<p><strong>ಚನ್ನಗಿರಿ:</strong> ನಗರ ದೇವತೆ ಕುಕ್ಕವಾಡ ಅಂಬಾಭವಾನಿ ಮಹಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಕ್ಷತ್ರಿಯ ಮರಾಠ ಸಮಾಜದ ಸಹಯೋಗದಲ್ಲಿ ಬಯಲು ಜಂಗೀ ಕುಸ್ತಿ ಪಂದ್ಯಾವಳಿ ಬುಧವಾರ ಆರಂಭಗೊಂಡಿತು.</p>.<p>ಪಟ್ಟಣದ ಕುಕ್ಕವಾಡ ಅಂಬಾಭವಾನಿ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ತಾಲ್ಲೂಕು ಕ್ರೀಡಾಂಗಣಕ್ಕೆ ತರಲಾಯಿತು. ನಂತರ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಬಿ. ವೀರಣ್ಣ ಹಾಗೂ ರಾಜ್ಯ ಕುಸ್ತಿ ಸಂಸ್ಥೆ ಜಂಟಿ ಕಾರ್ಯದರ್ಶಿ ಓಂಕಾರ್ ನೇತೃತ್ವದಲ್ಲಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಲಾಯಿತು.</p>.<p>ಮೊದಲನೇ ದಿನವಾದ ಬುಧವಾರ ಹರಿಹರ, ದಾವಣಗೆರೆ, ಜಗಳೂರು, ಹೊನ್ನಾಳಿ, ಹರಪನಹಳ್ಳಿ ತಾಲ್ಲೂಕುಗಳಿಂದ ಜಟ್ಟಿಗಳು ಬಂದಿದ್ದರು. ಗೆದ್ದ ಕುಸ್ತಿಪಟುಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಡಿ. 19 ಮತ್ತು 20 ರಂದು ಹರಿಯಾಣ, ಬೆಳಗಾವಿ, ಧಾರಾವಾಡ, ಹುಬ್ಬಳ್ಳಿ ಮುಂತಾದ ಕಡೆಗಳಿಂದ ಕುಸ್ತಿಪಟುಗಳು ಭಾಗವಹಿಸಲಿದ್ದಾರೆ.</p>.<p>ಪುರಸಭೆ ಸದಸ್ಯರಾದ ಬಿ.ಆರ್. ಹಾಲೇಶ್, ಜಿ. ನಿಂಗಪ್ಪ, ಕುಸ್ತಿಪಟುಗಳಾದ ನಾಗರಾಜ್, ಹನುಮಂತಪ್ಪ, ಕರಡೇರ್ ರಾಮಣ್ಣ, ರಾಜು ಕರಡೇರ್, ಚಿಕ್ಕಪ್ಪ, ಕೆ.ಆರ್. ಗೋಪಿ, ಸಿ.ಎಚ್. ಶ್ರೀನಿವಾಸ್, ಕುಸ್ತಿ ಸಮಿತಿ ಅಧ್ಯಕ್ಷ ಶಿವಾಜಿರಾವ್, ಜಾತ್ರಾ ಸಮಿತಿ ಅಧ್ಯಕ್ಷ ಮಂಜುನಾಥ್ ಜಾಧವ್, ನಿಂಗೋಜಿರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ನಗರ ದೇವತೆ ಕುಕ್ಕವಾಡ ಅಂಬಾಭವಾನಿ ಮಹಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಕ್ಷತ್ರಿಯ ಮರಾಠ ಸಮಾಜದ ಸಹಯೋಗದಲ್ಲಿ ಬಯಲು ಜಂಗೀ ಕುಸ್ತಿ ಪಂದ್ಯಾವಳಿ ಬುಧವಾರ ಆರಂಭಗೊಂಡಿತು.</p>.<p>ಪಟ್ಟಣದ ಕುಕ್ಕವಾಡ ಅಂಬಾಭವಾನಿ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ತಾಲ್ಲೂಕು ಕ್ರೀಡಾಂಗಣಕ್ಕೆ ತರಲಾಯಿತು. ನಂತರ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಬಿ. ವೀರಣ್ಣ ಹಾಗೂ ರಾಜ್ಯ ಕುಸ್ತಿ ಸಂಸ್ಥೆ ಜಂಟಿ ಕಾರ್ಯದರ್ಶಿ ಓಂಕಾರ್ ನೇತೃತ್ವದಲ್ಲಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಲಾಯಿತು.</p>.<p>ಮೊದಲನೇ ದಿನವಾದ ಬುಧವಾರ ಹರಿಹರ, ದಾವಣಗೆರೆ, ಜಗಳೂರು, ಹೊನ್ನಾಳಿ, ಹರಪನಹಳ್ಳಿ ತಾಲ್ಲೂಕುಗಳಿಂದ ಜಟ್ಟಿಗಳು ಬಂದಿದ್ದರು. ಗೆದ್ದ ಕುಸ್ತಿಪಟುಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಡಿ. 19 ಮತ್ತು 20 ರಂದು ಹರಿಯಾಣ, ಬೆಳಗಾವಿ, ಧಾರಾವಾಡ, ಹುಬ್ಬಳ್ಳಿ ಮುಂತಾದ ಕಡೆಗಳಿಂದ ಕುಸ್ತಿಪಟುಗಳು ಭಾಗವಹಿಸಲಿದ್ದಾರೆ.</p>.<p>ಪುರಸಭೆ ಸದಸ್ಯರಾದ ಬಿ.ಆರ್. ಹಾಲೇಶ್, ಜಿ. ನಿಂಗಪ್ಪ, ಕುಸ್ತಿಪಟುಗಳಾದ ನಾಗರಾಜ್, ಹನುಮಂತಪ್ಪ, ಕರಡೇರ್ ರಾಮಣ್ಣ, ರಾಜು ಕರಡೇರ್, ಚಿಕ್ಕಪ್ಪ, ಕೆ.ಆರ್. ಗೋಪಿ, ಸಿ.ಎಚ್. ಶ್ರೀನಿವಾಸ್, ಕುಸ್ತಿ ಸಮಿತಿ ಅಧ್ಯಕ್ಷ ಶಿವಾಜಿರಾವ್, ಜಾತ್ರಾ ಸಮಿತಿ ಅಧ್ಯಕ್ಷ ಮಂಜುನಾಥ್ ಜಾಧವ್, ನಿಂಗೋಜಿರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>