<p><strong>ದಾವಣಗೆರೆ</strong>: ಹೆಚ್ಚು ಮಕ್ಕಳನ್ನು ಹೆರುವುದು ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಇಬ್ಬರು ಮಕ್ಕಳಿಗೆ ಸೀಮಿತವಾಗುವುದು ಸೂಕ್ತ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಪಟಗಿ ಸಲಹೆ ನೀಡಿದರು.</p>.<p>ಇಲ್ಲಿನ ಬಾಷ ನಗರದ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕುಟುಂಬ ಚಿಕ್ಕದಾಗಿ ಇದ್ದಷ್ಟು ಸುಖಿಯಾಗಿರಲು ಸಾಧ್ಯ. ಪ್ರತಿ ಸಮುದಾಯದಲ್ಲಿ ಭಿನ್ನ ಸಂಪ್ರದಾಯಗಳಿವೆ. ಚಿಕ್ಕ ವಯಸ್ಸಿಗೆ ಮದುವೆ ಮಾಡಬಾರದು. ಮದುವೆಯಾದ ಬಳಿಕ ಎರಡು ವರ್ಷ ಮಕ್ಕಳಾಗದಂತೆ ನೋಡಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ’ ಎಂದು ಹೇಳಿದರು.</p>.<p>ವೈದ್ಯ ಡಾ. ಎನ್.ಎಸ್.ಸುಧೀಂದ್ರ, ವೈದ್ಯಾಧಿಕಾರಿ ಡಾ. ಎನ್.ರೇಖಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಉಮಾಪತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟಾಚಲಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಹೆಚ್ಚು ಮಕ್ಕಳನ್ನು ಹೆರುವುದು ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಇಬ್ಬರು ಮಕ್ಕಳಿಗೆ ಸೀಮಿತವಾಗುವುದು ಸೂಕ್ತ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಪಟಗಿ ಸಲಹೆ ನೀಡಿದರು.</p>.<p>ಇಲ್ಲಿನ ಬಾಷ ನಗರದ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕುಟುಂಬ ಚಿಕ್ಕದಾಗಿ ಇದ್ದಷ್ಟು ಸುಖಿಯಾಗಿರಲು ಸಾಧ್ಯ. ಪ್ರತಿ ಸಮುದಾಯದಲ್ಲಿ ಭಿನ್ನ ಸಂಪ್ರದಾಯಗಳಿವೆ. ಚಿಕ್ಕ ವಯಸ್ಸಿಗೆ ಮದುವೆ ಮಾಡಬಾರದು. ಮದುವೆಯಾದ ಬಳಿಕ ಎರಡು ವರ್ಷ ಮಕ್ಕಳಾಗದಂತೆ ನೋಡಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ’ ಎಂದು ಹೇಳಿದರು.</p>.<p>ವೈದ್ಯ ಡಾ. ಎನ್.ಎಸ್.ಸುಧೀಂದ್ರ, ವೈದ್ಯಾಧಿಕಾರಿ ಡಾ. ಎನ್.ರೇಖಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಉಮಾಪತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟಾಚಲಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>