<p><strong>ದಾವಣಗೆರೆ:</strong> ರಂಗಕರ್ಮಿ, ಹಾಸ್ಯ ಕಲಾವಿದ ಯಶವಂತ ಸರದೇಶಪಾಂಡೆ ಅವರಿಗೂ ದಾವಣಗೆರೆಗೂ ಅವಿನಾಭಾವ ಸಂಬಂಧವಿತ್ತು. ನಗರದ ವೃತ್ತಿ ರಂಗಭೂಮಿ ರಂಗಾಯಣದ ಮೊದಲ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಸರದೇಶಪಾಂಡೆ ಅವರು ಹೃದಯಾಘಾತದಿಂದ ನಿಧನರಾದ ಮಾಹಿತಿ ತಿಳಿಯುತ್ತಿದ್ದಂತೆ ಮಧ್ಯ ಕರ್ನಾಟಕದ ರಂಗಭೂಮಿ ಕಲಾವಿದರು ದುಃಖಿತರಾದರು. ರಂಗಭೂಮಿಯ ನಂಟನ್ನು ಮೆಲುಕು ಹಾಕಿದರು.</p>.<p>ವೃತ್ತಿ ರಂಗಭೂಮಿ ರಂಗಾಯಣದ ಕಚೇರಿಯನ್ನು ಚಿಂದೋಡಿ ಲೀಲಾ ಕಲಾ ಕ್ಷೇತ್ರದಲ್ಲಿ ತೆರೆದಿದ್ದರು. 2020ರಿಂದ 2023ರವರೆಗೆ ನಿರ್ದೇಶಕರಾಗಿದ್ದರು. ರಂಗಾಯಣಕ್ಕೆ ಚೌಕಟ್ಟು ರೂಪಿಸಲು ಪ್ರಯತ್ನಿಸಿದರು.</p>.<p>‘ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ‘ಪ್ರತಿಮಾ ಸಭಾ’ದ ಒಡಗೂಡಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಅವರ ನಿಧನದಿಂದ ರಂಗಭೂಮಿಗೆ ದೊಡ್ಡ ನಷ್ಟ ಉಂಟಾಗಿದೆ’ ಎಂದು ಪ್ರತಿಮಾ ಸಭಾ ಅಧ್ಯಕ್ಷ ಬಾ.ಮ. ಬಸವರಾಜಯ್ಯ ನೆನಪಿಸಿಕೊಂಡರು.</p>.<p>ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಜುಲೈ 5ರಂದು ನಡೆದ ‘ಅಮರ ಮಧುರ ಪ್ರೇಮ’ದಲ್ಲಿ ಯಶವಂತ ಸರದೇಶಪಾಂಡೆ ಬಣ್ಣ ಹಚ್ಚಿದ್ದರು.</p>.<div><blockquote>ಯಶವಂತ ಸರದೇಶಪಾಂಡೆ ಹಾಸ್ಯ ನಾಟಕಗಳ ಮೂಲಕ ಗಮನ ಸೆಳೆದಿದ್ದರು. ವೃತ್ತಿ ರಂಗಭೂಮಿ ರಂಗಾಯಣದ ಮೊದಲ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ </blockquote><span class="attribution">ಮಲ್ಲಿಕಾರ್ಜುನ ಕಡಕೋಳ ನಿರ್ದೇಶಕ ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ರಂಗಕರ್ಮಿ, ಹಾಸ್ಯ ಕಲಾವಿದ ಯಶವಂತ ಸರದೇಶಪಾಂಡೆ ಅವರಿಗೂ ದಾವಣಗೆರೆಗೂ ಅವಿನಾಭಾವ ಸಂಬಂಧವಿತ್ತು. ನಗರದ ವೃತ್ತಿ ರಂಗಭೂಮಿ ರಂಗಾಯಣದ ಮೊದಲ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಸರದೇಶಪಾಂಡೆ ಅವರು ಹೃದಯಾಘಾತದಿಂದ ನಿಧನರಾದ ಮಾಹಿತಿ ತಿಳಿಯುತ್ತಿದ್ದಂತೆ ಮಧ್ಯ ಕರ್ನಾಟಕದ ರಂಗಭೂಮಿ ಕಲಾವಿದರು ದುಃಖಿತರಾದರು. ರಂಗಭೂಮಿಯ ನಂಟನ್ನು ಮೆಲುಕು ಹಾಕಿದರು.</p>.<p>ವೃತ್ತಿ ರಂಗಭೂಮಿ ರಂಗಾಯಣದ ಕಚೇರಿಯನ್ನು ಚಿಂದೋಡಿ ಲೀಲಾ ಕಲಾ ಕ್ಷೇತ್ರದಲ್ಲಿ ತೆರೆದಿದ್ದರು. 2020ರಿಂದ 2023ರವರೆಗೆ ನಿರ್ದೇಶಕರಾಗಿದ್ದರು. ರಂಗಾಯಣಕ್ಕೆ ಚೌಕಟ್ಟು ರೂಪಿಸಲು ಪ್ರಯತ್ನಿಸಿದರು.</p>.<p>‘ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ‘ಪ್ರತಿಮಾ ಸಭಾ’ದ ಒಡಗೂಡಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಅವರ ನಿಧನದಿಂದ ರಂಗಭೂಮಿಗೆ ದೊಡ್ಡ ನಷ್ಟ ಉಂಟಾಗಿದೆ’ ಎಂದು ಪ್ರತಿಮಾ ಸಭಾ ಅಧ್ಯಕ್ಷ ಬಾ.ಮ. ಬಸವರಾಜಯ್ಯ ನೆನಪಿಸಿಕೊಂಡರು.</p>.<p>ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಜುಲೈ 5ರಂದು ನಡೆದ ‘ಅಮರ ಮಧುರ ಪ್ರೇಮ’ದಲ್ಲಿ ಯಶವಂತ ಸರದೇಶಪಾಂಡೆ ಬಣ್ಣ ಹಚ್ಚಿದ್ದರು.</p>.<div><blockquote>ಯಶವಂತ ಸರದೇಶಪಾಂಡೆ ಹಾಸ್ಯ ನಾಟಕಗಳ ಮೂಲಕ ಗಮನ ಸೆಳೆದಿದ್ದರು. ವೃತ್ತಿ ರಂಗಭೂಮಿ ರಂಗಾಯಣದ ಮೊದಲ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ </blockquote><span class="attribution">ಮಲ್ಲಿಕಾರ್ಜುನ ಕಡಕೋಳ ನಿರ್ದೇಶಕ ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>