ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ವಿಮೆ ತ್ವರಿತ ಪಾವತಿಗೆ ಡಿಸಿ ತಾಕೀತು

Last Updated 20 ನವೆಂಬರ್ 2019, 17:06 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಬಾಕಿ ಉಳಿದಬೆಳೆ ವಿಮೆಯ ಮೊತ್ತವನ್ನು ರೈತರ ಖಾತೆಗಳಿಗೆ ತ್ವರಿತವಾಗಿ ಪಾವತಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ವಿಮಾ ಕಂಪನಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಬುಧವಾರ ನಡೆದ ಪರಿಶೀಲನಾ ಸಭೆಯಲ್ಲಿಅವರು ಮಾತನಾಡಿದರು.

2018-19ನೇ ಸಾಲಿನಲ್ಲಿ ಜಿಲ್ಲೆಯ 10,171 ರೈತರಿಗೆ ₹ 20 ಕೋಟಿ ಬೆಳೆ ವಿಮೆ ಮೊತ್ತಪಾವತಿಸಲಾಗಿದೆ. 3,386 ಪ್ರಕರಣಗಳು ಬಾಕಿ ಇವೆ. ₹ 6.44 ಕೋಟಿ ವಿಮಾ ಕಂಪೆನಿಗಳು ಪಾವತಿಸಬೇಕಿದೆ. ಅಡಿಕೆ, ಶುಂಠಿ ಮತ್ತು ಕಾಳು ಮೆಣಸು ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ ಸೌಲಭ್ಯವಿದೆ.2018-19ನೇ ಸಾಲಿನಲ್ಲಿ 8,889 ರೈತರು ಬೆಳೆವಿಮೆ ಪಾಲಿಸಿ ಪಡೆದಿದ್ದಾರೆ. ₹ 24.99 ಕೋಟಿ ಬೆಳೆ ವಿಮೆ ನೀಡಬೇಕಿದೆ. ಇದುವರೆಗೆ ₹ 9.63 ಕೋಟಿ ಪಾವತಿಸಲಾಗಿದೆ. 2017-18ನೇ ಸಾಲಿನಲ್ಲಿ 450 ಪ್ರಕರಣಗಳಲ್ಲಿ ₹ 1.33 ಕೋಟಿ ಪಾವತಿಸಬೇಕಿದೆ. ಈ ಕುರಿತು ವಿಮಾ ಕಂಪನಿಗಳಿಗೆ ಸೂಚನಾ ಪತ್ರ ಬರೆಯಬೇಕು ಎಂದುತಾಕೀತು ಮಾಡಿದರು.

ಪ್ರಸ್ತುತ ಹಂಗಾಮಿನಲ್ಲಿ ಶೇ 50ರಷ್ಟು ಪ್ರಾಯೋಗಿಕ ಬೆಳೆ ಕಟಾವು ಕಾರ್ಯ ಪೂರ್ಣಗೊಳಿಸಲಾಗಿದೆ. ಮೆಕ್ಕೆ ಜೋಳ ಪ್ರಾಯೋಗಿಕ ಬೆಳೆ ಕಟಾವು ಬಹುತೇಕ ಪೂರ್ಣಗೊಂಡಿದೆ. ಕೃಷಿ ಇಲಾಖೆ, ಕಂದಾಯ ಇಲಾಖೆ ಪರಸ್ಪರ ಸಮನ್ವಯದ ಮೂಲಕಈ ಕಾರ್ಯ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೀಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT