<p><strong>ಹೊನ್ನಾಳಿ: </strong>ಇನ್ನೂ 2 ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲ್ಲೂಕಿನ ಸಾಸ್ವೆಹಳ್ಳಿಯಲ್ಲಿ ಈಚೆಗೆ ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಭಿನ್ನಮತ ಇಲ್ಲ ಎಂದರು.<br /> <br /> ಯಾವುದೇ ಜಾತಿ, ವರ್ಗ ಭೇದವಿಲ್ಲದೇ ಎಲ್ಲಾ ಮಠ-ಮಂದಿರಗಳಿಗೆ ಯಡಿಯೂರಪ್ಪ ಅನುದಾನ ನೀಡುತ್ತಾ ಬಂದಿದ್ದಾರೆ, ಆದರೆ, ವಿರೋಧ ಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುತ್ತಿವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.<br /> <br /> ಬಿಜೆಪಿ ಸರ್ಕಾರದ ಸಾಧನೆಗಳನ್ನು ಗಮನಿಸಿ, ಎಪಿಎಂಸಿ ಚುನಾವಣೆಗೆ ಸಾಸ್ವೆಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿರುವ ಹನುಮನಹಳ್ಳಿ ರವಿಕುಮಾರ್ ಅವರಿಗೆ ಮತ ನೀಡಿ ಜಯಶೀಲರನ್ನಾಗಿಸಬೇಕು ಎಂದು ಅವರು ಮತದಾರರಲ್ಲಿ ವಿನಂತಿಸಿದರು.<br /> <br /> ಹಣ ಬಿಡುಗಡೆ: ಸಾಸ್ವೆಹಳ್ಳಿ ಹೋಬಳಿ ಅಭಿವೃದ್ಧಿಗೆ ಸರ್ಕಾರ ` 15 ಕೋಟಿ ಬಿಡುಗಡೆ ಮಾಡಿದೆ, ಮೂಲ ಸೌಲಭ್ಯಗಳಾದ ರಸ್ತೆ, ಚರಂಡಿ ಇತರ ಕಾರ್ಯಗಳಿಗಾಗಿ ಈ ಹಣ ಬಳಸಲಾಗುವುದು ಎಂದು ಹೇಳಿದರು.<br /> <br /> ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಗದ್ದಿಗೇಶ್ ಮಾತನಾಡಿ, ರಾಂಪುರದಲ್ಲಿ ಸರ್ಕಾರಿ ಪ್ರೌಢಶಾಲೆ, ಕ್ಯಾಸಿನಕೆರೆಯಲ್ಲಿ ಆಯುರ್ವೇದಿಕ್ ಆಸ್ಪತ್ರೆ, ರಸ್ತೆ ನಿರ್ಮಾಣ ಮುಂತಾದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.<br /> <br /> ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾಬಾಯಿ ಮಾತನಾಡಿ, ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ಇದೇ ತಿಂಗಳಲ್ಲಿ ಹೊನ್ನಾಳಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.<br /> <br /> ಸಾಸ್ವೆಹಳ್ಳಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong>ಇನ್ನೂ 2 ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲ್ಲೂಕಿನ ಸಾಸ್ವೆಹಳ್ಳಿಯಲ್ಲಿ ಈಚೆಗೆ ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಭಿನ್ನಮತ ಇಲ್ಲ ಎಂದರು.<br /> <br /> ಯಾವುದೇ ಜಾತಿ, ವರ್ಗ ಭೇದವಿಲ್ಲದೇ ಎಲ್ಲಾ ಮಠ-ಮಂದಿರಗಳಿಗೆ ಯಡಿಯೂರಪ್ಪ ಅನುದಾನ ನೀಡುತ್ತಾ ಬಂದಿದ್ದಾರೆ, ಆದರೆ, ವಿರೋಧ ಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುತ್ತಿವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.<br /> <br /> ಬಿಜೆಪಿ ಸರ್ಕಾರದ ಸಾಧನೆಗಳನ್ನು ಗಮನಿಸಿ, ಎಪಿಎಂಸಿ ಚುನಾವಣೆಗೆ ಸಾಸ್ವೆಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿರುವ ಹನುಮನಹಳ್ಳಿ ರವಿಕುಮಾರ್ ಅವರಿಗೆ ಮತ ನೀಡಿ ಜಯಶೀಲರನ್ನಾಗಿಸಬೇಕು ಎಂದು ಅವರು ಮತದಾರರಲ್ಲಿ ವಿನಂತಿಸಿದರು.<br /> <br /> ಹಣ ಬಿಡುಗಡೆ: ಸಾಸ್ವೆಹಳ್ಳಿ ಹೋಬಳಿ ಅಭಿವೃದ್ಧಿಗೆ ಸರ್ಕಾರ ` 15 ಕೋಟಿ ಬಿಡುಗಡೆ ಮಾಡಿದೆ, ಮೂಲ ಸೌಲಭ್ಯಗಳಾದ ರಸ್ತೆ, ಚರಂಡಿ ಇತರ ಕಾರ್ಯಗಳಿಗಾಗಿ ಈ ಹಣ ಬಳಸಲಾಗುವುದು ಎಂದು ಹೇಳಿದರು.<br /> <br /> ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಗದ್ದಿಗೇಶ್ ಮಾತನಾಡಿ, ರಾಂಪುರದಲ್ಲಿ ಸರ್ಕಾರಿ ಪ್ರೌಢಶಾಲೆ, ಕ್ಯಾಸಿನಕೆರೆಯಲ್ಲಿ ಆಯುರ್ವೇದಿಕ್ ಆಸ್ಪತ್ರೆ, ರಸ್ತೆ ನಿರ್ಮಾಣ ಮುಂತಾದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.<br /> <br /> ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾಬಾಯಿ ಮಾತನಾಡಿ, ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ಇದೇ ತಿಂಗಳಲ್ಲಿ ಹೊನ್ನಾಳಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.<br /> <br /> ಸಾಸ್ವೆಹಳ್ಳಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>