್ಳಿ. ಇಲ್ಲದಿದ್ದರೆ ಕಳೆದ ಬಾರಿ ಅನುಭವಿಸಿದ ನೋವನ್ನೇ ವ್ಯಾಪಾರಿಗಳು ಮತ್ತೆ ಅನುಭವಿಸಬೇಕಾಗುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದರು.</p>.<p>ಜಿಲ್ಲಾ ಪೊಲೀಸ್ ವತಿಯಿಂದ ನಗರದ ಗಡಿಯಾರ ಕಂಬದಿಂದ ಆರಂಭವಾದ ಮಾಸ್ಕ್ ಅಭಿಯಾನ ಮತ್ತು ಕೊರೊನಾ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.</p>.<p>ಕೆ.ಆರ್.ಮಾರುಕಟ್ಟೆಯ ಬಳಿ ಮಾತನಾಡಿ, ‘ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದ್ದು, ಆಟೊದವರು ಮಾಸ್ಕ್ ಹಾಕಿಕೊಳ್ಳುತ್ತಿಲ್ಲ. ದಂಡ ಹಾಕುವುದು ನಮ್ಮ ಉದ್ದೇಶವಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿ’ ಎಂದು ಸಲಹೆ<br />ನೀಡಿದರು.</p>.<p>ಡ್ರಂಸೆಟ್ನೊಂದಿಗೆ ಪಥಸಂಚಲನ ನಡೆಸಿದ ಸಿಬ್ಬಂದಿ ದಾರಿಯಲ್ಲಿ ಮಾಸ್ಕ್ ಧರಿಸದವರಿಗೆ ಮಾಸ್ಕ್ ನೀಡಿ ‘ಪ್ರಾಣ ಉಳಿಸಿಕೊಳ್ಳಿ’ ಎಂದು ಹನುಮಂತರಾಯ ಮನವಿ ಮಾಡಿದರು.</p>.<p>ದಾವಣಗೆರೆ ಗಡಿಯಾರ ಕಂಬ ರಸ್ತೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ ಪೇಟೆಯಲ್ಲಿ ಆಭಿಯಾನ ನಡೆದಿದ್ದು, ಕೆಲಸ ಮಾಡುತ್ತಿದ್ದ ಅನೇಕ ಕಾರ್ಮಿಕರು ಮಾಸ್ಕ್ ಧರಿಸಿರಲಿಲ್ಲ. ಪೊಲೀಸರು ಬರುತ್ತಾರೆ ಎಂದಾಕ್ಷಣ ಕೂಲಿ ಕಾರ್ಮಿಕರು ಟವಲ್ ಹಾಗೂ ಮಹಿಳೆಯರು ಸೀರೆ ಸೆರಗಿನಿಂದ ಮೂಗನ್ನು ಕಟ್ಟಿಕೊಂಡರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಾಜೀವ್, ಡಿವೈಎಸ್ಪಿ ನಾಗೇಶ್ ಐತಾಳ್, ಸಿಪಿಐ ತಿಮ್ಮಣ್ಣ, ಗಜೇಂದ್ರಪ್ಪ, ಶೈಲಜಾ, ಕಾನ್ಸ್ಟೆಬಲ್ ಪ್ರಶಾಂತ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ದಾವಣಗೆರೆ: ‘ನಮಗೋಸ್ಕರ ಮಾಸ್ಕ್ ಹಾಕಬೇಡಿ, ನಿಮ್ಮ ಪ್ರಾಣ ಉಳಿಸಿಕೊಳ್ಳಲು ಮಾಸ್ಕ್ ಹಾಕಿಕೊಳ್ಳಿ. ಇಲ್ಲದಿದ್ದರೆ ಕಳೆದ ಬಾರಿ ಅನುಭವಿಸಿದ ನೋವನ್ನೇ ವ್ಯಾಪಾರಿಗಳು ಮತ್ತೆ ಅನುಭವಿಸಬೇಕಾಗುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದರು.</p>.<p>ಜಿಲ್ಲಾ ಪೊಲೀಸ್ ವತಿಯಿಂದ ನಗರದ ಗಡಿಯಾರ ಕಂಬದಿಂದ ಆರಂಭವಾದ ಮಾಸ್ಕ್ ಅಭಿಯಾನ ಮತ್ತು ಕೊರೊನಾ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.</p>.<p>ಕೆ.ಆರ್.ಮಾರುಕಟ್ಟೆಯ ಬಳಿ ಮಾತನಾಡಿ, ‘ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದ್ದು, ಆಟೊದವರು ಮಾಸ್ಕ್ ಹಾಕಿಕೊಳ್ಳುತ್ತಿಲ್ಲ. ದಂಡ ಹಾಕುವುದು ನಮ್ಮ ಉದ್ದೇಶವಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿ’ ಎಂದು ಸಲಹೆ<br />ನೀಡಿದರು.</p>.<p>ಡ್ರಂಸೆಟ್ನೊಂದಿಗೆ ಪಥಸಂಚಲನ ನಡೆಸಿದ ಸಿಬ್ಬಂದಿ ದಾರಿಯಲ್ಲಿ ಮಾಸ್ಕ್ ಧರಿಸದವರಿಗೆ ಮಾಸ್ಕ್ ನೀಡಿ ‘ಪ್ರಾಣ ಉಳಿಸಿಕೊಳ್ಳಿ’ ಎಂದು ಹನುಮಂತರಾಯ ಮನವಿ ಮಾಡಿದರು.</p>.<p>ದಾವಣಗೆರೆ ಗಡಿಯಾರ ಕಂಬ ರಸ್ತೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ ಪೇಟೆಯಲ್ಲಿ ಆಭಿಯಾನ ನಡೆದಿದ್ದು, ಕೆಲಸ ಮಾಡುತ್ತಿದ್ದ ಅನೇಕ ಕಾರ್ಮಿಕರು ಮಾಸ್ಕ್ ಧರಿಸಿರಲಿಲ್ಲ. ಪೊಲೀಸರು ಬರುತ್ತಾರೆ ಎಂದಾಕ್ಷಣ ಕೂಲಿ ಕಾರ್ಮಿಕರು ಟವಲ್ ಹಾಗೂ ಮಹಿಳೆಯರು ಸೀರೆ ಸೆರಗಿನಿಂದ ಮೂಗನ್ನು ಕಟ್ಟಿಕೊಂಡರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಾಜೀವ್, ಡಿವೈಎಸ್ಪಿ ನಾಗೇಶ್ ಐತಾಳ್, ಸಿಪಿಐ ತಿಮ್ಮಣ್ಣ, ಗಜೇಂದ್ರಪ್ಪ, ಶೈಲಜಾ, ಕಾನ್ಸ್ಟೆಬಲ್ ಪ್ರಶಾಂತ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>