<p><strong>ದಾವಣಗೆರೆ: </strong>ಮಹಮ್ಮದ್ ಅಲಿಖಾನ್ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ರಾಜ್ಯಪಾಲರಿಗೆ ಪತ್ರ ಬರೆದು ವಿಧಾನ ಪರಿಷತ್ನಲ್ಲಿ ಖಾಲಿ ಆಗಿರುವ ಸದಸ್ಯ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರನ್ನು ನೇಮಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ‘ಪ್ರಜಾವಾಣಿ’ಗೆ ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಆದರೆ, ಲೋಕಸಭಾ ಚುನಾವಣಾ ನೀತಿಸಂಹಿತೆ ಬುಧವಾರದಿಂದಲೇ ಜಾರಿಗೆ ಬಂದಿರುವುದರಿಂದ ನೇಮಕ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ಗೊತ್ತಾಗಿದೆ.<br /> <br /> ವಿಧಾನ ಪರಿಷತ್ಗೆ ಸದಸ್ಯರನ್ನು ನೇಮಕ ಗೊಳಿಸಲು ನೀತಿಸಂಹಿತೆ ಉಲ್ಲಂಘನೆ ಆಗಲಿದೆಯೇ ಎಂದು ಕೇಳಿ ರಾಜ್ಯಪಾಲರು ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ. ಸಮಾಜ ಸೇವಾ ಕ್ಷೇತ್ರದಿಂದ ಮಹಮ್ಮದ್ ಅಲಿಖಾನ್ ಅವರನ್ನು ಬಿಜೆಪಿ ವಿಧಾನ ಪರಿಷತ್ಗೆ ಆಯ್ಕೆ ಮಾಡಿ ಕಳುಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮಹಮ್ಮದ್ ಅಲಿಖಾನ್ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ರಾಜ್ಯಪಾಲರಿಗೆ ಪತ್ರ ಬರೆದು ವಿಧಾನ ಪರಿಷತ್ನಲ್ಲಿ ಖಾಲಿ ಆಗಿರುವ ಸದಸ್ಯ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರನ್ನು ನೇಮಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ‘ಪ್ರಜಾವಾಣಿ’ಗೆ ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಆದರೆ, ಲೋಕಸಭಾ ಚುನಾವಣಾ ನೀತಿಸಂಹಿತೆ ಬುಧವಾರದಿಂದಲೇ ಜಾರಿಗೆ ಬಂದಿರುವುದರಿಂದ ನೇಮಕ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ಗೊತ್ತಾಗಿದೆ.<br /> <br /> ವಿಧಾನ ಪರಿಷತ್ಗೆ ಸದಸ್ಯರನ್ನು ನೇಮಕ ಗೊಳಿಸಲು ನೀತಿಸಂಹಿತೆ ಉಲ್ಲಂಘನೆ ಆಗಲಿದೆಯೇ ಎಂದು ಕೇಳಿ ರಾಜ್ಯಪಾಲರು ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ. ಸಮಾಜ ಸೇವಾ ಕ್ಷೇತ್ರದಿಂದ ಮಹಮ್ಮದ್ ಅಲಿಖಾನ್ ಅವರನ್ನು ಬಿಜೆಪಿ ವಿಧಾನ ಪರಿಷತ್ಗೆ ಆಯ್ಕೆ ಮಾಡಿ ಕಳುಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>