<p><strong>ದಾವಣಗೆರೆ:</strong> ಕಟ್ಟಿಕೊಂಡ ಗಂಡನನ್ನೇ ಆರು ಮಂದಿ ಜೊತೆ ಸೇರಿ ಕಿಡ್ನಾಪ್ ಮಾಡಿದ ಆರೋಪದ ಮೇಲೆ ಪತ್ನಿಯನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ.</p>.<p>ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಗೀತಾ ಎಂಬಾಕೆಯೇ ಪೊಲೀಸರ ಅತಿಥಿಯಾದ ಪತ್ನಿ. ಶ್ರೀನಿವಾಸ್ ಅಪಹರಣಕ್ಕೊಳಗಾಗಿದ್ದ ಪತಿ.</p>.<p>ಕಳೆದ ಎರಡು ವರ್ಷದಿಂದ ಪತಿ, ಪತ್ನಿ ದೂರ ಇದ್ದರು. ಆದ್ರೆ ಪತ್ನಿಯ ನಡುವಳಿಕೆ ಸರಿ ಇಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಪತಿ ಶ್ರೀನಿವಾಸ್ ತೊರೆದಿದ್ದ. ಆದ್ರೆ, ಕಳೆದ ಎರಡು ದಿನಗಳ ಹಿಂದೆ ಪತ್ನಿ ಸಂಗೀತಾ ಹಾಗೂ 6 ಜನ ಸಹಚರರು ಪತಿಯ ಕಿಡ್ನಾಪ್ ಮಾಡಿದ್ದರು.</p>.<p>ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಾಸ್ ಬರುವಾಗ ಶ್ರೀನಿವಾಸ್ ನನ್ನು ಪ್ಯಾಸೆಂಜರ್ ಆಪೆ ಗಾಡಿಯಲ್ಲಿ ಕಿಡ್ನಾಪ್ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹದಡಿ ಪೊಲೀಸರು, ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಗೀತಾ ಹಾಗೂ ಇಬ್ಬರನ್ನು ಬಂಧಿಸಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕಟ್ಟಿಕೊಂಡ ಗಂಡನನ್ನೇ ಆರು ಮಂದಿ ಜೊತೆ ಸೇರಿ ಕಿಡ್ನಾಪ್ ಮಾಡಿದ ಆರೋಪದ ಮೇಲೆ ಪತ್ನಿಯನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ.</p>.<p>ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಗೀತಾ ಎಂಬಾಕೆಯೇ ಪೊಲೀಸರ ಅತಿಥಿಯಾದ ಪತ್ನಿ. ಶ್ರೀನಿವಾಸ್ ಅಪಹರಣಕ್ಕೊಳಗಾಗಿದ್ದ ಪತಿ.</p>.<p>ಕಳೆದ ಎರಡು ವರ್ಷದಿಂದ ಪತಿ, ಪತ್ನಿ ದೂರ ಇದ್ದರು. ಆದ್ರೆ ಪತ್ನಿಯ ನಡುವಳಿಕೆ ಸರಿ ಇಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಪತಿ ಶ್ರೀನಿವಾಸ್ ತೊರೆದಿದ್ದ. ಆದ್ರೆ, ಕಳೆದ ಎರಡು ದಿನಗಳ ಹಿಂದೆ ಪತ್ನಿ ಸಂಗೀತಾ ಹಾಗೂ 6 ಜನ ಸಹಚರರು ಪತಿಯ ಕಿಡ್ನಾಪ್ ಮಾಡಿದ್ದರು.</p>.<p>ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಾಸ್ ಬರುವಾಗ ಶ್ರೀನಿವಾಸ್ ನನ್ನು ಪ್ಯಾಸೆಂಜರ್ ಆಪೆ ಗಾಡಿಯಲ್ಲಿ ಕಿಡ್ನಾಪ್ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹದಡಿ ಪೊಲೀಸರು, ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಗೀತಾ ಹಾಗೂ ಇಬ್ಬರನ್ನು ಬಂಧಿಸಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>