<p>ಚನ್ನಗಿರಿ: ಪುಣೆಯ ಎನ್ಡಿಆರ್ಎಫ್ ಸೇನಾ ಪಡೆಯ ತಂಡ ಸೋಮವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪ್ರವಾಹ ಬಂದಾಗ ಯಾವ ರೀತಿ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸೋಮವಾರ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿತೆ ಮೂಲಕ ವಿವರಿಸಿದರು.<br /> <br /> ಪ್ರವಾಹ ಬಂದಾಗ, ದೊಡ್ಡ ಕಟ್ಟಡಗಳು ಕುಸಿದಾಗ, ಭೂಕಂಪ ಸಂಭವಿಸಿದಾಗ... -ಹೀಗೆ ಪ್ರಕೃತಿ ವಿಕೋಪಗಳು ಉಂಟಾದಾಗ ಯಾವ ರೀತಿ ಗಾಬರಿ ಬೀಳದೇ ಜೀವ ರಕ್ಷಣೆ ಮಾಡಿಕೊಳ್ಳುವುದರ ಬಗ್ಗೆ ಸೇನಾಪಡೆಯ ಪಿಎಸ್ಐ ಶಾದೀಶ್, ಸುನಿಲ್ಕುಮಾರ್, ರಾಕೇಶ್ ಕುಮಾರ್ ಮತ್ತು ಅವರ ತಂಡ ವಿದ್ಯಾರ್ಥಿಗಳಿಗೆ ಪ್ರದರ್ಶನ ಮೂಲಕ ವಿವರಿಸಿತು.<br /> <br /> ತಮ್ಮೊಂದಿಗೆ ತಂದಿದ್ದ ರಕ್ಷಣಾ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ತೋರಿಸಿ, ಅವುಗಳನ್ನು ಯಾವ ರೀತಿ ಉಪಯೋಗ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದರು.<br /> ಈ ಸಂದರ್ಭದಲ್ಲಿ ಸಿಪಿಐ ರಮೇಶ್ಕುಮಾರ್, ಪ್ರಾಂಶುಪಾಲ ಶಿವಮೂರ್ತಿ ನಾಯ್ಕ, ಉಪನ್ಯಾಸಕರಾದ ಜಿಯಾವುಲ್ಲಾ, ರಾಮರೆಡ್ಡಿ, ಮಹೇಶ್ವರಪ್ಪ, ಹಿರಿಯ ಕಂದಾಯ ನಿರೀಕ್ಷಕ ಮಲ್ಲೇಶಪ್ಪ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ಪುಣೆಯ ಎನ್ಡಿಆರ್ಎಫ್ ಸೇನಾ ಪಡೆಯ ತಂಡ ಸೋಮವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪ್ರವಾಹ ಬಂದಾಗ ಯಾವ ರೀತಿ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸೋಮವಾರ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿತೆ ಮೂಲಕ ವಿವರಿಸಿದರು.<br /> <br /> ಪ್ರವಾಹ ಬಂದಾಗ, ದೊಡ್ಡ ಕಟ್ಟಡಗಳು ಕುಸಿದಾಗ, ಭೂಕಂಪ ಸಂಭವಿಸಿದಾಗ... -ಹೀಗೆ ಪ್ರಕೃತಿ ವಿಕೋಪಗಳು ಉಂಟಾದಾಗ ಯಾವ ರೀತಿ ಗಾಬರಿ ಬೀಳದೇ ಜೀವ ರಕ್ಷಣೆ ಮಾಡಿಕೊಳ್ಳುವುದರ ಬಗ್ಗೆ ಸೇನಾಪಡೆಯ ಪಿಎಸ್ಐ ಶಾದೀಶ್, ಸುನಿಲ್ಕುಮಾರ್, ರಾಕೇಶ್ ಕುಮಾರ್ ಮತ್ತು ಅವರ ತಂಡ ವಿದ್ಯಾರ್ಥಿಗಳಿಗೆ ಪ್ರದರ್ಶನ ಮೂಲಕ ವಿವರಿಸಿತು.<br /> <br /> ತಮ್ಮೊಂದಿಗೆ ತಂದಿದ್ದ ರಕ್ಷಣಾ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ತೋರಿಸಿ, ಅವುಗಳನ್ನು ಯಾವ ರೀತಿ ಉಪಯೋಗ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದರು.<br /> ಈ ಸಂದರ್ಭದಲ್ಲಿ ಸಿಪಿಐ ರಮೇಶ್ಕುಮಾರ್, ಪ್ರಾಂಶುಪಾಲ ಶಿವಮೂರ್ತಿ ನಾಯ್ಕ, ಉಪನ್ಯಾಸಕರಾದ ಜಿಯಾವುಲ್ಲಾ, ರಾಮರೆಡ್ಡಿ, ಮಹೇಶ್ವರಪ್ಪ, ಹಿರಿಯ ಕಂದಾಯ ನಿರೀಕ್ಷಕ ಮಲ್ಲೇಶಪ್ಪ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>