<p>ದಾವಣಗೆರೆ: ಬಹುವರ್ಷಗಳ ನಂತರ ನಗರದಲ್ಲಿ ರಾಜ್ಯಮಟ್ಟದ ಹೊನಲು-ಬೆಳಕಿನ ಪುರುಷರ ಕಬಡ್ಡಿ ಟೂರ್ನಿ ಆಯೋಜಿಸಲಾಗಿದೆ ಎಂದು ಶ್ರೀಗುರು ದ್ರೋಣಾ ಕ್ರೀಡಾ ಸಮಿತಿ ಅಧ್ಯಕ್ಷ ಆರ್. ಲಕ್ಷ್ಮಣ್ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಕಬಡ್ಡಿ ಟೂರ್ನಿ ಅ. 21ರಿಂದ 23ರವರೆಗೆ ನಗರದ ಲೇಬರ್ ಕಾಲೊನಿಯ ನಾಟ್ಯಚಾರ್ಯ ಕುಲಕರ್ಣಿ ರಂಗಮಂದಿರದ ಆವರಣದಲ್ಲಿ ನಡೆಸಲಾಗುತ್ತಿದ್ದು, ಅದಕ್ಕಾಗಿ ಎರಡು ಕಡೆ ಅಂಕಣ ಸಿದ್ಧತೆ ಚುರುಕಿನಿಂದ ನಡೆಯುತ್ತಿದೆ ಎಂದು ಅವರು ಹೇಳಿದರು.<br /> <br /> ಟೂರ್ನಿಗೆ ಬೆಂಗಳೂರಿನಿಂದಲೇ ರಾಷ್ಟ್ರೀಯ ಆಟಗಾರರನ್ನು ಒಳಗೊಂಡಿರುವ 20 ಕಬಡ್ಡಿ ತಂಡಗಳು ಹಾಗೂ ಧಾರವಾಡದ `ಸಾಯಿ~ ತಂಡ, ಮಂಗಳೂರಿನ `ಆಳ್ವಾಸ್~ ತಂಡ ಹಾಗೂ ಹಾವೇರಿ, ಚಿತ್ರದುರ್ಗ, ಬೆಳಗಾವಿ, ಹುಲಿಕೋಟೆ, ಚನ್ನರಾಯಪಟ್ಟಣಗಳಿಂದ ಟೂರ್ನಿ ಯಲ್ಲಿ ಒಟ್ಟು 40 ಕಬಡ್ಡಿ ತಂಡಗಳು ಸ್ಪರ್ಧಿಸುತ್ತಿವೆ. ಆಟಗಾರರಿಗೆ ವಸತಿ-ಊಟ ಕಲ್ಪಿಸಲಾಗಿದ್ದು, ಒಂದು ಕಡೆಯ ಸಾರಿಗೆ ವೆಚ್ಚ ಭರಿಸಲಾಗುತ್ತಿದೆ ಎಂದು ವಿವರಿಸಿದರು.<br /> <br /> ವರ್ಷದ ಹಿಂದೆ ಶಾಮನೂರಿನಲ್ಲಿ ಮಯೂರ ಕ್ರೀಡಾ ಸಮಿತಿ ವತಿಯಿಂದ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ಆಯೋಜಿಸಿದ್ದು ಹೊರತುಪಡಿಸಿದರೆ, ನಗರದಲ್ಲಿ ರಾಜ್ಯಮಟ್ಟದ ಟೂರ್ನಿ ನಡೆದು 10 ವರ್ಷಗಳೇ ಕಳೆದಿವೆ. ಸದ್ಯ ನಡೆಯುತ್ತಿರುವ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ನಗರದ ಕ್ರೀಡಾಪ್ರೇಮಿಗಳಿಗೆ ರಸದೌತಣ ನೀಡಲಿದೆ ಎಂದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಸಿ. ಲೋಕೇಶ್, ಕರಿಬಸಪ್ಪ, ಸೈಯದ್ ಮನ್ಸೂರ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಬಹುವರ್ಷಗಳ ನಂತರ ನಗರದಲ್ಲಿ ರಾಜ್ಯಮಟ್ಟದ ಹೊನಲು-ಬೆಳಕಿನ ಪುರುಷರ ಕಬಡ್ಡಿ ಟೂರ್ನಿ ಆಯೋಜಿಸಲಾಗಿದೆ ಎಂದು ಶ್ರೀಗುರು ದ್ರೋಣಾ ಕ್ರೀಡಾ ಸಮಿತಿ ಅಧ್ಯಕ್ಷ ಆರ್. ಲಕ್ಷ್ಮಣ್ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಕಬಡ್ಡಿ ಟೂರ್ನಿ ಅ. 21ರಿಂದ 23ರವರೆಗೆ ನಗರದ ಲೇಬರ್ ಕಾಲೊನಿಯ ನಾಟ್ಯಚಾರ್ಯ ಕುಲಕರ್ಣಿ ರಂಗಮಂದಿರದ ಆವರಣದಲ್ಲಿ ನಡೆಸಲಾಗುತ್ತಿದ್ದು, ಅದಕ್ಕಾಗಿ ಎರಡು ಕಡೆ ಅಂಕಣ ಸಿದ್ಧತೆ ಚುರುಕಿನಿಂದ ನಡೆಯುತ್ತಿದೆ ಎಂದು ಅವರು ಹೇಳಿದರು.<br /> <br /> ಟೂರ್ನಿಗೆ ಬೆಂಗಳೂರಿನಿಂದಲೇ ರಾಷ್ಟ್ರೀಯ ಆಟಗಾರರನ್ನು ಒಳಗೊಂಡಿರುವ 20 ಕಬಡ್ಡಿ ತಂಡಗಳು ಹಾಗೂ ಧಾರವಾಡದ `ಸಾಯಿ~ ತಂಡ, ಮಂಗಳೂರಿನ `ಆಳ್ವಾಸ್~ ತಂಡ ಹಾಗೂ ಹಾವೇರಿ, ಚಿತ್ರದುರ್ಗ, ಬೆಳಗಾವಿ, ಹುಲಿಕೋಟೆ, ಚನ್ನರಾಯಪಟ್ಟಣಗಳಿಂದ ಟೂರ್ನಿ ಯಲ್ಲಿ ಒಟ್ಟು 40 ಕಬಡ್ಡಿ ತಂಡಗಳು ಸ್ಪರ್ಧಿಸುತ್ತಿವೆ. ಆಟಗಾರರಿಗೆ ವಸತಿ-ಊಟ ಕಲ್ಪಿಸಲಾಗಿದ್ದು, ಒಂದು ಕಡೆಯ ಸಾರಿಗೆ ವೆಚ್ಚ ಭರಿಸಲಾಗುತ್ತಿದೆ ಎಂದು ವಿವರಿಸಿದರು.<br /> <br /> ವರ್ಷದ ಹಿಂದೆ ಶಾಮನೂರಿನಲ್ಲಿ ಮಯೂರ ಕ್ರೀಡಾ ಸಮಿತಿ ವತಿಯಿಂದ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ಆಯೋಜಿಸಿದ್ದು ಹೊರತುಪಡಿಸಿದರೆ, ನಗರದಲ್ಲಿ ರಾಜ್ಯಮಟ್ಟದ ಟೂರ್ನಿ ನಡೆದು 10 ವರ್ಷಗಳೇ ಕಳೆದಿವೆ. ಸದ್ಯ ನಡೆಯುತ್ತಿರುವ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ನಗರದ ಕ್ರೀಡಾಪ್ರೇಮಿಗಳಿಗೆ ರಸದೌತಣ ನೀಡಲಿದೆ ಎಂದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಸಿ. ಲೋಕೇಶ್, ಕರಿಬಸಪ್ಪ, ಸೈಯದ್ ಮನ್ಸೂರ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>