<p><strong>ದಾವಣಗೆರೆ:</strong>ಲಾಕ್ಡೌನ್ ವೇಳೆಯಲ್ಲಿ ಪರಿಸರದ ವಾತಾವರಣ ಸುಧಾರಿಸಿದೆ. ಈ ಮೂಲಕ ಜನರ ಒತ್ತಡ ಹಾಗೂ ವಾಹನಗಳ ಓಡಾಟದಿಂದ ಪರಿಸರದ ವಾತಾವರಣದಲ್ಲಿ ವ್ಯತ್ಯಾಸವಾಗುವುದು ಇದರಿಂದ ಕಂಡುಬಂದಿದೆ. ಪ್ರತಿಯೊಬ್ಬರೂ ಗಿಡ ಬೆಳೆಸಿ ಉಳಿಸುವ ಮೂಲಕ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹೇಳಿದರು.</p>.<p>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಮಹಾನಗರ ಪಾಲಿಕೆಯಿಂದ ವಿದ್ಯಾನಗರ ವಿನಾಯಕ ಬಡಾವಣೆಯ ಸೌಜನ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪರಿಸರ ದಿನಾಚರಣೆಯಂದು ಗಿಡ ನೆಡುವುದು ಮುಖ್ಯವಲ್ಲ. ಬದಲಾಗಿ ಗಿಡಗಳನ್ನು ಪೋಷಣೆ ಮಾಡುವುದು ಮುಖ್ಯ. ಈ ಬಾರಿ ಪಾಲಿಕೆಯೂ ನಗರದ ಎಲ್ಲಾ ವಾರ್ಡ್ ಹಾಗೂ ರಸ್ತೆ ಬದಿಗಳಲ್ಲಿ ಒಂದು ಲಕ್ಷ ಗಿಡ ಬೆಳೆಸುವ ತೀರ್ಮಾನ ಕೈಗೊಂಡಿದೆ. ಇದು ಸ್ವಾಗತಾರ್ಹ. ಗಿಡ ನೆಟ್ಟ ಬಳಿಕ ವಾರ್ಡ್ನ ಕಾರ್ಪೊರೇಟರ್ ಮತ್ತು ನಾಗರಿಕರು ಗಿಡಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಎಸ್.ಎ. ರವೀಂದ್ರನಾಥ್, ‘ಪರಿಸರದ ಉಳಿವಿಗೆ ಗಿಡಗಳನ್ನು ಸಂರಕ್ಷಣೆ ಮಾಡುವುದು ಮುಖ್ಯ. ಮಹಾನಗರ ಪಾಲಿಕೆಯಿಂದ ನೆಡಲಾಗುತ್ತಿರುವ 1 ಲಕ್ಷ ಗಿಡಗಳಲ್ಲಿ 50 ಸಾವಿರ ಗಿಡಗಳಾದರೂ ಉಳಿಯುವಂತೆ ನಾವು ನೋಡಿಕೊಳ್ಳಬೇಕು.ಅತಿ ಹೆಚ್ಚು ಗಿಡ ಮರ ಬೆಳೆಸುವ ಮೂಲಕ ಜಿಲ್ಲೆಯನ್ನು ಮಲೆನಾಡು ಪ್ರದೇಶವಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮೇಯರ್ ಬಿ.ಜಿ. ಅಜಯ್ ಕುಮಾರ್, ‘ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾವು ಒಂದು ವರ್ಷದ ಅವಧಿಯೊಳಗೆ ಒಂದು ಲಕ್ಷ ಗಿಡ ನೆಡುವ ಯೋಜನೆ ಹಮ್ಮಿಕೊಂಡಿದ್ದೇವೆ.ಮಾಜಿ ಶಾಸಕ ಪಂಪಾಪತಿ ಅವಧಿಯಲಿ ನಗರದಲ್ಲಿ 30 ಸಾವಿರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂದು ಆ ಗಿಡಗಳು ಹೆಮ್ಮರವಾಗಿವೆ. ಅದನ್ನು ಜನರು ಸ್ಮರಿಸುತ್ತಿದ್ದಾರೆ. ಅವರ ಕಾರ್ಯ ಸ್ಫೂರ್ತಿ’ ಎಂದರು.</p>.<p>ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಮ್ಮ ಗೋಪಿನಾಯ್ಕ್, ಗೌರಮ್ಮ, ಪ್ರಸನ್ನ ಕುಮಾರ್, ಸದಸ್ಯರಾದ ವೀಣಾ ನಂಜಣ್ಣನವರ್, ವೀರೇಶ್, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆಯ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong>ಲಾಕ್ಡೌನ್ ವೇಳೆಯಲ್ಲಿ ಪರಿಸರದ ವಾತಾವರಣ ಸುಧಾರಿಸಿದೆ. ಈ ಮೂಲಕ ಜನರ ಒತ್ತಡ ಹಾಗೂ ವಾಹನಗಳ ಓಡಾಟದಿಂದ ಪರಿಸರದ ವಾತಾವರಣದಲ್ಲಿ ವ್ಯತ್ಯಾಸವಾಗುವುದು ಇದರಿಂದ ಕಂಡುಬಂದಿದೆ. ಪ್ರತಿಯೊಬ್ಬರೂ ಗಿಡ ಬೆಳೆಸಿ ಉಳಿಸುವ ಮೂಲಕ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹೇಳಿದರು.</p>.<p>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಮಹಾನಗರ ಪಾಲಿಕೆಯಿಂದ ವಿದ್ಯಾನಗರ ವಿನಾಯಕ ಬಡಾವಣೆಯ ಸೌಜನ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪರಿಸರ ದಿನಾಚರಣೆಯಂದು ಗಿಡ ನೆಡುವುದು ಮುಖ್ಯವಲ್ಲ. ಬದಲಾಗಿ ಗಿಡಗಳನ್ನು ಪೋಷಣೆ ಮಾಡುವುದು ಮುಖ್ಯ. ಈ ಬಾರಿ ಪಾಲಿಕೆಯೂ ನಗರದ ಎಲ್ಲಾ ವಾರ್ಡ್ ಹಾಗೂ ರಸ್ತೆ ಬದಿಗಳಲ್ಲಿ ಒಂದು ಲಕ್ಷ ಗಿಡ ಬೆಳೆಸುವ ತೀರ್ಮಾನ ಕೈಗೊಂಡಿದೆ. ಇದು ಸ್ವಾಗತಾರ್ಹ. ಗಿಡ ನೆಟ್ಟ ಬಳಿಕ ವಾರ್ಡ್ನ ಕಾರ್ಪೊರೇಟರ್ ಮತ್ತು ನಾಗರಿಕರು ಗಿಡಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಎಸ್.ಎ. ರವೀಂದ್ರನಾಥ್, ‘ಪರಿಸರದ ಉಳಿವಿಗೆ ಗಿಡಗಳನ್ನು ಸಂರಕ್ಷಣೆ ಮಾಡುವುದು ಮುಖ್ಯ. ಮಹಾನಗರ ಪಾಲಿಕೆಯಿಂದ ನೆಡಲಾಗುತ್ತಿರುವ 1 ಲಕ್ಷ ಗಿಡಗಳಲ್ಲಿ 50 ಸಾವಿರ ಗಿಡಗಳಾದರೂ ಉಳಿಯುವಂತೆ ನಾವು ನೋಡಿಕೊಳ್ಳಬೇಕು.ಅತಿ ಹೆಚ್ಚು ಗಿಡ ಮರ ಬೆಳೆಸುವ ಮೂಲಕ ಜಿಲ್ಲೆಯನ್ನು ಮಲೆನಾಡು ಪ್ರದೇಶವಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮೇಯರ್ ಬಿ.ಜಿ. ಅಜಯ್ ಕುಮಾರ್, ‘ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾವು ಒಂದು ವರ್ಷದ ಅವಧಿಯೊಳಗೆ ಒಂದು ಲಕ್ಷ ಗಿಡ ನೆಡುವ ಯೋಜನೆ ಹಮ್ಮಿಕೊಂಡಿದ್ದೇವೆ.ಮಾಜಿ ಶಾಸಕ ಪಂಪಾಪತಿ ಅವಧಿಯಲಿ ನಗರದಲ್ಲಿ 30 ಸಾವಿರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂದು ಆ ಗಿಡಗಳು ಹೆಮ್ಮರವಾಗಿವೆ. ಅದನ್ನು ಜನರು ಸ್ಮರಿಸುತ್ತಿದ್ದಾರೆ. ಅವರ ಕಾರ್ಯ ಸ್ಫೂರ್ತಿ’ ಎಂದರು.</p>.<p>ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಮ್ಮ ಗೋಪಿನಾಯ್ಕ್, ಗೌರಮ್ಮ, ಪ್ರಸನ್ನ ಕುಮಾರ್, ಸದಸ್ಯರಾದ ವೀಣಾ ನಂಜಣ್ಣನವರ್, ವೀರೇಶ್, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆಯ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>