<p>ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಸಮಾಜದ ಕಣ್ಮಣಿ. ಅವರಿಗೆ ರಾಜಕೀಯ ಬದುಕಿನಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಥಾನಮಾನ ಸಿಗಬೇಕಿತ್ತು ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ನಗರದ ಅಭಿನವ ರೇಣುಕ ಮಂದಿರದ ಆವರಣದಲ್ಲಿ ಭಾನುವಾರ ಗುರುನಿವಾಸ ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.<br /> <br /> ರಂಭಾಪುರಿ ಪೀಠಕ್ಕೂ ನಗರಕ್ಕೂ ಅವಿನಾಭಾವ ಸಂಬಂಧವಿದೆ. ವೀರಗಂಗಾಧರ ಜಗದ್ಗುರುಗಳ ಕಾಲದಿಂದಲೂ ಆ ಪರಂಪರೆ ಬೆಳೆದುಬಂದಿದೆ. ಹಿಂದೆ ಆಷಾಢ ಮಾಸದ ಇಷ್ಟಲಿಂಗ ಪೂಜೆಗಾಗಿ ಸ್ವಾಮೀಜಿಯವರು ಭಕ್ತರ ಮನೆಯಲ್ಲಿ ಉಳಿದುಕೊಳ್ಳಬೇಕಿತ್ತು. ಆದರೆ, ದಿವಂಗತ ಅಥಣಿ ಕೊಟ್ರೇಶ್ ಅವರು ಗುರುನಿವಾಸ ಕಟ್ಟಿಕೊಡಲು ಮುಂದಾದರು. ಶೀಘ್ರವೇ ಕಟ್ಟಡ ಕಾಮಗಾರಿ ಮುಗಿದು ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ ಎಂದರು.<br /> <br /> ಶಾಮನೂರು ಶಿವಶಂಕರಪ್ಪ ಅವರು ಮಠದ ಪ್ರಮುಖ ಭಕ್ತರಲ್ಲಿ ಒಬ್ಬರು. ಅವರು ಶೀಘ್ರವೇ ವೀರಶೈವ ಮಹಾಸಭಾದ ಅಧ್ಯಕ್ಷರಾಗಲಿದ್ದಾರೆ. ಅದೇ ವೇಳೆಗೆ ಅವರು ರಾಜಕೀಯವಾಗಿಯೂ ಸೂಕ್ತ ಸ್ಥಾನಮಾನ ಪಡೆಯಬೇಕು. ಸಮಾಜದ ಮುಖಂಡರು ಅವರ ಪರ ಹೊಂದಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಹೇಳಿದರು.<br /> <br /> ಗುರುನಿವಾಸ ಉದ್ಘಾಟಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ನಗರದಲ್ಲಿ ಗುರುನಿವಾಸ ನಿರ್ಮಾಣಗೊಂಡಿರುವುದು ಒಳ್ಳೆಯ ವಿಚಾರ. ಭಕ್ತರು ಗುರುಪರಂಪರೆಗೆ ತಕ್ಕ ಗೌರವದಿಂದ ನಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.<br /> <br /> ಯಡಿಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ, ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಥಣಿ ವೀರಣ್ಣ, ಅಥಣಿ ಚನ್ನಬಸಪ್ಪ, ಎ.ಸಿ. ಜಯಣ್ಣ. ಟಿ. ಜಯದೇವಪ್ಪ, ದೇವರಮನೆ ಶಿವಕುಮಾರ್ ಉಪಸ್ಥಿತರಿದ್ದರು.<br /> <br /> <strong> 3ಕ್ಕೆ ಗುರುಪೂರ್ಣಿಮೆ</strong> <br /> ನಗರದ ಎಂಸಿಸಿ `ಎ~ ಬ್ಲಾಕ್ನ ಸಾಯಿಬಾಬಾ ಮಂದಿರದಲ್ಲಿ ಜುಲೈ 3ರಂದು ಗುರುಪೂರ್ಣಿಮೆ ಕಾರ್ಯಕ್ರಮ ಹಾಗೂ 14ನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಲಿದೆ.<br /> <br /> ಅಂದು ಬೆಳಿಗ್ಗೆ 6ಕ್ಕೆ ಕಾಕಡಾರತಿ, 9ಕ್ಕೆ ದೀಪಾರಾಧನೆ, ಕಲಶ ಸ್ಥಾಪನೆ, ಗೋಪುರ ಧ್ವಜಾರೋಹಣ ನಡೆಯಲಿದೆ. ಜಡೆಸಿದ್ದ ಶಿವಯೋಗೀಶ್ವರ ಶಾಂತಾಶ್ರಮದ ಗುರು ಶಿವಾನಂದ ಸ್ವಾಮೀಜಿ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು.<br /> <br /> ಸಂಜೆ 5ಕ್ಕೆ ಭಜನೆ, 8.30ಕ್ಕೆ ಪಲ್ಲಕ್ಕಿ ಉತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸಂಜೆ 5ಕ್ಕೆ ಕೆ. ವಿಠ್ಠಲದಾಸ್ ಶೆಣೈ ಅವರಿಂದ ಪ್ರವಚನ ನಡೆಯಲಿದೆ ಎಂದು ಸಾಯಿಟ್ರಸ್ಟ್ ಪ್ರಕಟಣೆ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಸಮಾಜದ ಕಣ್ಮಣಿ. ಅವರಿಗೆ ರಾಜಕೀಯ ಬದುಕಿನಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಥಾನಮಾನ ಸಿಗಬೇಕಿತ್ತು ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ನಗರದ ಅಭಿನವ ರೇಣುಕ ಮಂದಿರದ ಆವರಣದಲ್ಲಿ ಭಾನುವಾರ ಗುರುನಿವಾಸ ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.<br /> <br /> ರಂಭಾಪುರಿ ಪೀಠಕ್ಕೂ ನಗರಕ್ಕೂ ಅವಿನಾಭಾವ ಸಂಬಂಧವಿದೆ. ವೀರಗಂಗಾಧರ ಜಗದ್ಗುರುಗಳ ಕಾಲದಿಂದಲೂ ಆ ಪರಂಪರೆ ಬೆಳೆದುಬಂದಿದೆ. ಹಿಂದೆ ಆಷಾಢ ಮಾಸದ ಇಷ್ಟಲಿಂಗ ಪೂಜೆಗಾಗಿ ಸ್ವಾಮೀಜಿಯವರು ಭಕ್ತರ ಮನೆಯಲ್ಲಿ ಉಳಿದುಕೊಳ್ಳಬೇಕಿತ್ತು. ಆದರೆ, ದಿವಂಗತ ಅಥಣಿ ಕೊಟ್ರೇಶ್ ಅವರು ಗುರುನಿವಾಸ ಕಟ್ಟಿಕೊಡಲು ಮುಂದಾದರು. ಶೀಘ್ರವೇ ಕಟ್ಟಡ ಕಾಮಗಾರಿ ಮುಗಿದು ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ ಎಂದರು.<br /> <br /> ಶಾಮನೂರು ಶಿವಶಂಕರಪ್ಪ ಅವರು ಮಠದ ಪ್ರಮುಖ ಭಕ್ತರಲ್ಲಿ ಒಬ್ಬರು. ಅವರು ಶೀಘ್ರವೇ ವೀರಶೈವ ಮಹಾಸಭಾದ ಅಧ್ಯಕ್ಷರಾಗಲಿದ್ದಾರೆ. ಅದೇ ವೇಳೆಗೆ ಅವರು ರಾಜಕೀಯವಾಗಿಯೂ ಸೂಕ್ತ ಸ್ಥಾನಮಾನ ಪಡೆಯಬೇಕು. ಸಮಾಜದ ಮುಖಂಡರು ಅವರ ಪರ ಹೊಂದಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಹೇಳಿದರು.<br /> <br /> ಗುರುನಿವಾಸ ಉದ್ಘಾಟಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ನಗರದಲ್ಲಿ ಗುರುನಿವಾಸ ನಿರ್ಮಾಣಗೊಂಡಿರುವುದು ಒಳ್ಳೆಯ ವಿಚಾರ. ಭಕ್ತರು ಗುರುಪರಂಪರೆಗೆ ತಕ್ಕ ಗೌರವದಿಂದ ನಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.<br /> <br /> ಯಡಿಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ, ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಥಣಿ ವೀರಣ್ಣ, ಅಥಣಿ ಚನ್ನಬಸಪ್ಪ, ಎ.ಸಿ. ಜಯಣ್ಣ. ಟಿ. ಜಯದೇವಪ್ಪ, ದೇವರಮನೆ ಶಿವಕುಮಾರ್ ಉಪಸ್ಥಿತರಿದ್ದರು.<br /> <br /> <strong> 3ಕ್ಕೆ ಗುರುಪೂರ್ಣಿಮೆ</strong> <br /> ನಗರದ ಎಂಸಿಸಿ `ಎ~ ಬ್ಲಾಕ್ನ ಸಾಯಿಬಾಬಾ ಮಂದಿರದಲ್ಲಿ ಜುಲೈ 3ರಂದು ಗುರುಪೂರ್ಣಿಮೆ ಕಾರ್ಯಕ್ರಮ ಹಾಗೂ 14ನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಲಿದೆ.<br /> <br /> ಅಂದು ಬೆಳಿಗ್ಗೆ 6ಕ್ಕೆ ಕಾಕಡಾರತಿ, 9ಕ್ಕೆ ದೀಪಾರಾಧನೆ, ಕಲಶ ಸ್ಥಾಪನೆ, ಗೋಪುರ ಧ್ವಜಾರೋಹಣ ನಡೆಯಲಿದೆ. ಜಡೆಸಿದ್ದ ಶಿವಯೋಗೀಶ್ವರ ಶಾಂತಾಶ್ರಮದ ಗುರು ಶಿವಾನಂದ ಸ್ವಾಮೀಜಿ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು.<br /> <br /> ಸಂಜೆ 5ಕ್ಕೆ ಭಜನೆ, 8.30ಕ್ಕೆ ಪಲ್ಲಕ್ಕಿ ಉತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸಂಜೆ 5ಕ್ಕೆ ಕೆ. ವಿಠ್ಠಲದಾಸ್ ಶೆಣೈ ಅವರಿಂದ ಪ್ರವಚನ ನಡೆಯಲಿದೆ ಎಂದು ಸಾಯಿಟ್ರಸ್ಟ್ ಪ್ರಕಟಣೆ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>