ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮಂಜುನಾಥ ಮತ್ತು ಹರ್ಷ ಎಂಬಿಬ್ಬರು ಮುಂಬೈನ ಇಬ್ಬರು ಯುವತಿಯರನ್ನು ಇವೆಂಟ್ ಮ್ಯಾನೇಜ್ಮೆಂಟ್ ಎಂದು ಕರೆಸಿ ದಾವಣಗೆರೆಗೆ ಕರೆದುಕೊಂಡು ಬಂದಿದ್ದರು. ಯುವತಿಯರಿಗೆ ನೀಡಬೇಕಾದ ಹಣವನ್ನು ಕೊಡದೇ ಇದ್ದಿದ್ದರಿಂದ ಅವರ ನಡುವೆ ಜಗಳ ಉಂಟಾಗಿದೆ. ಈ ಬಗ್ಗೆ ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಕುಡಿತದ ಮತ್ತಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ
ನಡೆಸಿದ್ದರು.