<p><strong>ಮಲೇಬೆನ್ನೂರು:</strong> ಪಟ್ಟಣದ ಸುತ್ತಮುತ್ತ ಭಾನುವಾರ ತಡ ರಾತ್ರಿ ಕೋಲ್ಮಿಂಚು, ಗುಡುಗು ಸಿಡಿಲು ಬಿರುಗಾಳಿ ಆಲಿಕಲ್ಲು ಸಹಿತ ಬಿರುಮಳೆ ಸುರಿಯಿತು.</p>.<p>ಕಳೆದ ಕೆಲವು ದಿನಗಳಿಂದ ವಾತಾವರಣದ ಉಷ್ಣಾಂಶ ಹೆಚ್ಚಾಗಿ ಬಿಸಿಗಾಳಿ ಬೀಸಿ ನಾಗರಿಕರು ಧಗೆಯಿಂದ ಕಂಗಾಲಾಗಿದ್ದರು.</p>.<p>ಬಿರುಮಳೆ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಕಾರಣ ವಾತಾವರಣ ತಂಪಾಯಿತು.ಮೋರಿಗಳು ಸ್ವಚ್ಛವಾದವು.</p>.<p>ಕಾಳುಕಟ್ಟಿ ಅರೆಬರೆ ಒಣಗಿದ್ದ ಭತ್ತದ ಬೆಳೆ ಗಾಳಿಹೊಡೆತಕ್ಕೆ ಸಿಲುಕಿ ಚಾಪೆ ಹಾಸಿದೆ. ಕಷ್ಟಪಟ್ಟು ಬೆಳೆದ ಭತ್ತ ಕಟಾವಿನ ವೇಳೆ ನೆಲದ ಪಾಲಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು.</p>.<p>ನೀರಿನ ಕೊರತೆ ಅನುಭವಿಸುತ್ತಿದ್ದ ತಡವಾಗಿ ಹಚ್ಚಿದ ಭತ್ತದ ಬೆಳೆ ಹಾಗೂ ಅಡಿಕೆ ತೆಂಗಿನ ತೋಟಕ್ಕೆ ಮಳೆ ಸುರಿದಿರುವುದು ಅನುಕೂಲವಾಗಿದೆ ಎಂದು ರೈತರು ತಿಳಿಸಿದರು.</p>.<p>ಪಟ್ಟಣದ ಬಸವೇಶ್ವರ ಬಡಾವಣೆಯ ಮನೆಯ ಚಾವಣಿಗೆ ಹೊದಿಸಿದ್ದ ಜಿಐ ಶೀಟ್ಗಳು ಹಾರಿ ಬಿದ್ದು ವಿದ್ಯುತ್ ಕಂಬ ಮುರಿದುಬಿದ್ದಿದೆ.</p>.<p>ಯಾವುದೇ ಜೀವಹಾನಿ ಸಂಭವಿಸಿಲ್ಲ. ವಿದ್ಯುತ್ ಪೂರೈಸುವ ಕಂಬಗಳಿಗೆ ಹಾನಿಯಾಗಿದ್ದು, ಸೋಮವಾರ ಬೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು:</strong> ಪಟ್ಟಣದ ಸುತ್ತಮುತ್ತ ಭಾನುವಾರ ತಡ ರಾತ್ರಿ ಕೋಲ್ಮಿಂಚು, ಗುಡುಗು ಸಿಡಿಲು ಬಿರುಗಾಳಿ ಆಲಿಕಲ್ಲು ಸಹಿತ ಬಿರುಮಳೆ ಸುರಿಯಿತು.</p>.<p>ಕಳೆದ ಕೆಲವು ದಿನಗಳಿಂದ ವಾತಾವರಣದ ಉಷ್ಣಾಂಶ ಹೆಚ್ಚಾಗಿ ಬಿಸಿಗಾಳಿ ಬೀಸಿ ನಾಗರಿಕರು ಧಗೆಯಿಂದ ಕಂಗಾಲಾಗಿದ್ದರು.</p>.<p>ಬಿರುಮಳೆ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಕಾರಣ ವಾತಾವರಣ ತಂಪಾಯಿತು.ಮೋರಿಗಳು ಸ್ವಚ್ಛವಾದವು.</p>.<p>ಕಾಳುಕಟ್ಟಿ ಅರೆಬರೆ ಒಣಗಿದ್ದ ಭತ್ತದ ಬೆಳೆ ಗಾಳಿಹೊಡೆತಕ್ಕೆ ಸಿಲುಕಿ ಚಾಪೆ ಹಾಸಿದೆ. ಕಷ್ಟಪಟ್ಟು ಬೆಳೆದ ಭತ್ತ ಕಟಾವಿನ ವೇಳೆ ನೆಲದ ಪಾಲಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು.</p>.<p>ನೀರಿನ ಕೊರತೆ ಅನುಭವಿಸುತ್ತಿದ್ದ ತಡವಾಗಿ ಹಚ್ಚಿದ ಭತ್ತದ ಬೆಳೆ ಹಾಗೂ ಅಡಿಕೆ ತೆಂಗಿನ ತೋಟಕ್ಕೆ ಮಳೆ ಸುರಿದಿರುವುದು ಅನುಕೂಲವಾಗಿದೆ ಎಂದು ರೈತರು ತಿಳಿಸಿದರು.</p>.<p>ಪಟ್ಟಣದ ಬಸವೇಶ್ವರ ಬಡಾವಣೆಯ ಮನೆಯ ಚಾವಣಿಗೆ ಹೊದಿಸಿದ್ದ ಜಿಐ ಶೀಟ್ಗಳು ಹಾರಿ ಬಿದ್ದು ವಿದ್ಯುತ್ ಕಂಬ ಮುರಿದುಬಿದ್ದಿದೆ.</p>.<p>ಯಾವುದೇ ಜೀವಹಾನಿ ಸಂಭವಿಸಿಲ್ಲ. ವಿದ್ಯುತ್ ಪೂರೈಸುವ ಕಂಬಗಳಿಗೆ ಹಾನಿಯಾಗಿದ್ದು, ಸೋಮವಾರ ಬೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>