<p>ಚನ್ನಗಿರಿ: ಚುಟುಕು ಸಾಹಿತ್ಯ ಮನಸ್ಸನ್ನು ಅರಳಿಸುವ ಗುಣ ಹೊಂದಿದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು.<br /> <br /> ಪಟ್ಟಣದ ಗುರುಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಾಹಿತ್ಯದ ರುಚಿ ಇಲ್ಲದವರು ಪಶುವಿಗೆ ಸಮಾನ ಎನ್ನುತ್ತಾರೆ. ನಾವು ಸಾಹಿತ್ಯದ ಆಸಕ್ತಿ ಬೆಳೆಸಿಕೊಳ್ಳಬೇಕು. ಭಾಷೆಯ ಬಗ್ಗೆ ಅಭಿಮಾನ ಇರಬೇಕು; ದುರಭಿಮಾನ ಇರಬಾರದು. ಕನ್ನಡ ನೆಲ-ಜಲದ ಬಗ್ಗೆ ಅಭಿಮಾನ ಇಟ್ಟುಕೊಂಡು, ಧಕ್ಕೆಯಾದಾಗ ಹೋರಾಟಕ್ಕೂ ಇಳಿಯುವಂತೆ ಕರೆ ನೀಡಿದರು.<br /> <br /> ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜಶೇಖರಪ್ಪ ಗುಂಡಗತ್ತಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚಿಕ್ಕೋಳ್ ಈಶ್ವರಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಓ.ಎಸ್. ನಾಗರಾಜ್, ಬಿಇಒ ಜಿ.ಆರ್. ತಿಪ್ಪೇಶಪ್ಪ, ಕೆ. ಸಿರಾಜ್ ಅಹಮದ್, ಚಂದ್ರಶೇಖರ್ ಉಪಸ್ಥಿತರಿದ್ದರು. <br /> <br /> ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎಂ.ಆರ್. ಲೋಕೇಶ್ವರಯ್ಯ ನೂತನವಾಗಿ ಆಯ್ಕೆಯಾದ ಎಸ್. ಶಂಕರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಲಾವಿದ ಶಾಂತನಾಯ್ಕ ಹಾಗೂ ಎಂ. ಮಲ್ಲೇಶಪ್ಪ ತಂಡದವರು ಜಾಗೃತಿ ಗೀತೆಗಳನ್ನು ಹಾಡಿದರು.<br /> <br /> ಸುರೇಶ್ ಪ್ರಾರ್ಥಿಸಿದರು. ಎಸ್. ಶಂಕರಪ್ಪ ಸ್ವಾಗತಿಸಿದರು. ಎಂ.ಬಿ. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ಚುಟುಕು ಸಾಹಿತ್ಯ ಮನಸ್ಸನ್ನು ಅರಳಿಸುವ ಗುಣ ಹೊಂದಿದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು.<br /> <br /> ಪಟ್ಟಣದ ಗುರುಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಾಹಿತ್ಯದ ರುಚಿ ಇಲ್ಲದವರು ಪಶುವಿಗೆ ಸಮಾನ ಎನ್ನುತ್ತಾರೆ. ನಾವು ಸಾಹಿತ್ಯದ ಆಸಕ್ತಿ ಬೆಳೆಸಿಕೊಳ್ಳಬೇಕು. ಭಾಷೆಯ ಬಗ್ಗೆ ಅಭಿಮಾನ ಇರಬೇಕು; ದುರಭಿಮಾನ ಇರಬಾರದು. ಕನ್ನಡ ನೆಲ-ಜಲದ ಬಗ್ಗೆ ಅಭಿಮಾನ ಇಟ್ಟುಕೊಂಡು, ಧಕ್ಕೆಯಾದಾಗ ಹೋರಾಟಕ್ಕೂ ಇಳಿಯುವಂತೆ ಕರೆ ನೀಡಿದರು.<br /> <br /> ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜಶೇಖರಪ್ಪ ಗುಂಡಗತ್ತಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚಿಕ್ಕೋಳ್ ಈಶ್ವರಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಓ.ಎಸ್. ನಾಗರಾಜ್, ಬಿಇಒ ಜಿ.ಆರ್. ತಿಪ್ಪೇಶಪ್ಪ, ಕೆ. ಸಿರಾಜ್ ಅಹಮದ್, ಚಂದ್ರಶೇಖರ್ ಉಪಸ್ಥಿತರಿದ್ದರು. <br /> <br /> ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎಂ.ಆರ್. ಲೋಕೇಶ್ವರಯ್ಯ ನೂತನವಾಗಿ ಆಯ್ಕೆಯಾದ ಎಸ್. ಶಂಕರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಲಾವಿದ ಶಾಂತನಾಯ್ಕ ಹಾಗೂ ಎಂ. ಮಲ್ಲೇಶಪ್ಪ ತಂಡದವರು ಜಾಗೃತಿ ಗೀತೆಗಳನ್ನು ಹಾಡಿದರು.<br /> <br /> ಸುರೇಶ್ ಪ್ರಾರ್ಥಿಸಿದರು. ಎಸ್. ಶಂಕರಪ್ಪ ಸ್ವಾಗತಿಸಿದರು. ಎಂ.ಬಿ. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>