ದಾವಣಗೆರೆ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಪಕ್ಷ ಒಂದು ಕುಟುಂಬವಿದ್ದಂತೆ. ಸಣ್ಣಪುಟ್ಟ ಸಮಸ್ಯೆಗಳು ಇದ್ದಿದ್ದೇ. ಅವುಗಳನ್ನೆಲ್ಲ ಸರಿಪಡಿಸಿಕೊಳ್ಳುತ್ತೇವೆ. ಮುಂದಿನ ಎರಡು ವರ್ಷ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ವಿಶ್ವನಾಥ್ ಅವರಲ್ಲಿ ದಾಖಲೆಗಳಿದ್ದರೆ ನೀಡಲಿ. ಎಂಎಲ್ಸಿ ನಾಮನಿರ್ದೇಶನ ಆದವರಿಗೆ ಸಚಿವಸ್ಥಾನ ನೀಡಲು ಬರುವುದಿಲ್ಲ. ವಿಶ್ವನಾಥ್ ಕೂಡ ನಮ್ಮ ನಾಯಕರೇ ಆಗಿದ್ದಾರೆ. ಮುಂದೆ ನೋಡೋಣ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.