ಶಾಸಕ ಡಿ.ಸುಧಾಕರ್ ತೇರುಮಲ್ಲೇಶ್ವರ, ಚಂದ್ರಮೌಳೇಶ್ವರ ಹಾಗೂ ಉಮಾಮಹೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು. ಪೂಜೆಯ ನಂತರ ಚರ್ಮ ವಾದ್ಯದ ನಡುವೆ ಅಲಂಕರಿಸಿದ ರಥಕ್ಕೆ ದೇವರನ್ನು ಕರೆತಂದು ಕೂರಿಸಿದ ನಂತರ ರಥೋತ್ಸವಕ್ಕೆ ಚಾಲನೆ ಸಿಕ್ಕಿತು.
ದೇವಸ್ಥಾನದ ಮುಂಭಾಗದಿಂದ ಸಿದ್ಧನಾಯಕ ವೃತ್ತದವರೆಗೆ ಅಪಾರ ಜನಸ್ತೋಮದ ಉದ್ಗೋಷದ ನಡುವೆ ರಥ ಸಾಗಿತು. ಸಿದ್ಧನಾಯಕ ವೃತ್ತದಲ್ಲಿ ಸಾವಿರಾರು ಭಕ್ತರು ದೇವರಿಗೆ ಹರಕೆ ಸಲ್ಲಿಸಿದರು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ತೇರುಮಲ್ಲೇಶ್ವರ, ಚಂದ್ರಮೌಳೇಶ್ವರ ಹಾಗೂ ಉಮಾ ಮಹೇಶ್ವರಸ್ವಾಮಿ ರಥೋತ್ಸವ ಒಟ್ಟಿಗೇ ನಡೆಯುವುದು ವಿಶೇಷ ಎನ್ನುತ್ತಾರೆ ಹಿರಿಯರು.
ರಥೋತ್ಸವದಲ್ಲಿ ಶಾಸಕ ಡಿ.ಸುಧಾಕರ್, ಜಾತ್ರಾ ಸಮಿತಿ ಅಧ್ಯಕ್ಷ ಆರ್.ನಾಗೇಂದ್ರನಾಯ್ಕ, ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮತ್ತಿತರರು ಭಾಗವಹಿಸಿದ್ದರು.