‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಯಾರೋ ಒಬ್ಬರ ಅಪಸ್ವರದ ಮಾತಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ. ಅತ್ಯಂತ ಕಷ್ಟಕಾಲದಲ್ಲಿ ಸರ್ಕಾರವನ್ನು ಮುನ್ನಡೆಸಿದ ಯಡಿಯೂರಪ್ಪ ಅವರು ಕೆಲವು ವ್ಯಕ್ತಿಗಳ ಮಾತುಗಳಿಂದ ನೊಂದು, ಹೈಕಮಾಂಡ್ ಬಯಸಿದರೆ ಸ್ಥಾನ ತ್ಯಜಿಸುವುದಾಗಿ ಹೇಳಿರಬಹುದು. ಪಕ್ಷ ಹಾಗೂ ಹೈಕಮಾಂಡ್ ಅವರ ಬೆಂಬಲಕ್ಕಿದೆ’ ಎಂದರು.