<p><strong>ಸಂತೇಬೆನ್ನೂರು:</strong> ವಿದ್ಯಾರ್ಥಿಗಳ ಆಸಕ್ತಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಅದರಂತೆ ಗ್ರಾಮಾಂತರ ಪ್ರದೇಶದಲ್ಲಿ ಸ್ನಾತಕೋತ್ತರ ಶಿಕ್ಷಣ ಕೇಂದ್ರ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.<br /> <br /> ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ 2011-12 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.<br /> ಸದ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪದವಿ ತರಗತಿಗಳು ನಡೆಯುತ್ತಿವೆ. <br /> <br /> ಹೊಸ ಕಟ್ಟಡ ಸ್ಥಾಪನೆಗೆ 8 ಎಕರೆ ಭೂಮಿ ಹಾಗೂ ರೂ 1.20ಕೋಟಿ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆಯೂ ಕೂಡ ಮುಗಿದು ಟ್ರಯಲ್ ಬೇಸ್ಮೆಂಟ್ ತೆಗೆಯಲಾಗಿದೆ ಎಂದರು. ಈ ತಿಂಗಳ ಕೊನೆಗೆ ಶಂಕುಸ್ಥಾಪನೆ ನೆರವೇರಿಸುವ ಭರವಸೆ ನೀಡಿದರು.<br /> <br /> ಇಲ್ಲಿನ ಕುಡಿಯುವ ನೀರಿನ ಯೋಜನೆಯು ಸೆ. 30ರ ವೇಳೆಗೆ ಪ್ರಾಯೋಗಿಕವಾಗಿ ಕಾರ್ಯರಂಭ ಮಾಡಲು ಸೂಚಿಸಲಾಗಿದೆ. ರಸ್ತೆ ಕಾಮಗಾರಿಯು ಶೀಘ್ರದಲ್ಲಿ ಆರಂಭಗೊಳ್ಳುವುವು ಎಂದರು.ಜಿ.ಪಂ. ಸದಸ್ಯೆ ಪ್ರೇಮಾ ಸಿದ್ದೇಶ್, ಎಂ.ಬಿ. ನಾಗರಾಜ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಈ. ಕೃಷ್ಣಪ್ಪ ವಹಿಸಿದ್ದರು.<br /> <br /> ಅತಿಥಿಗಳಾಗಿ ತಾ.ಪಂ. ಅಧ್ಯಕ್ಷೆ ಅನಸೂಯಮ್ಮ ಚಿದಾನಂದ ಮೂರ್ತಿ, ತಾ.ಪಂ. ಸದಸ್ಯ ಜೆ. ರಂಗನಾಥ್, ಗ್ರಾ.ಪಂ. ಅಧ್ಯಕ್ಷ ಸಂತೋಷ್. ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಪಿ. ವಾಗೀಶ್, ಪಿಎಸ್ಐ ಲಿಂಗನ ಗೌಡ ಉಪಸ್ಥಿತರಿದ್ದರು.<br /> <br /> <strong>ವಿವಿಧ ಕಾರ್ಯಕ್ರಮಗಳ ಉದ್ಘಾಟನೆ</strong><br /> ಇಲ್ಲಿನ ಎಸ್ಎಸ್ಜೆವಿಪಿ ಪಿಯು ಕಾಲೇಜು ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ, ವನ ಮಹೋತ್ಸವ, ಸೈಕಲ್ ವಿತರಣೆ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಕಾರ್ಯಕ್ರಮಗಳನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉದ್ಘಾಟಿಸಿದರು.<br /> <br /> ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ. ಸಿದ್ದಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಮೋತಿ ವೀರಪ್ಪ ಕಾಲೇಜಿನ ಪ್ರಾಂಶುಪಾಲ ಜಿ.ಬಿ. ಚಂದ್ರಶೇಖರಪ್ಪ ಉಪನ್ಯಾಸ ನೀಡಿದರು<br /> ಈಚೆಗೆ ನಿವೃತ್ತರಾದ ಪ್ರಾಂಶುಪಾಲ ಎ.ಬಿ. ಪಾಟೀಲ್ ಹಾಗೂ ಮುಖ್ಯೋಪಾಧ್ಯಾಯ ಇ. ಉಜ್ಜಪ್ಪ ಅವರನ್ನು ಸನ್ಮಾನಿಸಲಾಯಿತು. <br /> <br /> ಜಿ.ಪಂ. ಸದಸ್ಯೆ ಪ್ರೇಮಾ ಸಿದ್ದೇಶ್, ತಾ.ಪಂ. ಸದಸ್ಯ ಜೆ. ರಂಗನಾಥ್ ಮಕ್ಕಳಿಗೆ ಬೈಸಿಕಲ್ ವಿತರಿಸಿದರು.<br /> ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಶ್ರೀನಿವಾಸ ಮೂರ್ತಿ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಸಂತೋಷ್, ಎ.ಬಿ. ಪಾಟೀಲ್, ಈ. ಉಜ್ಜಪ್ಪ, ಪ್ರೇಮಾ ಸಿದ್ದೇಶ್ ಮಾತನಾಡಿದರು. ಪಿ. ವಾಗೀಶ್, ತಾ.ಪಂ.ಅಧ್ಯಕ್ಷೆ ಅನಸೂಯಮ್ಮ ಚಿದಾನಂದಮೂರ್ತಿ ಇದ್ದರು.<br /> <br /> ಶ್ರೀನಿಧಿ, ಶ್ರೀ ಲಕ್ಷ್ಮೀ ಪ್ರಾರ್ಥಿಸಿದರು, ವೈ. ಗಂಗಾಧರ್ ಸ್ವಾಗತಿಸಿದರು, ಸಿದ್ದೇಶ್ವರ್ ವಂದಿಸಿದರು ಪೈಜ್ನಟ್ರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು:</strong> ವಿದ್ಯಾರ್ಥಿಗಳ ಆಸಕ್ತಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಅದರಂತೆ ಗ್ರಾಮಾಂತರ ಪ್ರದೇಶದಲ್ಲಿ ಸ್ನಾತಕೋತ್ತರ ಶಿಕ್ಷಣ ಕೇಂದ್ರ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.<br /> <br /> ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ 2011-12 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.<br /> ಸದ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪದವಿ ತರಗತಿಗಳು ನಡೆಯುತ್ತಿವೆ. <br /> <br /> ಹೊಸ ಕಟ್ಟಡ ಸ್ಥಾಪನೆಗೆ 8 ಎಕರೆ ಭೂಮಿ ಹಾಗೂ ರೂ 1.20ಕೋಟಿ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆಯೂ ಕೂಡ ಮುಗಿದು ಟ್ರಯಲ್ ಬೇಸ್ಮೆಂಟ್ ತೆಗೆಯಲಾಗಿದೆ ಎಂದರು. ಈ ತಿಂಗಳ ಕೊನೆಗೆ ಶಂಕುಸ್ಥಾಪನೆ ನೆರವೇರಿಸುವ ಭರವಸೆ ನೀಡಿದರು.<br /> <br /> ಇಲ್ಲಿನ ಕುಡಿಯುವ ನೀರಿನ ಯೋಜನೆಯು ಸೆ. 30ರ ವೇಳೆಗೆ ಪ್ರಾಯೋಗಿಕವಾಗಿ ಕಾರ್ಯರಂಭ ಮಾಡಲು ಸೂಚಿಸಲಾಗಿದೆ. ರಸ್ತೆ ಕಾಮಗಾರಿಯು ಶೀಘ್ರದಲ್ಲಿ ಆರಂಭಗೊಳ್ಳುವುವು ಎಂದರು.ಜಿ.ಪಂ. ಸದಸ್ಯೆ ಪ್ರೇಮಾ ಸಿದ್ದೇಶ್, ಎಂ.ಬಿ. ನಾಗರಾಜ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಈ. ಕೃಷ್ಣಪ್ಪ ವಹಿಸಿದ್ದರು.<br /> <br /> ಅತಿಥಿಗಳಾಗಿ ತಾ.ಪಂ. ಅಧ್ಯಕ್ಷೆ ಅನಸೂಯಮ್ಮ ಚಿದಾನಂದ ಮೂರ್ತಿ, ತಾ.ಪಂ. ಸದಸ್ಯ ಜೆ. ರಂಗನಾಥ್, ಗ್ರಾ.ಪಂ. ಅಧ್ಯಕ್ಷ ಸಂತೋಷ್. ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಪಿ. ವಾಗೀಶ್, ಪಿಎಸ್ಐ ಲಿಂಗನ ಗೌಡ ಉಪಸ್ಥಿತರಿದ್ದರು.<br /> <br /> <strong>ವಿವಿಧ ಕಾರ್ಯಕ್ರಮಗಳ ಉದ್ಘಾಟನೆ</strong><br /> ಇಲ್ಲಿನ ಎಸ್ಎಸ್ಜೆವಿಪಿ ಪಿಯು ಕಾಲೇಜು ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ, ವನ ಮಹೋತ್ಸವ, ಸೈಕಲ್ ವಿತರಣೆ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಕಾರ್ಯಕ್ರಮಗಳನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉದ್ಘಾಟಿಸಿದರು.<br /> <br /> ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ. ಸಿದ್ದಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಮೋತಿ ವೀರಪ್ಪ ಕಾಲೇಜಿನ ಪ್ರಾಂಶುಪಾಲ ಜಿ.ಬಿ. ಚಂದ್ರಶೇಖರಪ್ಪ ಉಪನ್ಯಾಸ ನೀಡಿದರು<br /> ಈಚೆಗೆ ನಿವೃತ್ತರಾದ ಪ್ರಾಂಶುಪಾಲ ಎ.ಬಿ. ಪಾಟೀಲ್ ಹಾಗೂ ಮುಖ್ಯೋಪಾಧ್ಯಾಯ ಇ. ಉಜ್ಜಪ್ಪ ಅವರನ್ನು ಸನ್ಮಾನಿಸಲಾಯಿತು. <br /> <br /> ಜಿ.ಪಂ. ಸದಸ್ಯೆ ಪ್ರೇಮಾ ಸಿದ್ದೇಶ್, ತಾ.ಪಂ. ಸದಸ್ಯ ಜೆ. ರಂಗನಾಥ್ ಮಕ್ಕಳಿಗೆ ಬೈಸಿಕಲ್ ವಿತರಿಸಿದರು.<br /> ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಶ್ರೀನಿವಾಸ ಮೂರ್ತಿ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಸಂತೋಷ್, ಎ.ಬಿ. ಪಾಟೀಲ್, ಈ. ಉಜ್ಜಪ್ಪ, ಪ್ರೇಮಾ ಸಿದ್ದೇಶ್ ಮಾತನಾಡಿದರು. ಪಿ. ವಾಗೀಶ್, ತಾ.ಪಂ.ಅಧ್ಯಕ್ಷೆ ಅನಸೂಯಮ್ಮ ಚಿದಾನಂದಮೂರ್ತಿ ಇದ್ದರು.<br /> <br /> ಶ್ರೀನಿಧಿ, ಶ್ರೀ ಲಕ್ಷ್ಮೀ ಪ್ರಾರ್ಥಿಸಿದರು, ವೈ. ಗಂಗಾಧರ್ ಸ್ವಾಗತಿಸಿದರು, ಸಿದ್ದೇಶ್ವರ್ ವಂದಿಸಿದರು ಪೈಜ್ನಟ್ರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>