<p><strong>ಹೊನ್ನಾಳಿ: </strong>‘ಶಾಸಕ ಜಮೀರ್ ಅಹ್ಮದ್ ಅನೈತಿಕ ಚಟುವಟಿಕೆ ಮೂಲಕ ಹಣ ಗಳಿಸಿದ್ದಾನೆ. ಆತ ಒಬ್ಬ ಚಿಲ್ಲರೆ, ಗುಜರಿ ಗಿರಾಕಿ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹರಿಹಾಯ್ದರು.</p>.<p>ಹೊನ್ನಾಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು.ಡ್ರಗ್ಸ್ ವಿಚಾರದಲ್ಲಿ ಸತ್ಯಾಂಶ ಹೊರಬರಲಿದೆ. ಜಮೀರ್ ದುಬೈ, ಶ್ರೀಲಂಕಾ ದೇಶಗಳಿಗೆ ಹೋಗಿ ಕ್ಯಾಸಿನೊಗಳಲ್ಲಿ ಭಾಗಿಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬರಲಿದೆ.ಜಮೀರ್ ಅನೈತಿಕ ಚಟುವಟಿಕೆಯಿಂದಲೇ ಆರ್ಥಿಕ, ರಾಜಕೀಯವಾಗಿ ಬೆಳೆದಿದ್ದಾರೆ’ ಎಂದು ಆರೋಪಿಸಿದರು.</p>.<p>‘ಡ್ರಗ್ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಸರ್ಕಾರ ಮಟ್ಟ ಹಾಕಲಿದೆ. ಸ್ವತಂತ್ರವಾಗಿ ತನಿಖೆ ಮಾಡಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ಹಿಂದಿನ ಸರ್ಕಾರಗಳ ವೈಫಲ್ಯದಿಂದಲೇ ಡ್ರಗ್ ಮಾಫಿಯಾ ಈ ಮಟ್ಟಕ್ಕೆ ಬೆಳೆದಿದೆ’ ಎಂದು ದೂರಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಭೇಟಿಯಲ್ಲಿ ರಾಜಕೀಯ ಕಾರಣ ಇರಲಿಲ್ಲ. ಅಭಿವೃದ್ಧಿಯ ವಿಚಾರ ಚರ್ಚೆಯಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong>‘ಶಾಸಕ ಜಮೀರ್ ಅಹ್ಮದ್ ಅನೈತಿಕ ಚಟುವಟಿಕೆ ಮೂಲಕ ಹಣ ಗಳಿಸಿದ್ದಾನೆ. ಆತ ಒಬ್ಬ ಚಿಲ್ಲರೆ, ಗುಜರಿ ಗಿರಾಕಿ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹರಿಹಾಯ್ದರು.</p>.<p>ಹೊನ್ನಾಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು.ಡ್ರಗ್ಸ್ ವಿಚಾರದಲ್ಲಿ ಸತ್ಯಾಂಶ ಹೊರಬರಲಿದೆ. ಜಮೀರ್ ದುಬೈ, ಶ್ರೀಲಂಕಾ ದೇಶಗಳಿಗೆ ಹೋಗಿ ಕ್ಯಾಸಿನೊಗಳಲ್ಲಿ ಭಾಗಿಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬರಲಿದೆ.ಜಮೀರ್ ಅನೈತಿಕ ಚಟುವಟಿಕೆಯಿಂದಲೇ ಆರ್ಥಿಕ, ರಾಜಕೀಯವಾಗಿ ಬೆಳೆದಿದ್ದಾರೆ’ ಎಂದು ಆರೋಪಿಸಿದರು.</p>.<p>‘ಡ್ರಗ್ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಸರ್ಕಾರ ಮಟ್ಟ ಹಾಕಲಿದೆ. ಸ್ವತಂತ್ರವಾಗಿ ತನಿಖೆ ಮಾಡಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ಹಿಂದಿನ ಸರ್ಕಾರಗಳ ವೈಫಲ್ಯದಿಂದಲೇ ಡ್ರಗ್ ಮಾಫಿಯಾ ಈ ಮಟ್ಟಕ್ಕೆ ಬೆಳೆದಿದೆ’ ಎಂದು ದೂರಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಭೇಟಿಯಲ್ಲಿ ರಾಜಕೀಯ ಕಾರಣ ಇರಲಿಲ್ಲ. ಅಭಿವೃದ್ಧಿಯ ವಿಚಾರ ಚರ್ಚೆಯಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>