ಮೂರು ದಿವಸಗಳ ಈ ಪಂದ್ಯದಲ್ಲಿ 250ಕ್ಕೂ ಹೆಚ್ಚು ಜೋಡಿಗಳು ತಮ್ಮ ಶಕ್ತಿ ಪ್ರದರ್ಶಿದವು. ₹ 15 ಲಕ್ಷ
ದಷ್ಟು ನಗದು ಬಹುಮಾನ ನೀಡಲಾಯಿತು. ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಂ.ಪಿ.ರೇಣುಕಾಚಾರ್ಯ ಹಾಗೂ ಉದ್ಯಮಿ ಅಥಣಿ ವೀರಣ್ಣ ಪೈಲ್ವಾನರನ್ನು ಪ್ರೋತ್ಸಾಹಿಸಿದರು. ಕುಸ್ತಿ ಸಮಿತಿ ಅಧ್ಯಕ್ಷ ಎಚ್.ಬಿ. ಗೋಣೆಪ್ಪ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಗೌಡ್ರ ಚನ್ನಬಸಪ್ಪ, ಪಾಲಿಕೆ ಸದಸ್ಯ ಸೋಗಿ ಶಿವಕುಮಾರ್ ಇದ್ದರು. ಕೆ.ಎಂ. ವೀರೇಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಪಾಲ್ಗೊಂಡಿದ್ದರು.