<p><strong>ದಾವಣಗೆರೆ: </strong>‘ಯಾವುದೇ ಷರತ್ತಿಲ್ಲದೆ ನಾಮಪತ್ರ ಹಿಂದಕ್ಕೆ ಪಡೆದಿದ್ದೇನೆ’ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುಖಂಡ ಎಚ್.ಎಸ್. ನಾಗರಾಜ್ ಸ್ಪಷ್ಟಪಡಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಹಜವಾಗಿಯೇ ಪಕ್ಷದ ಟಿಕೆಟ್ ಬಯಸಿದ್ದೆ. ಆದರೆ, ಪಕ್ಷದ ಕೆಲವು ಆಂತರಿಕ ಸಮಸ್ಯೆಗಳಿಂದ ಬೇಸತ್ತು<br /> ನಾಮಪತ್ರವನ್ನೂ ಸಲ್ಲಿಸಿದ್ದೆ. ವರಿಷ್ಠರು ಈಗ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ಅವರಿಗೆ ಟಿಕೆಟ್ ನೀಡಿದ್ದಾರೆ. ಜಾಧವ್ ಅವರೊಂದಿಗೆ ನನ್ನೆಲ್ಲಾ ನೋವುಗಳನ್ನು ಹಂಚಿಕೊಂಡಿದ್ದರಿಂದ ನಿರಾಳವಾಗಿದ್ದೇನೆ. ಹಾಗಾಗಿ, ಕಣದಿಂದ ಹಿಂದಕ್ಕೆ ಸರಿಯಲು ತೀರ್ಮಾನಿಸಿದ್ದೇನೆ’ ಎಂದು ಹೇಳಿದರು.</p>.<p>‘ಪಕ್ಷದಿಂದ ಯಾವುದೇ ಹುದ್ದೆ ಬಯಸಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತನಾಗಿರುವುದೇ ದೊಡ್ಡ ಜವಾಬ್ದಾರಿ. ಈಗ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನನ್ನ ಗುರಿ’ ಎಂದರು.</p>.<p>‘ಯಶವಂತರಾವ್ ಜಾಧವ್ ವಿರುದ್ಧ ಎಂದೂ ಟೀಕೆ ಮಾಡಿಲ್ಲ. ಪಕ್ಷದ ನಾಯಕರಾದ ಜಿ.ಎಂ. ಸಿದ್ದೇಶ್ವರ, ಎಸ್.ಎ. ರವೀಂದ್ರನಾಥ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದೆ; ಆದರೆ, ಅದು ಆ ಕ್ಷಣದ ಪ್ರತಿಕ್ರಿಯೆ ಅಷ್ಟೇ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಷರತ್ತು ವಿಧಿಸಿಲ್ಲ: ‘ನಾಮಪತ್ರ ಹಿಂಪಡೆಯಲು ನಾಗರಾಜ್ ಅವರು ಯಾವುದೇ ಷರತ್ತು ವಿಧಿಸಿಲ್ಲ. ಪಕ್ಷವೂ ಕೂಡ ಅವರಿಗೆ ಯಾವುದೇ ಹುದ್ದೆಯ ಭರವಸೆ ನೀಡಿಲ್ಲ’ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆದ ಯಶವಂತರಾವ್ ಜಾಧವ್ ಸ್ಪಷ್ಟಪಡಿಸಿದರು.</p>.<p>‘ಪಕ್ಷದ ವಿಚಾರದಲ್ಲಿ ನಡೆದ ಸಣ್ಣ–ಪುಟ್ಟ ವ್ಯತ್ಯಾಸಗಳ ಬಗ್ಗೆ ಅವರಿಗೆ ಆಕ್ಷೇಪ ಇತ್ತು. ಅದನ್ನು ಸರಿಪಡಿಸುವ ಭರವಸೆ ನೀಡಿದ್ದೇನೆ. ನನ್ನ ಪರವಾಗಿಯೇ ಅವರು ಪ್ರಚಾರ ಕಾರ್ಯ ಕೈಗೊಳ್ಳುವರು’ ಎಂದು ಹೇಳಿದರು.</p>.<p>‘ಮಾಯಕೊಂಡ ಕ್ಷೇತ್ರದಲ್ಲಿ ಬಂಡಾಯ ಎದ್ದಿರುವ ಎಚ್. ಆನಂದಪ್ಪ ಅವರನ್ನು ಮನವೊಲಿಸಲು ಸಾಕಷ್ಟು ಪ್ರಯತ್ನಿಸಲಾಯಿತು. ಆದರೆ, ಅವರು ತಮಗೆ ಜನರ ಆಶೀರ್ವಾದ ಇರುವುದಾಗಿ ಹೇಳಿದ್ದಾರೆ. ಈ ವಿಚಾರದಲ್ಲಿ ನಮ್ಮ ಪ್ರಯತ್ನ ಸಫಲವಾಗಿಲ್ಲ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವೈ. ಮಲ್ಲೇಶ್, ಪ್ರತಾಪ್, ರುದ್ರಮುನಿ ಸ್ವಾಮಿ, ರಾಜಶೇಖರ್, ರಾಜನಹಳ್ಳಿ ಶಿವಕುಮಾರ್, ಗೋಣೆಪ್ಪ, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>‘ಯಾವುದೇ ಷರತ್ತಿಲ್ಲದೆ ನಾಮಪತ್ರ ಹಿಂದಕ್ಕೆ ಪಡೆದಿದ್ದೇನೆ’ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುಖಂಡ ಎಚ್.ಎಸ್. ನಾಗರಾಜ್ ಸ್ಪಷ್ಟಪಡಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಹಜವಾಗಿಯೇ ಪಕ್ಷದ ಟಿಕೆಟ್ ಬಯಸಿದ್ದೆ. ಆದರೆ, ಪಕ್ಷದ ಕೆಲವು ಆಂತರಿಕ ಸಮಸ್ಯೆಗಳಿಂದ ಬೇಸತ್ತು<br /> ನಾಮಪತ್ರವನ್ನೂ ಸಲ್ಲಿಸಿದ್ದೆ. ವರಿಷ್ಠರು ಈಗ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ಅವರಿಗೆ ಟಿಕೆಟ್ ನೀಡಿದ್ದಾರೆ. ಜಾಧವ್ ಅವರೊಂದಿಗೆ ನನ್ನೆಲ್ಲಾ ನೋವುಗಳನ್ನು ಹಂಚಿಕೊಂಡಿದ್ದರಿಂದ ನಿರಾಳವಾಗಿದ್ದೇನೆ. ಹಾಗಾಗಿ, ಕಣದಿಂದ ಹಿಂದಕ್ಕೆ ಸರಿಯಲು ತೀರ್ಮಾನಿಸಿದ್ದೇನೆ’ ಎಂದು ಹೇಳಿದರು.</p>.<p>‘ಪಕ್ಷದಿಂದ ಯಾವುದೇ ಹುದ್ದೆ ಬಯಸಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತನಾಗಿರುವುದೇ ದೊಡ್ಡ ಜವಾಬ್ದಾರಿ. ಈಗ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನನ್ನ ಗುರಿ’ ಎಂದರು.</p>.<p>‘ಯಶವಂತರಾವ್ ಜಾಧವ್ ವಿರುದ್ಧ ಎಂದೂ ಟೀಕೆ ಮಾಡಿಲ್ಲ. ಪಕ್ಷದ ನಾಯಕರಾದ ಜಿ.ಎಂ. ಸಿದ್ದೇಶ್ವರ, ಎಸ್.ಎ. ರವೀಂದ್ರನಾಥ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದೆ; ಆದರೆ, ಅದು ಆ ಕ್ಷಣದ ಪ್ರತಿಕ್ರಿಯೆ ಅಷ್ಟೇ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಷರತ್ತು ವಿಧಿಸಿಲ್ಲ: ‘ನಾಮಪತ್ರ ಹಿಂಪಡೆಯಲು ನಾಗರಾಜ್ ಅವರು ಯಾವುದೇ ಷರತ್ತು ವಿಧಿಸಿಲ್ಲ. ಪಕ್ಷವೂ ಕೂಡ ಅವರಿಗೆ ಯಾವುದೇ ಹುದ್ದೆಯ ಭರವಸೆ ನೀಡಿಲ್ಲ’ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆದ ಯಶವಂತರಾವ್ ಜಾಧವ್ ಸ್ಪಷ್ಟಪಡಿಸಿದರು.</p>.<p>‘ಪಕ್ಷದ ವಿಚಾರದಲ್ಲಿ ನಡೆದ ಸಣ್ಣ–ಪುಟ್ಟ ವ್ಯತ್ಯಾಸಗಳ ಬಗ್ಗೆ ಅವರಿಗೆ ಆಕ್ಷೇಪ ಇತ್ತು. ಅದನ್ನು ಸರಿಪಡಿಸುವ ಭರವಸೆ ನೀಡಿದ್ದೇನೆ. ನನ್ನ ಪರವಾಗಿಯೇ ಅವರು ಪ್ರಚಾರ ಕಾರ್ಯ ಕೈಗೊಳ್ಳುವರು’ ಎಂದು ಹೇಳಿದರು.</p>.<p>‘ಮಾಯಕೊಂಡ ಕ್ಷೇತ್ರದಲ್ಲಿ ಬಂಡಾಯ ಎದ್ದಿರುವ ಎಚ್. ಆನಂದಪ್ಪ ಅವರನ್ನು ಮನವೊಲಿಸಲು ಸಾಕಷ್ಟು ಪ್ರಯತ್ನಿಸಲಾಯಿತು. ಆದರೆ, ಅವರು ತಮಗೆ ಜನರ ಆಶೀರ್ವಾದ ಇರುವುದಾಗಿ ಹೇಳಿದ್ದಾರೆ. ಈ ವಿಚಾರದಲ್ಲಿ ನಮ್ಮ ಪ್ರಯತ್ನ ಸಫಲವಾಗಿಲ್ಲ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವೈ. ಮಲ್ಲೇಶ್, ಪ್ರತಾಪ್, ರುದ್ರಮುನಿ ಸ್ವಾಮಿ, ರಾಜಶೇಖರ್, ರಾಜನಹಳ್ಳಿ ಶಿವಕುಮಾರ್, ಗೋಣೆಪ್ಪ, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>