‘ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ. ರಸ್ತೆ ಬದಿ ಚರಂಡಿ ನಿರ್ಮಾಣ ಪೂರ್ಣಗೊಳಿಸಿಲ್ಲ. ರಸ್ತೆಯ ಒಂದು ಪಥಕ್ಕೆ ಕಾಂಕ್ರೀಟ್ ಹಾಕಲಾಗಿದೆ. ಇನ್ನೊಂದು ಪಥಕ್ಕೆ ಕಾಂಕ್ರೀಟ್ ಹಾಕದೆ ಹಾಗೆಯೇ ಬಿಡಲಾಗಿದೆ. ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ಇದು ಅಪಾಯಕಾರಿಯಾಗಿ ಪರಿಣಮಿಸಿದೆ. ಎದುರಿಗೆ ಬರುವ ವಾಹನಗಳಿಗೆ ದಾರಿ ಬಿಡುವ ವೇಳೆ, ಸವಾರರು ರಸ್ತೆಯ ಬದಿಗೆ ಬೈಕ್ ಚಲಾಯಿಸಿ ಆಯತಪ್ಪಿ ಬಿದ್ದ ಉದಾಹರಣೆಗಳೂ ಇವೆ. ಈಚೆಗೆ ವಾಸನ ಗ್ರಾಮದ ಯುವಕ ಚಂದ್ರು ಎಂಬುವರು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ನಿದರ್ಶನವಿದೆ.