ಬಳಿಕ ಮಾತನಾಡಿದ ಶಿವಕುಮಾರ್, ‘ಇಲ್ಲಿನ ಕೃಷಿ ಜಮೀನಿನಲ್ಲಿ ಯಾವುದೇ ರೀತಿಯ ಭೂ ಪರಿವರ್ತನೆ ನಡೆಸಿಲ್ಲ. ನಿಯಮಾನುಸಾರವಾಗಿ ಉದ್ಯಾನ, ರಸ್ತೆ, ಚರಂಡಿಗೆ ಜಾಗ ಬಿಡದೇ ಖಾಸಗಿ ಬಡಾವಣೆ ನಿರ್ಮಿಸಲಾಗಿದೆ. ಇಲ್ಲಿ ರಿಂಗ್ ರಸ್ತೆ ಬಂದರೆ ನಿವೇಶನಗಳ ಮಾಲೀಕರಿಗೆ ಪರಿಹಾರ ಸಿಗುವುದಿಲ್ಲ. ಬಡವರಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದೇವೆ. ರಿಯಲ್ ಎಸ್ಟೇಟ್ ಮಾಲೀಕರು ಕಾನೂನು ಪ್ರಕಾರ ಮೂಲ ಸೌಲಭ್ಯ ಕಲ್ಪಿಸಿ ಅವುಗಳನ್ನು ಹಸ್ತಾಂತರಿಸಬೇಕು’ ಎಂದು ಹೇಳಿದರು.