<p><strong>ಹರಿಹರ:</strong> ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಹಂಚುತ್ತಿರುವ ಕಿಟ್ಗಳು ಕಂಡವರ ಪಾಲಾಗುತ್ತಿದ್ದರೂ ಅಧಿಕಾರಿಗಳು ಮೂಕ ಪ್ರೇಕ್ಷಕರಂತೆ ನಿಂತು ನೋಡುತ್ತಿದ್ದ ದೃಶ್ಯ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಯಿತು.</p>.<p>ಕಾರ್ಮಿಕ ಇಲಾಖೆ ಕವಿತಾ ಮಾತನಾಡಿ, ತಾಲ್ಲೂಕಿಗೆ 5 ಸಾವಿರ ಕಿಟ್ಗಳನ್ನು ನೀಡಲಾಗಿದೆ. ನೋಂದಾಯಿತ ಸಂಘಗಳ ತಲಾ 50 ಫಲಾನುಭವಿಗಳಿಗೆ ಕಿಟ್ ವಿತರಿಸಲು ಯೋಜಿಸಲಾಗಿತ್ತು. ಆದರೆ, ಹೆಚ್ಚು ಕಾರ್ಮಿಕರು ಆಗಮಿಸಿದ ಕಾರಣ ಸೋಮವಾರ 1 ಸಾವಿರ ಕಿಟ್ಗಳನ್ನು ವಿತರಿಸಲಾಗಿದೆ. ಬೇಡಿಕೆ ಹೆಚ್ಚಾಗಿದ್ದರಿಂದ ಕಿಟ್ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.</p>.<p>ಹೆಚ್ಚವರಿ ಕಿಟ್ಗಳಿಗಾಗಿ ಶಾಸಕರು ಕಾರ್ಮಿಕ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಕಿಟ್ ವಿತರಣೆ ಬಗ್ಗೆ ಶೀಘ್ರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕಟ್ಟಡ ಕಾರ್ಮಿಕ ಹುಚ್ಚಪ್ಪ ಆನವೇರಿ ಮಾತನಾಡಿ, ‘ಕಿಟ್ವಿತರಣಾ ಕೇಂದ್ರದ ಹಿಂಭಾಗದಲ್ಲಿ ನಗರಸಭೆ ಸದಸ್ಯರೊಬ್ಬರು ಕೂಪನ್ಗಳನ್ನು ವಿತರಿಸುತ್ತಿದ್ದಾರೆ. ಕೂಪನ್ ಕೇಳಲು ಹೋದಾಗ ನಮ್ಮ ಸಂಘದ ಸದಸ್ಯರಿಗೆ ಮಾತ್ರ ಕೂಪನ್, ಉಳಿದವರು ಅಧಿಕಾರಿಗಳ ಬಳಿ ಪಡೆಯಿರಿ ಎಂದು ವಾಪಸ್ ಕಳುಹಿಸಿದರು’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಮಿಕ ಬೀರಪ್ಪ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 17,895 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಸರ್ಕಾರ ಕೇವಲ 5 ಸಾವಿರ<br />ಕಿಟ್ಗಳನ್ನು ವಿತರಿಸಿದೆ. ಯಾವ ಮಾನದಂಡದಲ್ಲಿ ಅಧಿಕಾರಿಗಳು ಕಿಟ್ಗಳನ್ನು ಹಂಚಿಕೆ ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ನಗರಸಭೆ ಸದಸ್ಯ ಆರ್.ಸಿ. ಜಾವೇದ್ ಮಾತನಾಡಿ, ‘ಪ್ರತಿ ವಾರ್ಡ್ನಲ್ಲಿ ಕಟ್ಟಡ ಕಾರ್ಮಿಕರಿದ್ದಾರೆ. ಇಲಾಖೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದೆ ಕಿಟ್ ಹಂಚುತ್ತಿರುವುದು ತಪ್ಪು. ಕಿಟ್ಗಳು ಬಡ ಕಾರ್ಮಿಕರ ಬದಲು ಪಟ್ಟಭದ್ರ ಹಿತಾಸಕ್ತಿಗಳ ಹಾಗೂ ಉಳ್ಳವರ ಪಾಲಾಗುತ್ತಿವೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಜನಪ್ರತಿನಿಧಿಗಳು, ಸಂಘ-ಸಂಸ್ಥೆ ಹಾಗೂ ಅಧಿಕಾರಿಗಳ ಪಾಲುದಾರಿಕೆಯಲ್ಲಿ ಬಡ ಕಾರ್ಮಿಕರ ಹೊಟ್ಟೆ ಸೇರಬೇಕಿದ್ದ ದಿನಸಿ ಸಾಮಗ್ರಿಗಳು ಪಟ್ಟಭದ್ರರ ಪಾಲಾಗಿರುವುದು ಬೇಸರ ಮೂಡಿಸಿದೆ ಎಂಬುದು ಕಾರ್ಮಿಕ ಅಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಹಂಚುತ್ತಿರುವ ಕಿಟ್ಗಳು ಕಂಡವರ ಪಾಲಾಗುತ್ತಿದ್ದರೂ ಅಧಿಕಾರಿಗಳು ಮೂಕ ಪ್ರೇಕ್ಷಕರಂತೆ ನಿಂತು ನೋಡುತ್ತಿದ್ದ ದೃಶ್ಯ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಯಿತು.</p>.<p>ಕಾರ್ಮಿಕ ಇಲಾಖೆ ಕವಿತಾ ಮಾತನಾಡಿ, ತಾಲ್ಲೂಕಿಗೆ 5 ಸಾವಿರ ಕಿಟ್ಗಳನ್ನು ನೀಡಲಾಗಿದೆ. ನೋಂದಾಯಿತ ಸಂಘಗಳ ತಲಾ 50 ಫಲಾನುಭವಿಗಳಿಗೆ ಕಿಟ್ ವಿತರಿಸಲು ಯೋಜಿಸಲಾಗಿತ್ತು. ಆದರೆ, ಹೆಚ್ಚು ಕಾರ್ಮಿಕರು ಆಗಮಿಸಿದ ಕಾರಣ ಸೋಮವಾರ 1 ಸಾವಿರ ಕಿಟ್ಗಳನ್ನು ವಿತರಿಸಲಾಗಿದೆ. ಬೇಡಿಕೆ ಹೆಚ್ಚಾಗಿದ್ದರಿಂದ ಕಿಟ್ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.</p>.<p>ಹೆಚ್ಚವರಿ ಕಿಟ್ಗಳಿಗಾಗಿ ಶಾಸಕರು ಕಾರ್ಮಿಕ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಕಿಟ್ ವಿತರಣೆ ಬಗ್ಗೆ ಶೀಘ್ರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕಟ್ಟಡ ಕಾರ್ಮಿಕ ಹುಚ್ಚಪ್ಪ ಆನವೇರಿ ಮಾತನಾಡಿ, ‘ಕಿಟ್ವಿತರಣಾ ಕೇಂದ್ರದ ಹಿಂಭಾಗದಲ್ಲಿ ನಗರಸಭೆ ಸದಸ್ಯರೊಬ್ಬರು ಕೂಪನ್ಗಳನ್ನು ವಿತರಿಸುತ್ತಿದ್ದಾರೆ. ಕೂಪನ್ ಕೇಳಲು ಹೋದಾಗ ನಮ್ಮ ಸಂಘದ ಸದಸ್ಯರಿಗೆ ಮಾತ್ರ ಕೂಪನ್, ಉಳಿದವರು ಅಧಿಕಾರಿಗಳ ಬಳಿ ಪಡೆಯಿರಿ ಎಂದು ವಾಪಸ್ ಕಳುಹಿಸಿದರು’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಮಿಕ ಬೀರಪ್ಪ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 17,895 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಸರ್ಕಾರ ಕೇವಲ 5 ಸಾವಿರ<br />ಕಿಟ್ಗಳನ್ನು ವಿತರಿಸಿದೆ. ಯಾವ ಮಾನದಂಡದಲ್ಲಿ ಅಧಿಕಾರಿಗಳು ಕಿಟ್ಗಳನ್ನು ಹಂಚಿಕೆ ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ನಗರಸಭೆ ಸದಸ್ಯ ಆರ್.ಸಿ. ಜಾವೇದ್ ಮಾತನಾಡಿ, ‘ಪ್ರತಿ ವಾರ್ಡ್ನಲ್ಲಿ ಕಟ್ಟಡ ಕಾರ್ಮಿಕರಿದ್ದಾರೆ. ಇಲಾಖೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದೆ ಕಿಟ್ ಹಂಚುತ್ತಿರುವುದು ತಪ್ಪು. ಕಿಟ್ಗಳು ಬಡ ಕಾರ್ಮಿಕರ ಬದಲು ಪಟ್ಟಭದ್ರ ಹಿತಾಸಕ್ತಿಗಳ ಹಾಗೂ ಉಳ್ಳವರ ಪಾಲಾಗುತ್ತಿವೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಜನಪ್ರತಿನಿಧಿಗಳು, ಸಂಘ-ಸಂಸ್ಥೆ ಹಾಗೂ ಅಧಿಕಾರಿಗಳ ಪಾಲುದಾರಿಕೆಯಲ್ಲಿ ಬಡ ಕಾರ್ಮಿಕರ ಹೊಟ್ಟೆ ಸೇರಬೇಕಿದ್ದ ದಿನಸಿ ಸಾಮಗ್ರಿಗಳು ಪಟ್ಟಭದ್ರರ ಪಾಲಾಗಿರುವುದು ಬೇಸರ ಮೂಡಿಸಿದೆ ಎಂಬುದು ಕಾರ್ಮಿಕ ಅಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>