<p><strong>ದಾವಣಗೆರೆ: </strong>ನಾನು ಪರಿಷತ್ತಿನ ಅಧ್ಯಕ್ಷೆಯಾದರೆ ತಾಲ್ಲೂಕು ಅಧ್ಯಕ್ಷರ ಆಯ್ಕೆಯನ್ನು ಮತದಾನದ ಮೂಲಕ ನಡೆಯುವಂತೆ ಬೈಲಾದಲ್ಲಿ ತಿದ್ದುಪಡಿ ತರುತ್ತೇನೆ ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ. ಸರಸ್ವತಿ ಚಿಮ್ಮಲಗಿ ಹೇಳಿದರು.</p>.<p>‘ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಎರಡು ಕಾರ್ಯದರ್ಶಿ ಹುದ್ದೆಗಳು ಇದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪುರುಷರು ಆಗುವಂತೆ ಅವಕಾಶ ಕಲ್ಪಿಸಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜ್ಯದಲ್ಲಿ 85 ಸಾವಿರ ಮಹಿಳಾ ಮತದಾರರಿದ್ದಾರೆ. ಮಹಿಳಾ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದು, ಮೊದಲ ಬಾರಿಗೆ ಮಹಿಳೆ ಎಂಬ ಮಾತು ಕೇಳಿ ಬರುತ್ತಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕನ್ನಡ ನಾಡು - ನುಡಿ, ನೆಲ, ಜಲ ಹಾಗೂ ಗಡಿ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಕಾಳಜಿವಹಿಸುವುದು, ಸಾಹಿತ್ಯಕ ಸಂಧರ್ಭದ ಎಲ್ಲ ಹಂತಗಳಲ್ಲಿ ಮಹಿಳೆಯರಿಗೆ ಸಮಾನ ಆದ್ಯತೆ ನೀಡುವುದು. ಅಲ್ಲದೇ ತಾಲ್ಲೂಕು ಅಧ್ಯಕ್ಷರ ಆಯ್ಕೆ ಮುಂತಾದ ವಿಷಯಗಳ ಕುರಿತು ಪರಿಷತ್ತಿನ ಬೈಲಾದಲ್ಲಿ ತಿದ್ದುಪಡಿ ತರಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಕಲಬುರ್ಗಿಯಲ್ಲಿ ನಡೆದ 58ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಾರ್ಯದರ್ಶಿ, ಲೇಖಕಿಯರ ಸಮ್ಮೇಳನದಲ್ಲಿ ಸಭಾಧ್ಯಕ್ಷೆ<br />ಯಾಗಿದ್ದೆ. ಸಾಹಿತ್ಯಿಕ ಚಟುವಟಿಕೆ ನಿರಂತರವಾಗಿ ನಡೆದಿದೆ. ನಾಟಕ, ಕಾವ್ಯ, ಜನಪರ ಹೋರಾಟಗಳು ಹಾಗೂ ಕೃಷಿಯಲ್ಲೂ ತೊಡಗಿಸಿಕೊಂಡಿದ್ದೇನೆ’ಎಂದು ಹೇಳಿದರು.</p>.<p>‘12ನೇ ಶತಮಾನದಲ್ಲಿ ಶರಣರು ಮಹಿಳೆಯನ್ನು ಉತ್ತುಂಗಕ್ಕೆ ಏರಿಸಿದ್ದರು. ಅಂಬೇಡ್ಕರ್ ಅವರು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡಿದರು. ಆದರೆ ಸರಸ್ವತಿ ಮಂದಿರದಲ್ಲಿ ಎಂದೇ ಕರೆಯಲ್ಪಡುವ ಕಸಾಪಗೆ ಮಹಿಳೆ ಹೋಗಲು ಆಗಿಲ್ಲ’ ಎಂದು ವಿಷಾದಿಸಿದರು.</p>.<p>‘ಕಸಾಪ ಚುನಾವಣೆಯಲ್ಲಿ ಜಾತಿ ಇರಬಾರದು. ಆದರೆ ಇಲ್ಲಿ ಜಾತಿ ಇರುವುದು ವಿಷಾದದ ಸಂಗತಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಬರಹಗಾರ ಮಲ್ಲಿಕಾರ್ಜುನ ಕಡಕೋಳ, ಅಶ್ವಿನಿ ತಳವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಾನು ಪರಿಷತ್ತಿನ ಅಧ್ಯಕ್ಷೆಯಾದರೆ ತಾಲ್ಲೂಕು ಅಧ್ಯಕ್ಷರ ಆಯ್ಕೆಯನ್ನು ಮತದಾನದ ಮೂಲಕ ನಡೆಯುವಂತೆ ಬೈಲಾದಲ್ಲಿ ತಿದ್ದುಪಡಿ ತರುತ್ತೇನೆ ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ. ಸರಸ್ವತಿ ಚಿಮ್ಮಲಗಿ ಹೇಳಿದರು.</p>.<p>‘ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಎರಡು ಕಾರ್ಯದರ್ಶಿ ಹುದ್ದೆಗಳು ಇದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪುರುಷರು ಆಗುವಂತೆ ಅವಕಾಶ ಕಲ್ಪಿಸಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜ್ಯದಲ್ಲಿ 85 ಸಾವಿರ ಮಹಿಳಾ ಮತದಾರರಿದ್ದಾರೆ. ಮಹಿಳಾ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದು, ಮೊದಲ ಬಾರಿಗೆ ಮಹಿಳೆ ಎಂಬ ಮಾತು ಕೇಳಿ ಬರುತ್ತಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕನ್ನಡ ನಾಡು - ನುಡಿ, ನೆಲ, ಜಲ ಹಾಗೂ ಗಡಿ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಕಾಳಜಿವಹಿಸುವುದು, ಸಾಹಿತ್ಯಕ ಸಂಧರ್ಭದ ಎಲ್ಲ ಹಂತಗಳಲ್ಲಿ ಮಹಿಳೆಯರಿಗೆ ಸಮಾನ ಆದ್ಯತೆ ನೀಡುವುದು. ಅಲ್ಲದೇ ತಾಲ್ಲೂಕು ಅಧ್ಯಕ್ಷರ ಆಯ್ಕೆ ಮುಂತಾದ ವಿಷಯಗಳ ಕುರಿತು ಪರಿಷತ್ತಿನ ಬೈಲಾದಲ್ಲಿ ತಿದ್ದುಪಡಿ ತರಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಕಲಬುರ್ಗಿಯಲ್ಲಿ ನಡೆದ 58ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಾರ್ಯದರ್ಶಿ, ಲೇಖಕಿಯರ ಸಮ್ಮೇಳನದಲ್ಲಿ ಸಭಾಧ್ಯಕ್ಷೆ<br />ಯಾಗಿದ್ದೆ. ಸಾಹಿತ್ಯಿಕ ಚಟುವಟಿಕೆ ನಿರಂತರವಾಗಿ ನಡೆದಿದೆ. ನಾಟಕ, ಕಾವ್ಯ, ಜನಪರ ಹೋರಾಟಗಳು ಹಾಗೂ ಕೃಷಿಯಲ್ಲೂ ತೊಡಗಿಸಿಕೊಂಡಿದ್ದೇನೆ’ಎಂದು ಹೇಳಿದರು.</p>.<p>‘12ನೇ ಶತಮಾನದಲ್ಲಿ ಶರಣರು ಮಹಿಳೆಯನ್ನು ಉತ್ತುಂಗಕ್ಕೆ ಏರಿಸಿದ್ದರು. ಅಂಬೇಡ್ಕರ್ ಅವರು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡಿದರು. ಆದರೆ ಸರಸ್ವತಿ ಮಂದಿರದಲ್ಲಿ ಎಂದೇ ಕರೆಯಲ್ಪಡುವ ಕಸಾಪಗೆ ಮಹಿಳೆ ಹೋಗಲು ಆಗಿಲ್ಲ’ ಎಂದು ವಿಷಾದಿಸಿದರು.</p>.<p>‘ಕಸಾಪ ಚುನಾವಣೆಯಲ್ಲಿ ಜಾತಿ ಇರಬಾರದು. ಆದರೆ ಇಲ್ಲಿ ಜಾತಿ ಇರುವುದು ವಿಷಾದದ ಸಂಗತಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಬರಹಗಾರ ಮಲ್ಲಿಕಾರ್ಜುನ ಕಡಕೋಳ, ಅಶ್ವಿನಿ ತಳವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>