ಜಿಲ್ಲಾಧಿಕಾರಿಯಾಗಿ ಒಂದು ವರ್ಷದಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಮಂಗನಕಾಯಿಲೆ ಉಲ್ಬಣಗೊಂಡ ಅರಳಗೋಡು ಶಾಲೆಯಲ್ಲೇ ಗ್ರಾಮ ವಾಸ್ತವ್ಯ ಮಾಡುವ ರಿಸ್ಕ್ ತೆಗೆದುಕೊಂಡಿದ್ದ ಅವರು ಮಲೆನಾಡಿನ ಜನರ ಮನ್ನಣೆ ಗಳಿಸಿದ್ದರು. ದಶಕದಿಂದ ನಿಂತು ಹೋಗಿದ್ದ ಸಹ್ಯಾದ್ರಿ ಉತ್ಸವಕ್ಕೆ ಮರು ಚಾಲನೆ ನೀಡಿ, ಯಶಸ್ವಿಗೊಳಿಸಿದ್ದರು. ಜಿಲ್ಲೆಯ ಕಲೆ, ಸಾಹಿತ್ಯ, ಸಂಸ್ಕೃತಿಗೆ ಆದ್ಯತೆ ನೀಡಿ ಹತ್ತು ಹಲವು ಕಾರ್ಯಕ್ರಮ ಆಯೋಜಿಸಿದ್ದರು.