ತಾಲೂಕಿನ ಕಕ್ಕರಗೊಳ್ಳದ ಷರೀಫಾ ಬಾನು (26) ಅವರಿಗೆ ಎರಡು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕುಟುಂಬದವರು ಅವರನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ಗಂಡು ಮಗುವಿಗೆ ಜನ್ಮನೀಡಿದ್ದ ಷರೀಫಾ ಬಾನು ನಿತ್ರಾಣರಾಗಿದ್ದರು. ಹೀಗಾಗಿ, ಸಿಬ್ಬಂದಿ ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಆಕೆ ಮೃತಪಟ್ಟಿದ್ದು, ವೈದ್ಯರ ತಾತ್ಸಾರದಿಂದಲೇ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ ಸಂಬಂಧಿಕರು, ಕೆಲ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಗಾಂಧಿನಗರ ಠಾಣೆ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.