<p>ದಾವಣಗೆರೆ: ನಕಲಿ ವೈದ್ಯರ ಹಾವಳಿ ತಡೆಗೆ ಜಿಲ್ಲಾಮಟ್ಟದಲ್ಲಿ ಸಮಿತಿ ರಚಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ಧರಿಸಲಾಯಿತು. <br /> <br /> ಮಂಗಳವಾರ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಅಲ್ಲದೇ ಡೆಂಗೆ ಜ್ವರ ಪ್ರಕರಣಗಳೂ ವರದಿಯಾಗುತ್ತಿವೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ? ಎಂದು ಸದಸ್ಯ ಪಾಲನಾಯ್ಕ ಪ್ರಶ್ನಿಸಿದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್. ಸುಮಿತ್ರಾದೇವಿ ಪ್ರತಿಕ್ರಿಯಿಸಿ ಇದುವರೆಗೆ ಇಬ್ಬರಿಗೆ ತಮ್ಮ ಚಿಕಿತ್ಸಾ ಕೇಂದ್ರ ಮುಚ್ಚಲು ಸೂಚಿಸಲಾಗಿದೆ. ಒಬ್ಬರನ್ನು ಬಂಧಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆಗಳು ಪಲ್ಲಾಗಟ್ಟೆಯಲ್ಲಿ ನಡೆದಿದೆ ಎಂದು ವಿವರಿಸಿದರು. <br /> <br /> ಅದಕ್ಕೆ ಅಂಬಿಕಾ ರಾಜಪ್ಪ ಪ್ರತಿಕ್ರಿಯಿಸಿ ಅಂಥ ಕಡೆ ದಾಳಿ ನಡೆಸು ವಾಗ ಜನಪ್ರತಿನಿಧಿಗಳಿಗೇಕೆ ಮಾಹಿತಿ ನೀಡುವುದಿಲ್ಲ? ನಾವಾದರೂ ಅಂಥ ಗಲಾಟೆಯನ್ನು ತಡೆಗಟ್ಟಬಹುದಿತ್ತು ಎಂದು ಅಭಿಪ್ರಾಯಪಟ್ಟರು.<br /> <br /> ಸಿಇಒ ಎ.ಬಿ. ಹೇಮಚಂದ್ರ ಪ್ರತಿಕ್ರಿಯಿಸಿ ಜನರ ಜೀವದ ಜತೆ ಚೆಲ್ಲಾಟ ಆಡಬಾರದು. ಅದಕ್ಕೆ ಜಿಲ್ಲಾಮಟ್ಟದಲ್ಲಿ ಸಮಿತಿ ರಚಿಸಬೇಕು ಎಂದರು.<br /> <br /> ಕೊನೆಗೆ ನಕಲಿ ವೈದ್ಯರ ತಡೆಗೆ ಡಿಎಚ್ಒ, ತಾಲ್ಲೂಕು ಆರೋಗ್ಯಾಧಿಕಾರಿ, ಆಯುಷ್ ಅಧಿಕಾರಿಗಳು ಹಾಗೂ ದಂತ ವೈದ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು. ಅಂಥ ವೈದ್ಯರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಅಧ್ಯಕ್ಷ ಚಿದಾನಂದ ಐಗೂರು ತಿಳಿಸಿದರು. <br /> <br /> ಶಾಲೆಗಾಗಿ ನಾವು ನೀವು: ಶಾಲೆಗಾಗಿ ನಾವು ನೀವು ಕಾರ್ಯಕ್ರಮದ ಅಡಿಯಲ್ಲಿ ಪ್ರಸ್ತುತ ವರ್ಷ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ವಿಷಯವಾರು ಮೌಲ್ಯಮಾಪನ ತಂಡ ಭೇಟಿ ನೀಡಿ, ಅಲ್ಲಿನ ಎಲ್ಲ ಚಟುವಟಿಕೆಯನ್ನು ವೀಕ್ಷಿಸಿ ಮೌಲ್ಯಮಾಪನ ನಡೆಸಲಾಗುವುದು. <br /> <br /> ಅದಕ್ಕಾಗಿ ಸಂಕ್ಷಿಪ್ತ ಮೌಲ್ಯಮಾಪನ ನಮೂನೆಯ 16 ಪುಟಗಳ ಪುಸ್ತಕ ಸಿದ್ಧಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎ. ರಾಜಶೇಖರ ಮಾಹಿತಿ ನೀಡಿದರು. ಪ್ರೌಢಶಾಲೆಗಳ ಮೌಲ್ಯಮಾಪನಕ್ಕೆ ಡಿಡಿಪಿಐ, ಡಯೆಟ್ ಪ್ರಾಂಶುಪಾಲ, ರಾಜ್ಯಮಟ್ಟದ ಜಿಲ್ಲಾ ನೋಡೆಲ್ ಅಧಿಕಾರಿಗಳು ಮತ್ತು ಶಿಕ್ಷಣಾಧಿಕಾರಿಯನ್ನೊಳಗೊಂಡ 7 ತಂಡಗಳನ್ನು ರಚಿಸಲಾಗುವುದು. ಪ್ರಾಥಮಿಕ ಶಾಲೆಗಳ ತಪಾಸಣೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಇಡೀ ದಿನ ಶಾಲೆಯ ಎಲ್ಲ ಚಟುವಟಿಕೆಗಳನ್ನು ವೀಕ್ಷಿಸಿ ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆಯಲಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಕಲಿ ವೈದ್ಯರ ಹಾವಳಿ ತಡೆಗೆ ಜಿಲ್ಲಾಮಟ್ಟದಲ್ಲಿ ಸಮಿತಿ ರಚಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ಧರಿಸಲಾಯಿತು. <br /> <br /> ಮಂಗಳವಾರ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಅಲ್ಲದೇ ಡೆಂಗೆ ಜ್ವರ ಪ್ರಕರಣಗಳೂ ವರದಿಯಾಗುತ್ತಿವೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ? ಎಂದು ಸದಸ್ಯ ಪಾಲನಾಯ್ಕ ಪ್ರಶ್ನಿಸಿದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್. ಸುಮಿತ್ರಾದೇವಿ ಪ್ರತಿಕ್ರಿಯಿಸಿ ಇದುವರೆಗೆ ಇಬ್ಬರಿಗೆ ತಮ್ಮ ಚಿಕಿತ್ಸಾ ಕೇಂದ್ರ ಮುಚ್ಚಲು ಸೂಚಿಸಲಾಗಿದೆ. ಒಬ್ಬರನ್ನು ಬಂಧಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆಗಳು ಪಲ್ಲಾಗಟ್ಟೆಯಲ್ಲಿ ನಡೆದಿದೆ ಎಂದು ವಿವರಿಸಿದರು. <br /> <br /> ಅದಕ್ಕೆ ಅಂಬಿಕಾ ರಾಜಪ್ಪ ಪ್ರತಿಕ್ರಿಯಿಸಿ ಅಂಥ ಕಡೆ ದಾಳಿ ನಡೆಸು ವಾಗ ಜನಪ್ರತಿನಿಧಿಗಳಿಗೇಕೆ ಮಾಹಿತಿ ನೀಡುವುದಿಲ್ಲ? ನಾವಾದರೂ ಅಂಥ ಗಲಾಟೆಯನ್ನು ತಡೆಗಟ್ಟಬಹುದಿತ್ತು ಎಂದು ಅಭಿಪ್ರಾಯಪಟ್ಟರು.<br /> <br /> ಸಿಇಒ ಎ.ಬಿ. ಹೇಮಚಂದ್ರ ಪ್ರತಿಕ್ರಿಯಿಸಿ ಜನರ ಜೀವದ ಜತೆ ಚೆಲ್ಲಾಟ ಆಡಬಾರದು. ಅದಕ್ಕೆ ಜಿಲ್ಲಾಮಟ್ಟದಲ್ಲಿ ಸಮಿತಿ ರಚಿಸಬೇಕು ಎಂದರು.<br /> <br /> ಕೊನೆಗೆ ನಕಲಿ ವೈದ್ಯರ ತಡೆಗೆ ಡಿಎಚ್ಒ, ತಾಲ್ಲೂಕು ಆರೋಗ್ಯಾಧಿಕಾರಿ, ಆಯುಷ್ ಅಧಿಕಾರಿಗಳು ಹಾಗೂ ದಂತ ವೈದ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು. ಅಂಥ ವೈದ್ಯರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಅಧ್ಯಕ್ಷ ಚಿದಾನಂದ ಐಗೂರು ತಿಳಿಸಿದರು. <br /> <br /> ಶಾಲೆಗಾಗಿ ನಾವು ನೀವು: ಶಾಲೆಗಾಗಿ ನಾವು ನೀವು ಕಾರ್ಯಕ್ರಮದ ಅಡಿಯಲ್ಲಿ ಪ್ರಸ್ತುತ ವರ್ಷ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ವಿಷಯವಾರು ಮೌಲ್ಯಮಾಪನ ತಂಡ ಭೇಟಿ ನೀಡಿ, ಅಲ್ಲಿನ ಎಲ್ಲ ಚಟುವಟಿಕೆಯನ್ನು ವೀಕ್ಷಿಸಿ ಮೌಲ್ಯಮಾಪನ ನಡೆಸಲಾಗುವುದು. <br /> <br /> ಅದಕ್ಕಾಗಿ ಸಂಕ್ಷಿಪ್ತ ಮೌಲ್ಯಮಾಪನ ನಮೂನೆಯ 16 ಪುಟಗಳ ಪುಸ್ತಕ ಸಿದ್ಧಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎ. ರಾಜಶೇಖರ ಮಾಹಿತಿ ನೀಡಿದರು. ಪ್ರೌಢಶಾಲೆಗಳ ಮೌಲ್ಯಮಾಪನಕ್ಕೆ ಡಿಡಿಪಿಐ, ಡಯೆಟ್ ಪ್ರಾಂಶುಪಾಲ, ರಾಜ್ಯಮಟ್ಟದ ಜಿಲ್ಲಾ ನೋಡೆಲ್ ಅಧಿಕಾರಿಗಳು ಮತ್ತು ಶಿಕ್ಷಣಾಧಿಕಾರಿಯನ್ನೊಳಗೊಂಡ 7 ತಂಡಗಳನ್ನು ರಚಿಸಲಾಗುವುದು. ಪ್ರಾಥಮಿಕ ಶಾಲೆಗಳ ತಪಾಸಣೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಇಡೀ ದಿನ ಶಾಲೆಯ ಎಲ್ಲ ಚಟುವಟಿಕೆಗಳನ್ನು ವೀಕ್ಷಿಸಿ ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆಯಲಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>