<p><strong>ದಾವಣಗೆರೆ:</strong> ಮೇಯರ್ ಚುನಾವಣೆಯಲ್ಲಿ ಪಾಲ್ಗೊಳ್ಳದ 20ನೇ ವಾರ್ಡ್ನ ಪಾಲಿಕೆ ಸದಸ್ಯೆ ಯಶೋದಾ ಉಮೇಶ್ ರಾಜೀನಾಮೆ ನೀಡಬೇಕು ಎಂದು ವಾರ್ಡ್ 20ರ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾರ್ಡ್ 20ರ ಕಾಂಗ್ರೆಸ್ ಅಧ್ಯಕ್ಷ ಶಂಕರ್, ‘ಯಶೋದಾ ಅವರು ಚುನಾವಣೆಗೆ ಗೈರಾಗಿ ಅವರನ್ನು ಗೆಲ್ಲಿಸಿದ ವಾರ್ಡ್ ಜನರಿಗೆ ಮೋಸ ಮಾಡಿದ್ದಾರೆ. ಯಾವುದೋ ಆಮಿಷಕ್ಕೆ ಬಲಿಯಾಗಿ ಅವರು ಬಿಜೆಪಿಗೆ ಅನುಕೂಲವಾಗುವಂತೆ ಮಾಡಿದ್ದಾರೆ. ಅವರ ವರ್ತನೆಯಿಂದ ಈ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಾರ್ಡ್ ಜನರಿಗೆ ಮೋಸ ಮಾಡಿದ್ದಾರೆ ಅವರು ಕೂಡಲೇ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಅವರು ರಾಜೀನಾಮೆ ನೀಡುವವರೆಗೂ ಉಗ್ರ ಹೋರಾಟ ನಡೆಸುತ್ತೇವೆ. ಅಂತಹವರಿಗೆ ನಾಯಕರು ಮನ್ನಣೆ ನೀಡದೆ ನಿಷ್ಟಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದು ಮುಖಂಡರಾದ ಸಿ. ನಟರಾಜ್, ಅಲೆಕ್ಸಾಂಡರ್ ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಕೆ. ಶಿವಕುಮಾರ್, ಆರ್. ರಂಗನಾಥ್, ಸಾವಿತ್ರಮ್ಮ ಇದ್ದರು.</p>.<p class="Subhead"><strong>ಯಶೋದಾ ವಿರುದ್ಧ ಆಕ್ರೋಶ:</strong>ಮೇಯರ್ ಚುನಾವಣೆಯಲ್ಲಿ ಪಾಲ್ಗೊಳ್ಳದಯಶೋದಾ ಉಮೇಶ್ ವರ್ತನೆ ಖಂಡಿಸಿ ಬುಧವಾರ ಭಾರತ್ ಕಾಲೊನಿಯ ಜನರು ಯಶೋದಾ ಹಾಗೂ ಅವರ ಪತಿ ಉಮೇಶ್ ಅವರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಾರ್ಡ್ ಜನರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರಿಗೂ ಶ್ರದ್ಧಾಂಜಲಿ ಎಂಬ ಭಾವಚಿತ್ರ ಹಾಕಿ ಆಕ್ರೋಶ ಹೊರಹಾಕಿದರು. ಕೆಲವರು ಅವರು ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾದಾಗ ಸ್ಥಳೀಯರು ತಡೆದು ಮನವೊಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮೇಯರ್ ಚುನಾವಣೆಯಲ್ಲಿ ಪಾಲ್ಗೊಳ್ಳದ 20ನೇ ವಾರ್ಡ್ನ ಪಾಲಿಕೆ ಸದಸ್ಯೆ ಯಶೋದಾ ಉಮೇಶ್ ರಾಜೀನಾಮೆ ನೀಡಬೇಕು ಎಂದು ವಾರ್ಡ್ 20ರ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾರ್ಡ್ 20ರ ಕಾಂಗ್ರೆಸ್ ಅಧ್ಯಕ್ಷ ಶಂಕರ್, ‘ಯಶೋದಾ ಅವರು ಚುನಾವಣೆಗೆ ಗೈರಾಗಿ ಅವರನ್ನು ಗೆಲ್ಲಿಸಿದ ವಾರ್ಡ್ ಜನರಿಗೆ ಮೋಸ ಮಾಡಿದ್ದಾರೆ. ಯಾವುದೋ ಆಮಿಷಕ್ಕೆ ಬಲಿಯಾಗಿ ಅವರು ಬಿಜೆಪಿಗೆ ಅನುಕೂಲವಾಗುವಂತೆ ಮಾಡಿದ್ದಾರೆ. ಅವರ ವರ್ತನೆಯಿಂದ ಈ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಾರ್ಡ್ ಜನರಿಗೆ ಮೋಸ ಮಾಡಿದ್ದಾರೆ ಅವರು ಕೂಡಲೇ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಅವರು ರಾಜೀನಾಮೆ ನೀಡುವವರೆಗೂ ಉಗ್ರ ಹೋರಾಟ ನಡೆಸುತ್ತೇವೆ. ಅಂತಹವರಿಗೆ ನಾಯಕರು ಮನ್ನಣೆ ನೀಡದೆ ನಿಷ್ಟಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದು ಮುಖಂಡರಾದ ಸಿ. ನಟರಾಜ್, ಅಲೆಕ್ಸಾಂಡರ್ ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಕೆ. ಶಿವಕುಮಾರ್, ಆರ್. ರಂಗನಾಥ್, ಸಾವಿತ್ರಮ್ಮ ಇದ್ದರು.</p>.<p class="Subhead"><strong>ಯಶೋದಾ ವಿರುದ್ಧ ಆಕ್ರೋಶ:</strong>ಮೇಯರ್ ಚುನಾವಣೆಯಲ್ಲಿ ಪಾಲ್ಗೊಳ್ಳದಯಶೋದಾ ಉಮೇಶ್ ವರ್ತನೆ ಖಂಡಿಸಿ ಬುಧವಾರ ಭಾರತ್ ಕಾಲೊನಿಯ ಜನರು ಯಶೋದಾ ಹಾಗೂ ಅವರ ಪತಿ ಉಮೇಶ್ ಅವರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಾರ್ಡ್ ಜನರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರಿಗೂ ಶ್ರದ್ಧಾಂಜಲಿ ಎಂಬ ಭಾವಚಿತ್ರ ಹಾಕಿ ಆಕ್ರೋಶ ಹೊರಹಾಕಿದರು. ಕೆಲವರು ಅವರು ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾದಾಗ ಸ್ಥಳೀಯರು ತಡೆದು ಮನವೊಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>