<p>ದಾವಣಗೆರೆ:ಸ್ಮಾರ್ಟ್ ಸಿಟಿ ಯೋಜನೆಯಡಿ ಇಲ್ಲಿನ ಅಗ್ನಿಶಾಮಕ ಇಲಾಖೆಗೆ ₹ 13.50 ಲಕ್ಷ ಮೊತ್ತದ ವಾಹನ ಹಾಗೂ ಆಧುನಿಕ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅಗ್ನಿಶಾಮಕ ಇಲಾಖೆಗೆ ಶುಕ್ರವಾರ ಜಿಲ್ಲಾಡಳಿತ ಭವನ ಆವರಣದಲ್ಲಿ ಹಸ್ತಾಂತರ ಮಾಡಿದರು.</p>.<p>ನಂತರ ಮಾತನಾಡಿ, ‘ಯಾವುದೇ ಅನಾಹುತ ಜರುಗಿದ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಗ್ನಿಶಾಮಕ ಇಲಾಖೆ ಸ್ಪಂದಿಸಬೇಕು. ಅತ್ಯಾಧುನಿಕ ಸಾಧನ ಸಲಕರಣೆಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಆಸ್ತಿ ಹಾನಿ, ಜೀವ ಹಾನಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಮೂಲಕ ಸಾರ್ವಜನಿಕ ರಕ್ಷಣೆಗೆ ಮುಂದಾಗಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಅಗ್ನಿ ಅವಘಡಗಳು, ಕಟ್ಟಡಗಳ ಕುಸಿತ, ಅಪಘಾತ ಹಾಗೂ ತುರ್ತು ಸಂದರ್ಭಗಳಲ್ಲಿ ಬಳಸುವ ಸಲುವಾಗಿ ಸ್ಮಾರ್ಟ್ಸಿಟಿ ಯೋಜನೆಯಿಂದ ₹13.50 ಲಕ್ಷ ವೆಚ್ಚದಲ್ಲಿ ಒಂದು ಬೊಲೆರೊ ಜೀಪ್,ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸೆಳೆದು ಹರಿಸಲು 4 ಪೋರ್ಟಬಲ್ ಪಂಪ್ಗಳು, ಪೆಟ್ರೋಲ್ ಆಪರೇಟರ್ ರೋಟರಿ ರೆಸ್ಕ್ಯೂ ಸಾ, ಫೈರ್ ಬೀಟರ್ಗಳು ಬಂದಿವೆ.<br />₹ 1 ಕೋಟಿ ಮೊತ್ತದ ಸಲಕರಣೆಗಳು ಇಲಾಖೆಗೆ ಮಂಜೂರಾಗಿದ್ದು, ಉಳಿದ ಸಲಕರಣೆಗಳು ಮುಂದಿನ ದಿನಗಳಲ್ಲಿ ಬರಲಿವೆ’ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಮಾಹಿತಿ ನೀಡಿದರು.</p>.<p>ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಬಿ.ಜಿ. ಅಜಯ್ಕುಮಾರ್, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ:ಸ್ಮಾರ್ಟ್ ಸಿಟಿ ಯೋಜನೆಯಡಿ ಇಲ್ಲಿನ ಅಗ್ನಿಶಾಮಕ ಇಲಾಖೆಗೆ ₹ 13.50 ಲಕ್ಷ ಮೊತ್ತದ ವಾಹನ ಹಾಗೂ ಆಧುನಿಕ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅಗ್ನಿಶಾಮಕ ಇಲಾಖೆಗೆ ಶುಕ್ರವಾರ ಜಿಲ್ಲಾಡಳಿತ ಭವನ ಆವರಣದಲ್ಲಿ ಹಸ್ತಾಂತರ ಮಾಡಿದರು.</p>.<p>ನಂತರ ಮಾತನಾಡಿ, ‘ಯಾವುದೇ ಅನಾಹುತ ಜರುಗಿದ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಗ್ನಿಶಾಮಕ ಇಲಾಖೆ ಸ್ಪಂದಿಸಬೇಕು. ಅತ್ಯಾಧುನಿಕ ಸಾಧನ ಸಲಕರಣೆಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಆಸ್ತಿ ಹಾನಿ, ಜೀವ ಹಾನಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಮೂಲಕ ಸಾರ್ವಜನಿಕ ರಕ್ಷಣೆಗೆ ಮುಂದಾಗಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಅಗ್ನಿ ಅವಘಡಗಳು, ಕಟ್ಟಡಗಳ ಕುಸಿತ, ಅಪಘಾತ ಹಾಗೂ ತುರ್ತು ಸಂದರ್ಭಗಳಲ್ಲಿ ಬಳಸುವ ಸಲುವಾಗಿ ಸ್ಮಾರ್ಟ್ಸಿಟಿ ಯೋಜನೆಯಿಂದ ₹13.50 ಲಕ್ಷ ವೆಚ್ಚದಲ್ಲಿ ಒಂದು ಬೊಲೆರೊ ಜೀಪ್,ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸೆಳೆದು ಹರಿಸಲು 4 ಪೋರ್ಟಬಲ್ ಪಂಪ್ಗಳು, ಪೆಟ್ರೋಲ್ ಆಪರೇಟರ್ ರೋಟರಿ ರೆಸ್ಕ್ಯೂ ಸಾ, ಫೈರ್ ಬೀಟರ್ಗಳು ಬಂದಿವೆ.<br />₹ 1 ಕೋಟಿ ಮೊತ್ತದ ಸಲಕರಣೆಗಳು ಇಲಾಖೆಗೆ ಮಂಜೂರಾಗಿದ್ದು, ಉಳಿದ ಸಲಕರಣೆಗಳು ಮುಂದಿನ ದಿನಗಳಲ್ಲಿ ಬರಲಿವೆ’ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಮಾಹಿತಿ ನೀಡಿದರು.</p>.<p>ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಬಿ.ಜಿ. ಅಜಯ್ಕುಮಾರ್, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>