<p><strong>ಮೊಳಕಾಲ್ಮುರು:</strong> ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರುದ್ರಮ್ಮನಹಳ್ಳಿಯಲ್ಲಿನ ನಾಯಕ ಜನಾಂಗದ ನಲಜರುವ ಓಬಳಸ್ವಾಮಿ ದೇವರ ನೂತನ ಪೂಜಾರಿಗಳ ಪಟ್ಟಾಭಿಷೇಕ ಮತ್ತು ಕಡುಬಿನ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಶನಿವಾರ ನೂತನ ಪೂಜಾರಿಗಳಿಗೆ ಪಟ್ಟಾಭಿಷೇಕ ಮಾಡಲಾಗಿತ್ತು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ರಾತ್ರಿ ಗ್ರಾಮದಲ್ಲಿನ ದೇವಸ್ಥಾನದಲ್ಲಿ ದೇವರನ್ನು ಗುಡಿಗುಂಬಿಸಲಾಯಿತು.</p>.<p>ಭಾನುವಾರ ಬೆಳಿಗ್ಗೆ ಗುಗ್ಗರಿ ಅಭಿಷೇಕ, 101 ಪೂಜೆಗಳು, ಸೂರ್ಯನ ಪಾಡ್ಯ ತೀರಿಸುವುದು, ದೇವರ ಎತ್ತುಗಳ ಬಸವಂತ ಕಾರ್ಯಕ್ರಮ, ಮಣೇವು ಕಾರ್ಯಕ್ರಮ, ದಾಸೋಹ ಕಾರ್ಯಗಳು ನಡೆದವು. ಚಿತ್ರದುರ್ಗ, ಬಳ್ಳಾರಿ ಹಾಗೂ ನೆರೆಯ ಆಂಧ್ರದ ಅನಂತಪುರ ಜಿಲ್ಲೆಗಳಿಂದ ಅಪಾರ ಭಕ್ತರು ಆಗಮಿಸಿ ಹರಕೆ ಒಪ್ಪಿಸಿದರು.</p>.<p>ಈ ದೇವರಿಗೆ ಸಂಬಂಧಪಟ್ಟ ಒಂಬತ್ತು ಮಂದಿ ಯಜಮಾನರು ನೇತೃತ್ವ ವಹಿಸಿದ್ದರು.</p>.<p><strong>ಸಹಪಠ್ಯ:</strong> ತಾಲ್ಲೂಕಿನ ಬಿ.ಜಿ. ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಈಚೆಗೆ ಕ್ಲಸ್ಟರ್ಮಟ್ಟದ ಸಹಪಠ್ಯ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಸರ್ವಶಿಕ್ಷಣ ಅಭಿಯಾನ ಅಡಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಯೆಟ್ ಉಪನ್ಯಾಸಕ ಡಿ. ಹನುಮಂತರಾಯಪ್ಪ, `ಮಕ್ಕಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ನೀಡುವ ಮೂಲಕ ಪರಿಪೂರ್ಣ ಶಿಕ್ಷಣ ಪಡೆದುಕೊಳ್ಳಲು ಪೋಷಕರು ಸಹಕಾರಿಯಾಗಬೇಕು~ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಜಯಣ್ಣ ವಹಿಸಿದ್ದರು.</p>.<p>ಡಯೆಟ್ ಉಪನ್ಯಾಸಕರಾದ ಬಿ.ವಿ. ಸುಧಾ, ರೇಣುಕಮ್ಮ, ಶಾಲಾಭಿವೃದ್ಧಿ ಸಮಿತಿಯ ನಾಗೇಶ್, ಮುಖ್ಯಶಿಕ್ಷಕ ಎ.ಕೆ.ಡಿ. ದುರುಗಪ್ಪ ಮತ್ತು ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.<br /> ಐಆರ್ಟಿ ಮಂಜುನಾಥ್ ಸ್ವಾಗತಿಸಿದರು. ಶಿಕ್ಷಕ ಅಶೋಕ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರುದ್ರಮ್ಮನಹಳ್ಳಿಯಲ್ಲಿನ ನಾಯಕ ಜನಾಂಗದ ನಲಜರುವ ಓಬಳಸ್ವಾಮಿ ದೇವರ ನೂತನ ಪೂಜಾರಿಗಳ ಪಟ್ಟಾಭಿಷೇಕ ಮತ್ತು ಕಡುಬಿನ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಶನಿವಾರ ನೂತನ ಪೂಜಾರಿಗಳಿಗೆ ಪಟ್ಟಾಭಿಷೇಕ ಮಾಡಲಾಗಿತ್ತು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ರಾತ್ರಿ ಗ್ರಾಮದಲ್ಲಿನ ದೇವಸ್ಥಾನದಲ್ಲಿ ದೇವರನ್ನು ಗುಡಿಗುಂಬಿಸಲಾಯಿತು.</p>.<p>ಭಾನುವಾರ ಬೆಳಿಗ್ಗೆ ಗುಗ್ಗರಿ ಅಭಿಷೇಕ, 101 ಪೂಜೆಗಳು, ಸೂರ್ಯನ ಪಾಡ್ಯ ತೀರಿಸುವುದು, ದೇವರ ಎತ್ತುಗಳ ಬಸವಂತ ಕಾರ್ಯಕ್ರಮ, ಮಣೇವು ಕಾರ್ಯಕ್ರಮ, ದಾಸೋಹ ಕಾರ್ಯಗಳು ನಡೆದವು. ಚಿತ್ರದುರ್ಗ, ಬಳ್ಳಾರಿ ಹಾಗೂ ನೆರೆಯ ಆಂಧ್ರದ ಅನಂತಪುರ ಜಿಲ್ಲೆಗಳಿಂದ ಅಪಾರ ಭಕ್ತರು ಆಗಮಿಸಿ ಹರಕೆ ಒಪ್ಪಿಸಿದರು.</p>.<p>ಈ ದೇವರಿಗೆ ಸಂಬಂಧಪಟ್ಟ ಒಂಬತ್ತು ಮಂದಿ ಯಜಮಾನರು ನೇತೃತ್ವ ವಹಿಸಿದ್ದರು.</p>.<p><strong>ಸಹಪಠ್ಯ:</strong> ತಾಲ್ಲೂಕಿನ ಬಿ.ಜಿ. ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಈಚೆಗೆ ಕ್ಲಸ್ಟರ್ಮಟ್ಟದ ಸಹಪಠ್ಯ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಸರ್ವಶಿಕ್ಷಣ ಅಭಿಯಾನ ಅಡಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಯೆಟ್ ಉಪನ್ಯಾಸಕ ಡಿ. ಹನುಮಂತರಾಯಪ್ಪ, `ಮಕ್ಕಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ನೀಡುವ ಮೂಲಕ ಪರಿಪೂರ್ಣ ಶಿಕ್ಷಣ ಪಡೆದುಕೊಳ್ಳಲು ಪೋಷಕರು ಸಹಕಾರಿಯಾಗಬೇಕು~ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಜಯಣ್ಣ ವಹಿಸಿದ್ದರು.</p>.<p>ಡಯೆಟ್ ಉಪನ್ಯಾಸಕರಾದ ಬಿ.ವಿ. ಸುಧಾ, ರೇಣುಕಮ್ಮ, ಶಾಲಾಭಿವೃದ್ಧಿ ಸಮಿತಿಯ ನಾಗೇಶ್, ಮುಖ್ಯಶಿಕ್ಷಕ ಎ.ಕೆ.ಡಿ. ದುರುಗಪ್ಪ ಮತ್ತು ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.<br /> ಐಆರ್ಟಿ ಮಂಜುನಾಥ್ ಸ್ವಾಗತಿಸಿದರು. ಶಿಕ್ಷಕ ಅಶೋಕ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>