‘ಈ ಪ್ರದೇಶದಲ್ಲಿ ಚರಂಡಿ, ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪಾಲಿಕೆ ಹಾಗೂ ಸರ್ಕಾರ ಕಲ್ಪಿಸಿಲ್ಲ. ಈ ಬಗ್ಗೆ ಇದೇ ಪ್ರದೇಶದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ, ತಹಶೀಲ್ದಾರ್, ಪಾಲಿಕೆ ಆಯುಕ್ತರು, ಮೇಯರ್ ಎಲ್ಲರನ್ನೂ ಭೇಟಿ ಮಾಡಿದ್ದೇವೆ. ಯಾರಿಂದಲೂ ಸ್ಪಂದನೆ ಸಿಗಲಿಲ್ಲ. ಹಾಗಾಗಿ, ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ’ ಎನ್ನುತ್ತಾರೆ ದಾವಣಗೆರೆಯ ವಿನಾಯಕ ನಗರ ‘ಎ’ ಬ್ಲಾಕ್ ನಿವಾಸಿಗಳ ನಾಗರಿಕ ಹಿತರಕ್ಷಣಾ ಸಮಿತಿ ಸದಸ್ಯ ದಾನೇಶ್.