<p><strong>ದಾವಣಗೆರೆ:</strong> ಇಂದು ಶಿಕ್ಷಣ, ಉದ್ಯೋಗ, ಆರೋಗ್ಯ, ನೀರು, ಭೂಮಿ ಎಲ್ಲವೂ ಮಾಫಿಯಾಗಳ ಹಿಡಿತದಲ್ಲಿವೆ. ಈ ಮಾಫಿಯಾಗಳ ಬಿಗಿಹಿಡಿತದಿಂದ ಬಿಡಿಸಿಕೊಳ್ಳಲು ಸಮ ಸಮಾಜ ನಿರ್ಮಾಣಕ್ಕೆ ಸಂಘಟಿತ ಹೋರಾಟ ವೊಂದೇ ಮಾರ್ಗ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕ ನೂರ್ ಶ್ರೀಧರ್ ಪ್ರತಿಪಾದಿಸಿದರು.<br /> <br /> ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಚಾರಾಂದೋಲನ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಹಿಂದೆ ಮಾಫಿಯಾಗಳ ಹಿಡಿತ ಗೋಚರವಾಗುತ್ತಿರಲಿಲ್ಲ. ಈಗ ಮಾಫಿಯಾಗಳು ಮುಖ್ಯವಾಹಿನಿಗೆ ಬಂದು ನಿಂತಿದ್ದು, ಇಡೀ ವ್ಯವಸ್ಥೆಯನ್ನೇ ನಿಯಂತ್ರಿಸುತ್ತಿವೆ. ಎಲ್ಲರಿಗೂ ಸಿಗಬೇಕಾದ ಶಿಕ್ಷಣ, ಉದ್ಯೋಗ, ಆರೋಗ್ಯ, ನೀರು, ಭೂಮಿ ಇಂದು ಕೆಲವೇ ಜನರ ಕೈ ಸೇರುತ್ತಿರುವುದು ಅಪಾಯಕಾರಿ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಭೂಮಿ ಇಂದು ಕೇವಲ ರೈತರ ಪ್ರಶ್ನೆಯಾಗಿ ಉಳಿದಿಲ್ಲ. ಬಂಡವಾಳ ಶಾಹಿಗೆ ಅದೊಂದು ಹೂಡಿಕೆಯ ಮಾರ್ಗವಾಗಿ, ರಾಜಕಾರಣಿಗಳಿಗೆ ಸಂಪತ್ತಿನ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವಿಶ್ಲೇಷಿಸಿದರು.<br /> <br /> ‘ಉಳುಮೆ ಮಾಡಿ, ಆ ಜಾಗದಲ್ಲೇ ವಾಸ ಮಾಡುವ ರೈತನಿಗೆ ಇದುವರೆಗೂ ಭೂಮಿಯ ಒಡೆತನ ಸಿಕ್ಕಿಲ್ಲ. ರಾಜ್ಯದಲ್ಲಿ ಹಕ್ಕುಪತ್ರಕ್ಕಾಗಿ ಸಲ್ಲಿಸಿದ್ದ 4 ಲಕ್ಷ ಬಗರ್ಹುಕುಂ ಅರ್ಜಿಗಳು ಇನ್ನೂ ವಿಲೇಯಾಗಿಲ್ಲ. ವಿಲೇ ಮಾಡುವುದಕ್ಕಾಗಿಯೇ ಇರುವ ಭೂನ್ಯಾಯ ಮಂಡಳಿ ಕೆಲಸ ಮಾಡುತ್ತಿಲ್ಲ. ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ಇದ್ದು ಸುಮ್ಮನೆ ಕುಳಿತಿದೆ’ ಎಂದು ಆರೋಪಿಸಿದರು.<br /> <br /> ರಾಜ್ಯದಲ್ಲಿ ಸಾಕಷ್ಟು ಸರ್ಕಾರಿ ಭೂಮಿ ಒತ್ತುವರಿ ಆಗಿದೆ. ಈ ಬಗ್ಗೆ ವರದಿ ನೀಡಲು ಸರ್ಕಾರವೇ ನೇಮಿಸಿದ್ದ ಎ.ಟಿ.ರಾಮಸ್ವಾಮಿ ಹಾಗೂ ಬಾಲ ಸುಬ್ರಹ್ಮಣ್ಯನ್ ಸಮಿತಿಗಳು ವರದಿ ನೀಡಿ ಹಲವು ವರ್ಷಗಳು ಕಳೆದಿವೆ. ತಪ್ಪಿತಸ್ಥರ ವಿರುದ್ಧ ಇದುವರೆಗೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಆಗಸ್ಟ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ಜುಲೈ 20ರಂದು ಕರೆ ನೀಡಿದ್ದ ಜಿಲ್ಲಾ ಕೇಂದ್ರಗಳಲ್ಲಿನ ಹೋರಾಟಕ್ಕೆ ಉತ್ತಮ ಯಶಸ್ಸು ಸಿಕ್ಕಿದೆ ಎಂದು ಹೇಳಿದರು.<br /> <br /> ಆಗಸ್ಟ್ 9ರಂದೇ ಪ್ರಚಾ ರಾಂದೋಲನ ಸಭೆ ಆರಂಭಿಸಿದ್ದಕ್ಕೂ ವಿಶೇಷ ಕಾರಣವಿದ್ದು, ಕ್ವಿಟ್ ಇಂಡಿಯಾ ಎಂದು ಬ್ರಿಟಿಷ್ರಿಗೆ ಭಾರತ ಕರೆ ಕೊಟ್ಟ ದಿನ ಇದು ಎಂದು ಅವರು ಸ್ಮರಿಸಿದರು. ಅರಸು ಪರಂಪರೆಯ ರಾಜಕಾರಣವನ್ನು ಮುಂದುವರಿ ಸುತ್ತಿರುವುದಾಗಿ ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ<br /> <br /> ಅವರಿಗೆ ಬದ್ಧತೆ ಇದ್ದರೆ ಭೂಮಿ ಹೊಂದಿದವರಿಗೆ ಹಕ್ಕುಪತ್ರ ನೀಡಬೇಕು. ಇಲ್ಲದಿದ್ದರೆ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.<br /> <br /> ರಾಜ್ಯ ರೈತ ಸಂಘದ ಅಧ್ಯಕ್ಷ ಹೊನ್ನೂರು ಮುನಿಯಪ್ಪ ಮಾತನಾಡಿ, ದಾವಣಗೆರೆಯಲ್ಲೂ ಭೂ ಮಾಫಿಯಾ ಹೆಚ್ಚಾಗಿದೆ. ಸರ್ಕಾರಿ ಭೂಮಿ ಉಳ್ಳವರ ಪಾಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ರೈತ ಸಂಘಟನೆಗಳ ಸಂಚಾಲಕ ರವಿಕುಮಾರ್ ಮಾತನಾಡಿ, ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ಸಬ್ಸಿಡಿ ದರದಲ್ಲಿ ಸರ್ಕಾರದಿಂದ ನಿವೇಶನ ಪಡೆದುಕೊಳ್ಳುವ ಉದ್ಯಮಿಗಳು ಆ ನಿವೇಶನವನ್ನು ಖಾಲಿ ಬಿಟ್ಟು ಹಲವು ವರ್ಷಗಳ ನಂತರ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಇದರಿಂದ ನಿಜವಾದ ಭೂರಹಿತರಿಗೆ ಭೂಮಿ ಸಿಗುತ್ತಿಲ್ಲ ಎಂದು<br /> ದೂರಿದರು.<br /> <br /> ಸಭೆಯಲ್ಲಿ ರೈತ ಸಂಘ ಹಾಗೂ ಹಸಿರುಸೇನೆ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಾಪುರದ ದೇವರಾಜ್, ವಕೀಲ ಅನಿಷ್ ಪಾಶ ಮಾತನಾಡಿದರು. ವಿವಿಧ<br /> ಸಂಘಟನೆಗಳ ಮುಖಂಡರಾದ ಕರಿಬಸಪ್ಪ, ಜಮೀನಾ ಖಾನಂ, ಗೋಪಿ ನಾಯ್ಕ, ಕೆಂಪರಾಜು, ಚಿಕ್ಕನಹಳ್ಳಿ ಮಲ್ಲೇಶಪ್ಪ, ಈಚಘಟ್ಟ ರುದ್ರೇಶ್, ಅಂದನೂರು ಮಂಜುನಾಥ್, ನಾಗರಾಜ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಂದು ಶಿಕ್ಷಣ, ಉದ್ಯೋಗ, ಆರೋಗ್ಯ, ನೀರು, ಭೂಮಿ ಎಲ್ಲವೂ ಮಾಫಿಯಾಗಳ ಹಿಡಿತದಲ್ಲಿವೆ. ಈ ಮಾಫಿಯಾಗಳ ಬಿಗಿಹಿಡಿತದಿಂದ ಬಿಡಿಸಿಕೊಳ್ಳಲು ಸಮ ಸಮಾಜ ನಿರ್ಮಾಣಕ್ಕೆ ಸಂಘಟಿತ ಹೋರಾಟ ವೊಂದೇ ಮಾರ್ಗ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕ ನೂರ್ ಶ್ರೀಧರ್ ಪ್ರತಿಪಾದಿಸಿದರು.<br /> <br /> ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಚಾರಾಂದೋಲನ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಹಿಂದೆ ಮಾಫಿಯಾಗಳ ಹಿಡಿತ ಗೋಚರವಾಗುತ್ತಿರಲಿಲ್ಲ. ಈಗ ಮಾಫಿಯಾಗಳು ಮುಖ್ಯವಾಹಿನಿಗೆ ಬಂದು ನಿಂತಿದ್ದು, ಇಡೀ ವ್ಯವಸ್ಥೆಯನ್ನೇ ನಿಯಂತ್ರಿಸುತ್ತಿವೆ. ಎಲ್ಲರಿಗೂ ಸಿಗಬೇಕಾದ ಶಿಕ್ಷಣ, ಉದ್ಯೋಗ, ಆರೋಗ್ಯ, ನೀರು, ಭೂಮಿ ಇಂದು ಕೆಲವೇ ಜನರ ಕೈ ಸೇರುತ್ತಿರುವುದು ಅಪಾಯಕಾರಿ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಭೂಮಿ ಇಂದು ಕೇವಲ ರೈತರ ಪ್ರಶ್ನೆಯಾಗಿ ಉಳಿದಿಲ್ಲ. ಬಂಡವಾಳ ಶಾಹಿಗೆ ಅದೊಂದು ಹೂಡಿಕೆಯ ಮಾರ್ಗವಾಗಿ, ರಾಜಕಾರಣಿಗಳಿಗೆ ಸಂಪತ್ತಿನ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವಿಶ್ಲೇಷಿಸಿದರು.<br /> <br /> ‘ಉಳುಮೆ ಮಾಡಿ, ಆ ಜಾಗದಲ್ಲೇ ವಾಸ ಮಾಡುವ ರೈತನಿಗೆ ಇದುವರೆಗೂ ಭೂಮಿಯ ಒಡೆತನ ಸಿಕ್ಕಿಲ್ಲ. ರಾಜ್ಯದಲ್ಲಿ ಹಕ್ಕುಪತ್ರಕ್ಕಾಗಿ ಸಲ್ಲಿಸಿದ್ದ 4 ಲಕ್ಷ ಬಗರ್ಹುಕುಂ ಅರ್ಜಿಗಳು ಇನ್ನೂ ವಿಲೇಯಾಗಿಲ್ಲ. ವಿಲೇ ಮಾಡುವುದಕ್ಕಾಗಿಯೇ ಇರುವ ಭೂನ್ಯಾಯ ಮಂಡಳಿ ಕೆಲಸ ಮಾಡುತ್ತಿಲ್ಲ. ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ಇದ್ದು ಸುಮ್ಮನೆ ಕುಳಿತಿದೆ’ ಎಂದು ಆರೋಪಿಸಿದರು.<br /> <br /> ರಾಜ್ಯದಲ್ಲಿ ಸಾಕಷ್ಟು ಸರ್ಕಾರಿ ಭೂಮಿ ಒತ್ತುವರಿ ಆಗಿದೆ. ಈ ಬಗ್ಗೆ ವರದಿ ನೀಡಲು ಸರ್ಕಾರವೇ ನೇಮಿಸಿದ್ದ ಎ.ಟಿ.ರಾಮಸ್ವಾಮಿ ಹಾಗೂ ಬಾಲ ಸುಬ್ರಹ್ಮಣ್ಯನ್ ಸಮಿತಿಗಳು ವರದಿ ನೀಡಿ ಹಲವು ವರ್ಷಗಳು ಕಳೆದಿವೆ. ತಪ್ಪಿತಸ್ಥರ ವಿರುದ್ಧ ಇದುವರೆಗೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಆಗಸ್ಟ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ಜುಲೈ 20ರಂದು ಕರೆ ನೀಡಿದ್ದ ಜಿಲ್ಲಾ ಕೇಂದ್ರಗಳಲ್ಲಿನ ಹೋರಾಟಕ್ಕೆ ಉತ್ತಮ ಯಶಸ್ಸು ಸಿಕ್ಕಿದೆ ಎಂದು ಹೇಳಿದರು.<br /> <br /> ಆಗಸ್ಟ್ 9ರಂದೇ ಪ್ರಚಾ ರಾಂದೋಲನ ಸಭೆ ಆರಂಭಿಸಿದ್ದಕ್ಕೂ ವಿಶೇಷ ಕಾರಣವಿದ್ದು, ಕ್ವಿಟ್ ಇಂಡಿಯಾ ಎಂದು ಬ್ರಿಟಿಷ್ರಿಗೆ ಭಾರತ ಕರೆ ಕೊಟ್ಟ ದಿನ ಇದು ಎಂದು ಅವರು ಸ್ಮರಿಸಿದರು. ಅರಸು ಪರಂಪರೆಯ ರಾಜಕಾರಣವನ್ನು ಮುಂದುವರಿ ಸುತ್ತಿರುವುದಾಗಿ ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ<br /> <br /> ಅವರಿಗೆ ಬದ್ಧತೆ ಇದ್ದರೆ ಭೂಮಿ ಹೊಂದಿದವರಿಗೆ ಹಕ್ಕುಪತ್ರ ನೀಡಬೇಕು. ಇಲ್ಲದಿದ್ದರೆ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.<br /> <br /> ರಾಜ್ಯ ರೈತ ಸಂಘದ ಅಧ್ಯಕ್ಷ ಹೊನ್ನೂರು ಮುನಿಯಪ್ಪ ಮಾತನಾಡಿ, ದಾವಣಗೆರೆಯಲ್ಲೂ ಭೂ ಮಾಫಿಯಾ ಹೆಚ್ಚಾಗಿದೆ. ಸರ್ಕಾರಿ ಭೂಮಿ ಉಳ್ಳವರ ಪಾಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ರೈತ ಸಂಘಟನೆಗಳ ಸಂಚಾಲಕ ರವಿಕುಮಾರ್ ಮಾತನಾಡಿ, ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ಸಬ್ಸಿಡಿ ದರದಲ್ಲಿ ಸರ್ಕಾರದಿಂದ ನಿವೇಶನ ಪಡೆದುಕೊಳ್ಳುವ ಉದ್ಯಮಿಗಳು ಆ ನಿವೇಶನವನ್ನು ಖಾಲಿ ಬಿಟ್ಟು ಹಲವು ವರ್ಷಗಳ ನಂತರ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಇದರಿಂದ ನಿಜವಾದ ಭೂರಹಿತರಿಗೆ ಭೂಮಿ ಸಿಗುತ್ತಿಲ್ಲ ಎಂದು<br /> ದೂರಿದರು.<br /> <br /> ಸಭೆಯಲ್ಲಿ ರೈತ ಸಂಘ ಹಾಗೂ ಹಸಿರುಸೇನೆ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಾಪುರದ ದೇವರಾಜ್, ವಕೀಲ ಅನಿಷ್ ಪಾಶ ಮಾತನಾಡಿದರು. ವಿವಿಧ<br /> ಸಂಘಟನೆಗಳ ಮುಖಂಡರಾದ ಕರಿಬಸಪ್ಪ, ಜಮೀನಾ ಖಾನಂ, ಗೋಪಿ ನಾಯ್ಕ, ಕೆಂಪರಾಜು, ಚಿಕ್ಕನಹಳ್ಳಿ ಮಲ್ಲೇಶಪ್ಪ, ಈಚಘಟ್ಟ ರುದ್ರೇಶ್, ಅಂದನೂರು ಮಂಜುನಾಥ್, ನಾಗರಾಜ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>