ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಮಂಗನ ಕಾಯಿಲೆಗೆ ಮತ್ತೊಂದು ಬಲಿ

Last Updated 2 ಏಪ್ರಿಲ್ 2019, 18:35 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಮಂಗನ ಕಾಯಿಲೆಯಿಂದ ತಾಲ್ಲೂಕಿನ ಸಿಂಗನಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟದಕೊಪ್ಪ ಗ್ರಾಮದ ಶ್ರೀನಿವಾಸನಾಯ್ಕ್ (63) ಮೃತಪಟ್ಟಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಪಟ್ಟಣದ ಸರ್ಕಾರಿ ಜೆ.ಸಿ ಆಸ್ಪತ್ರೆಗೆ ಮಾರ್ಚ್ 27ರಂದು ದಾಖಲಿಸಲಾಗಿತ್ತು. ಅವರ ದೇಹದಲ್ಲಿ ಮಂಗನ ಕಾಯಿಲೆ ವೈರಾಣು ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಮಾರ್ಚ್ 30ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀನಿವಾಸನಾಯ್ಕ್ ಅವರ ಪತ್ನಿ ಪ್ರೇಮ ಹಾಗೂ ಸೊಸೆಯಂದಿರಾದ ಸೀತಾ, ಮಧುರಾ ಕೂಡ ಜ್ವರದಿಂದ ಬಳಲುತ್ತಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈಗ ಶ್ರೀನಿವಾಸನಾಯ್ಕ್ ಅವರ ಸಾವು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT