ಕಾಮಗಾರಿಯನ್ನು ಅರ್ಧಕ್ಕೇ ನಿಲ್ಲಿಸಿದ ಕಾರ್ಮಿಕರು, ಅಧಿಕಾರಿಗಳನ್ನು ಕರೆದುಕೊಂಡು ಬರುವುದಾಗಿ ಹೇಳಿ ಗ್ರಾಮದಿಂದ ನಡೆದರು. ಮುಂಜಾಗ್ರತಾ ಕ್ರಮವಾಗಿ ಹಲವಾಗಲು ಠಾಣೆ ಪೊಲೀಸರು ಬಂದಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ಮುಖಂಡರಾದ ಕಡತಿ ಮಲ್ಲಣ್ಣ, ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜಪ್ಪ, ಮಲ್ಲಿಕಾರ್ಜುನ, ಚಿಕ್ಕಪ್ಪ, ವಾಸಪ್ಪ ರಾಜಕುಮಾರ್ ಅವರೂ ಇದ್ದರು.