ಹೊನ್ನಾಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು.ಡ್ರಗ್ಸ್ ವಿಚಾರದಲ್ಲಿ ಸತ್ಯಾಂಶ ಹೊರಬರಲಿದೆ. ಜಮೀರ್ ದುಬೈ, ಶ್ರೀಲಂಕಾ ದೇಶಗಳಿಗೆ ಹೋಗಿ ಕ್ಯಾಸಿನೊಗಳಲ್ಲಿ ಭಾಗಿಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬರಲಿದೆ.ಜಮೀರ್ ಅನೈತಿಕ ಚಟುವಟಿಕೆಯಿಂದಲೇ ಆರ್ಥಿಕ, ರಾಜಕೀಯವಾಗಿ ಬೆಳೆದಿದ್ದಾರೆ’ ಎಂದು ಆರೋಪಿಸಿದರು.