‘ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ, ಕಲಕೇರಿ, ತಂಗಡಗಿ ಸೇರಿದಂತೆ ವಿವಿಧ ಭಾಗಗಳಿಗೆ ವಿದೇಶದಿಂದ ಮರಳಿರುವ ಪ್ರಯಾಣಿಕರ ಬಗ್ಗೆಯೂ ತೀವ್ರ ನಿಗಾ ಇಡಲಾಗಿದ್ದು, ಈ ಕುರಿತು ಪರಿಶೀಲನೆಗೆ ಹಿರಿಯ ವೈದ್ಯರನ್ನು ಕಳುಹಿಸಲಾಗುತ್ತಿದೆ. ಕೊರೊನಾ ವೈರಸ್ ಲಕ್ಷಣಗಳ ಬಗ್ಗೆ ಮತ್ತು ನಿರ್ದೇಶನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಮೂಲಕ ನೀಡಲಾಗಿದೆ. ಕೊರೊನಾ ವೈರಸ್ ಸೋಂಕಿತ ಲಕ್ಷಣಗಳು ಕಂಡುಬಂದ ತಕ್ಷಣ ಸಂಬಂಧಿಸಿದ ಪ್ರಯೋಗಾಲಯಗಳಿಗೆ ಅವರ ಗಂಟಲು ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ, ವರದಿಯನ್ನು ಪಡೆಯಲಾಗುತ್ತಿದೆ’ ಎಂದು ಹೇಳಿದರು.