<p>ದಾವಣಗೆರೆ: ಕೇಂದ್ರ ಸರ್ಕಾರದ ಉದ್ದೇಶಿತ `ಕೋಮು ಹಿಂಸೆ ಹಾಗೂ ಯೋಜಿತ ದಾಳಿ ತಡೆ ಮಸೂದೆ~ಯು ರಾಷ್ಟ್ರದ ಜನಸಂಖ್ಯೆಯನ್ನು ಎರಡು ಭಾಗಗಳಾಗಿ ಮಾಡುವ ಅಪಾಯವಿದೆ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಶೋಕ ಸಾಹು ಆತಂಕ ವ್ಯಕ್ತಪಡಿಸಿದರು.<br /> <br /> ನಗರದಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಮತೀಯ ಹಿಂಸಾಚಾರ ತಡೆ ವಿಧೇಯಕ - 2011 ಒಂದು ಭಯಾನಕ ಕಾನೂನು ಎಂಬ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದರು.<br /> <br /> ಇಡೀ ಜಗತ್ತು ಭಾರತೀಯ ಸಂಸ್ಕೃತಿಯತ್ತ ನೋಡುತ್ತಿದೆ. ಇಂತಹ ಸಂದರ್ಭದಲ್ಲಿ ಈ ಮಸೂದೆ ಜಾರಿಯಾದರೆ ಆಕ್ರಮಣ ಪ್ರವೃತ್ತಿ ಹೆಚ್ಚಾಗಿ, ಕೋಮು ಹಿಂಸೆಗೆ ಕಾರಣ ಆಗಬಹುದು. ಇದೊಂದು ಭಾರತೀಯ ಸಂಸ್ಕೃತಿ ನಾಶಪಡಿಸಲು ಹೂಡಿರುವ ಹುನ್ನಾರ ಎಂದು ದೂರಿದರು.<br /> <br /> ಮಸೂದೆ ಕರಡು ಸಿದ್ಧಪಡಿಸಿರುವ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಲಿ ತಂಡದಲ್ಲಿ ಸೋನಿಯಾ ಬಿಟ್ಟರೆ ಪಾಶ್ಚಿಮಾತ್ಯರೆ ಇದ್ದಾರೆ ಎಂದು ಆರೋಪಿಸಿದರು.<br /> <br /> ಹಿಂದೂ ಪರ ಹೋರಾಟಗಾರರನ್ನು ಉದ್ದೇಶವಾಗಿ ಇಟ್ಟುಕೊಂಡು ರಚಿಸಿರುವ ಮಸೂದೆಯಿದು. ಇದುವರೆಗೂ ಕೋಮು ಗಲಭೆಗಳಿಗೆ ಹಿಂದೂಗಳು ಕಾರಣವಲ್ಲ. ಪರಿಶಿಷ್ಟ ಜಾತಿ/ ಪಂಗಡದವರನ್ನು ಹಿಂದೂ ಸಮಾಜದಿಂದ ಬೇರ್ಪಡಿಸುವ ಹುನ್ನಾರ ಅಡಗಿದೆ. ಯುಪಿಎ ಸರ್ಕಾರ ದೇಶವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು.<br /> <br /> ಆರ್ಎಲ್ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ರೆಡ್ಡಿ, ದೀಪಕ್ ಕಾನಡೆ, ಬಿ.ಎಸ್. ಪೈ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕೇಂದ್ರ ಸರ್ಕಾರದ ಉದ್ದೇಶಿತ `ಕೋಮು ಹಿಂಸೆ ಹಾಗೂ ಯೋಜಿತ ದಾಳಿ ತಡೆ ಮಸೂದೆ~ಯು ರಾಷ್ಟ್ರದ ಜನಸಂಖ್ಯೆಯನ್ನು ಎರಡು ಭಾಗಗಳಾಗಿ ಮಾಡುವ ಅಪಾಯವಿದೆ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಶೋಕ ಸಾಹು ಆತಂಕ ವ್ಯಕ್ತಪಡಿಸಿದರು.<br /> <br /> ನಗರದಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಮತೀಯ ಹಿಂಸಾಚಾರ ತಡೆ ವಿಧೇಯಕ - 2011 ಒಂದು ಭಯಾನಕ ಕಾನೂನು ಎಂಬ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದರು.<br /> <br /> ಇಡೀ ಜಗತ್ತು ಭಾರತೀಯ ಸಂಸ್ಕೃತಿಯತ್ತ ನೋಡುತ್ತಿದೆ. ಇಂತಹ ಸಂದರ್ಭದಲ್ಲಿ ಈ ಮಸೂದೆ ಜಾರಿಯಾದರೆ ಆಕ್ರಮಣ ಪ್ರವೃತ್ತಿ ಹೆಚ್ಚಾಗಿ, ಕೋಮು ಹಿಂಸೆಗೆ ಕಾರಣ ಆಗಬಹುದು. ಇದೊಂದು ಭಾರತೀಯ ಸಂಸ್ಕೃತಿ ನಾಶಪಡಿಸಲು ಹೂಡಿರುವ ಹುನ್ನಾರ ಎಂದು ದೂರಿದರು.<br /> <br /> ಮಸೂದೆ ಕರಡು ಸಿದ್ಧಪಡಿಸಿರುವ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಲಿ ತಂಡದಲ್ಲಿ ಸೋನಿಯಾ ಬಿಟ್ಟರೆ ಪಾಶ್ಚಿಮಾತ್ಯರೆ ಇದ್ದಾರೆ ಎಂದು ಆರೋಪಿಸಿದರು.<br /> <br /> ಹಿಂದೂ ಪರ ಹೋರಾಟಗಾರರನ್ನು ಉದ್ದೇಶವಾಗಿ ಇಟ್ಟುಕೊಂಡು ರಚಿಸಿರುವ ಮಸೂದೆಯಿದು. ಇದುವರೆಗೂ ಕೋಮು ಗಲಭೆಗಳಿಗೆ ಹಿಂದೂಗಳು ಕಾರಣವಲ್ಲ. ಪರಿಶಿಷ್ಟ ಜಾತಿ/ ಪಂಗಡದವರನ್ನು ಹಿಂದೂ ಸಮಾಜದಿಂದ ಬೇರ್ಪಡಿಸುವ ಹುನ್ನಾರ ಅಡಗಿದೆ. ಯುಪಿಎ ಸರ್ಕಾರ ದೇಶವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು.<br /> <br /> ಆರ್ಎಲ್ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ರೆಡ್ಡಿ, ದೀಪಕ್ ಕಾನಡೆ, ಬಿ.ಎಸ್. ಪೈ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>