ಅಲಂಕೃತ ಆನೆ, ಎತ್ತು, ಡೊಳ್ಳು, ತಮಟೆ, ಸೇರಿ ವಿವಿಧ ಮಂಗಳವಾದ್ಯ, ಕಲಾ ತಂಡಗಳು ಹಾಗೂ ಮುತ್ತೈದೆಯರ ಪೂರ್ಣಕುಂಭ ಮೇಳವು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತ್ತು. ಶಾಸಕ ಎಸ್. ರಾಮಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್, ಎಚ್.ಎಸ್. ಶಿವಶಂಕರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ವೀರೇಶ್, ನಗರಸಭೆ ಅಧ್ಯಕ್ಷೆ ಶಾಹಿನಾ ದಾದಾಪೀರ್, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ನಗರಸಭಾ ಸದಸ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.