<p><strong>ಹರಿಹರ</strong>: ‘ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ’ ಎಂದು ತಾಲ್ಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿಯ ಕಾರ್ಣಿಕವಾಯಿತು.</p>.<p>ನಗರದ ತುಂಗಭದ್ರಾ ನದಿಯ ದಡದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಾಗಪಂಚಮಿ ನಿಮಿತ್ತ ತಾಲೂಕಿನ ಯಲವಟ್ಟಿ ಗ್ರಾಮದ ಆಂಜನೇಯ ಸ್ವಾಮಿಯ ಕಾರ್ಣಿಕ ನುಡಿಯುವುದು ಪ್ರತಿವರ್ಷದ ಪ್ರತೀತಿಯಾಗಿದೆ.</p>.<p>ಪೂಜಾರಪ್ಪ ಕಾರ್ಣಿಕ ನುಡಿ ನುಡಿಯುತ್ತಿದ್ದಂತೆ ಅಲ್ಲಿದ್ದ ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರೆ ಇನ್ನು ಹಲವರು ತಮ್ಮರಿಗೆ ಪೋನ್ ಮಾಡಿ ಕಾರ್ಣಿಕ ಆರ್ಥದ ವಿನಿಯಮ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು.</p><p><br>ಹರಿಹರ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕಿನ ಹಲವು ಗ್ರಾಮಗಳ ವಿವಿಧ ದೇವತಾ ಮೂರ್ತಿಗಳು ತುಂಗಭದ್ರ ನದಿಯಲ್ಲಿ ಪೂಜೆ ಸಲ್ಲಿಸಿ ನಂತರ ನದಿಯ ದಡದಲ್ಲಿರುವ ಸಂಗಮೇಶ್ವರ ದೇವಸ್ಥಾನ ಅವರಣದಲ್ಲಿ ಸೇರುತ್ತವೆ.</p><p><br>ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಕಾರ್ಣಿಕ ಮುಗಿದ ನಂತರ ಗೋವಿಂದಾ, ಗೋವಿಂದಾ ಎನ್ನುತ್ತಾ ಜಯ ಘೋಷ ಹಾಕಿದರು. <br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ‘ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ’ ಎಂದು ತಾಲ್ಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿಯ ಕಾರ್ಣಿಕವಾಯಿತು.</p>.<p>ನಗರದ ತುಂಗಭದ್ರಾ ನದಿಯ ದಡದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಾಗಪಂಚಮಿ ನಿಮಿತ್ತ ತಾಲೂಕಿನ ಯಲವಟ್ಟಿ ಗ್ರಾಮದ ಆಂಜನೇಯ ಸ್ವಾಮಿಯ ಕಾರ್ಣಿಕ ನುಡಿಯುವುದು ಪ್ರತಿವರ್ಷದ ಪ್ರತೀತಿಯಾಗಿದೆ.</p>.<p>ಪೂಜಾರಪ್ಪ ಕಾರ್ಣಿಕ ನುಡಿ ನುಡಿಯುತ್ತಿದ್ದಂತೆ ಅಲ್ಲಿದ್ದ ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರೆ ಇನ್ನು ಹಲವರು ತಮ್ಮರಿಗೆ ಪೋನ್ ಮಾಡಿ ಕಾರ್ಣಿಕ ಆರ್ಥದ ವಿನಿಯಮ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು.</p><p><br>ಹರಿಹರ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕಿನ ಹಲವು ಗ್ರಾಮಗಳ ವಿವಿಧ ದೇವತಾ ಮೂರ್ತಿಗಳು ತುಂಗಭದ್ರ ನದಿಯಲ್ಲಿ ಪೂಜೆ ಸಲ್ಲಿಸಿ ನಂತರ ನದಿಯ ದಡದಲ್ಲಿರುವ ಸಂಗಮೇಶ್ವರ ದೇವಸ್ಥಾನ ಅವರಣದಲ್ಲಿ ಸೇರುತ್ತವೆ.</p><p><br>ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಕಾರ್ಣಿಕ ಮುಗಿದ ನಂತರ ಗೋವಿಂದಾ, ಗೋವಿಂದಾ ಎನ್ನುತ್ತಾ ಜಯ ಘೋಷ ಹಾಕಿದರು. <br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>