ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಪ್ರಶ್ನಾತೀತ ನಾಯಕ ಬದಲಾವಣೆ ಪ್ರಶ್ನೆಯೇ ಇಲ್ಲ: ಶಾಸಕ ಎಸ್‌.ಎ.ರಾಮಚಂದ್ರ

Last Updated 8 ಜೂನ್ 2021, 3:33 IST
ಅಕ್ಷರ ಗಾತ್ರ

ಜಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ಬಿಜೆಪಿಯ ಎಲ್ಲಾ ಶಾಸಕರ ಬೆಂಬಲ ಅವರಿಗೆ ಇದೆ ಎಂದು ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಯಾರೋ ಒಬ್ಬರ ಅಪಸ್ವರದ ಮಾತಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ. ಅತ್ಯಂತ ಕಷ್ಟಕಾಲದಲ್ಲಿ ಸರ್ಕಾರವನ್ನು ಮುನ್ನಡೆಸಿದ ಯಡಿಯೂರಪ್ಪ ಅವರು ಕೆಲವು ವ್ಯಕ್ತಿಗಳ ಮಾತುಗಳಿಂದ ನೊಂದು, ಹೈಕಮಾಂಡ್‌ ಬಯಸಿದರೆ ಸ್ಥಾನ ತ್ಯಜಿಸುವುದಾಗಿ ಹೇಳಿರಬಹುದು. ಪಕ್ಷ ಹಾಗೂ ಹೈಕಮಾಂಡ್ ಅವರ ಬೆಂಬಲಕ್ಕಿದೆ’ ಎಂದರು.

‘ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹಲವು ಶಾಸಕರು ಸಹಿ ಮಾಡಿದ್ದು, ನಾನೂ ಸಹಿ ಮಾಡಿದ್ದೇನೆ. ಯಡಿಯೂರಪ್ಪ ಅವರಿಗೆ ಪರ್ಯಾಯ ಯಾರೂ ಇಲ್ಲ. ಮುಂದಿನ ದಿನಗಳಲ್ಲೂ ಒಳ್ಳೆಯ ಆಡಳಿತ ನೀಡುವ ಮೂಲಕ ಅವರ ನೇತೃತ್ವದಲ್ಲೇ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲಾಗುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT