ಕೋಪಗೊಂಡ ಯುವತಿ ಬಕೆಟ್ನಲ್ಲಿ ಸೀಮೆಎಣ್ಣೆ ತುಂಬಿಕೊಂಡು ಪರಸಪ್ಪ ಅವರ ಮೇಲೆ ಎರಚಿ, ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಉರಿ ತಾಳಲಾರದೆ ಪರಸಪ್ಪ ಪಕ್ಕದ ಹುಲ್ಲಿನ ಬಣವೆಗೆ ಮೈ ಉಜ್ಜಿದ್ದು, ಬಣವೆ ಕೂಡ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.