ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗೆ ₹ 4.95 ಲಕ್ಷ ಹಾನಿ

Last Updated 21 ಸೆಪ್ಟೆಂಬರ್ 2020, 13:55 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯ ವಿವಿಧೆಡೆ ಸೋಮವಾರ ಆಗಾಗ ತುಂತುರು ಮಳೆಯಾಗಿದೆ. ಭಾನುವಾರ 5 ಮಿ.ಮೀ ಸರಾಸರಿ ಮಳೆಯಾಗಿದ್ದು, ಅಂದಾಜು ₹ 4.95 ಲಕ್ಷ ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನಲ್ಲಿ 3 ಮಿ.ಮೀ (7 ಮಿ.ಮೀ ವಾಡಿಕೆ), ದಾವಣಗೆರೆ ತಾಲ್ಲೂಕಿನಲ್ಲಿ 5 ಮಿ.ಮೀ (9 ಮಿ.ಮೀ ವಾಡಿಕೆ), ಹರಿಹರ ತಾಲ್ಲೂಕಿನಲ್ಲಿ 6 ಮಿ.ಮೀ (6 ಮಿ.ಮೀ ವಾಡಿಕೆ), ಹೊನ್ನಾಳಿ ತಾಲ್ಲೂಕಿನಲ್ಲಿ 3 ಮಿ.ಮೀ (7 ಮಿ.ಮೀ ವಾಡಿಕೆ), ಜಗಳೂರು ತಾಲ್ಲೂಕಿನಲ್ಲಿ 4 ಮಿ.ಮೀ (4 ಮಿ.ಮೀ ವಾಡಿಕೆ) ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 5 ಮಿ.ಮೀ (5 ಮಿ.ಮೀ ವಾಡಿಕೆ) ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 5 ಮಿ.ಮೀ (5 ಮಿ.ಮೀ ವಾಡಿಕೆ) ಮಳೆಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ ಮೂರು ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, 1 ಲಕ್ಷ ನಷ್ಟವಾಗಿದೆ. 21.05 ಎಕರೆ ಮೆಕ್ಕೆಜೋಳ ಹಾನಿಯಾಗಿದ್ದು, ₹ 1.50 ಲಕ್ಷ ನಷ್ಟ ಸಂಭವಿಸಿದೆ. ನ್ಯಾಮತಿ ತಾಲ್ಲೂಕಿನಲ್ಲಿ ಎರಡು ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ₹ 40 ಸಾವಿರ ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ ಒಂದು ಪಕ್ಕಾ ಮನೆಗೆ ಭಾಗಶಃ ಹಾನಿಯಾಗಿದ್ದು, ₹ 25 ಸಾವಿರ ಹಾಗೂ 10 ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ₹ 1.80 ಲಕ್ಷ ನಷ್ಟವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ₹ 4.95 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT