<p>ಶಿವಮೊಗ್ಗ: ತೀರ್ಥಹಳ್ಳಿಯ ಪ್ರವಾಸಿ ಮಂದಿರದ ಬಳಿ ಮಾವಿನ ಮರವೊಂದನ್ನು ಕಡಿದ ಪರಿಣಾಮ 15 ಬಾವಲಿಗಳು ಮೃತಪಟ್ಟಿವೆ. ಇದರಲ್ಲಿ 10 ಬಾವಲಿ ಮರಿಗಳೇ ಇವೆ.</p>.<p>ಈ ಹಿನ್ನೆಲೆಯಲ್ಲಿ ಭಾನುವಾರ ಪಶು ಸಂಗೋಪನೆ ಇಲಾಖೆಯ ಡಾ.ಸದಾಶಿವ ನೇತೃತ್ವದ ತಂಡ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದರು.</p>.<p>ಮರವನ್ನು ಕಡಿದ ಪರಿಣಾಮ ಅವು ಸತ್ತಿವೆ. ಇವುಗಳಲ್ಲಿ ಮರಿಗಳು ಬಿಸಿಲಿನ ಬೇಗೆಗೆ ಸತ್ತಿವೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಬಾವಲಿ ಪಕ್ಷಿ ಅಲ್ಲ, ಸಸ್ತನಿಯಾಗಿರುವುದರಿಂದ ಹಕ್ಕಿಜ್ವರ ಹರಡುತ್ತದೆ ಎಂಬ ಭೀತಿ ಅಥವಾ ಆತಂಕ ಬೇಡ ಎಂದು ಡಾ. ಸದಾಶಿವ ತಿಳಿಸಿದರು.</p>.<p>ಇಲಾಖೆಯಿಂದ ಬಾವಲಿಗಳು ಮೃತಪಟ್ಟ ಸ್ಥಳಗಳಲ್ಲಿ ಸೋಡಿಯಂ ಹೈಪೋ ಕ್ಲೋರೈಡ್ ಸಿಂಪಡಿಸಲಾಗುತ್ತಿದೆ. ಇದರಿಂದ ವೈರಸ್ ಹರಡದಂತೆ ತಡೆಗಟ್ಟಬಹುದು. ಇವುಗಳ ಮಾದರಿಯನ್ನು ಬೆಂಗಳೂರಿನ ಪ್ರಾಣಿ ಆರೋಗ್ಯ ಮತ್ತು ಜೈವಿಕ ಇಲಾಖೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ತೀರ್ಥಹಳ್ಳಿಯ ಪ್ರವಾಸಿ ಮಂದಿರದ ಬಳಿ ಮಾವಿನ ಮರವೊಂದನ್ನು ಕಡಿದ ಪರಿಣಾಮ 15 ಬಾವಲಿಗಳು ಮೃತಪಟ್ಟಿವೆ. ಇದರಲ್ಲಿ 10 ಬಾವಲಿ ಮರಿಗಳೇ ಇವೆ.</p>.<p>ಈ ಹಿನ್ನೆಲೆಯಲ್ಲಿ ಭಾನುವಾರ ಪಶು ಸಂಗೋಪನೆ ಇಲಾಖೆಯ ಡಾ.ಸದಾಶಿವ ನೇತೃತ್ವದ ತಂಡ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದರು.</p>.<p>ಮರವನ್ನು ಕಡಿದ ಪರಿಣಾಮ ಅವು ಸತ್ತಿವೆ. ಇವುಗಳಲ್ಲಿ ಮರಿಗಳು ಬಿಸಿಲಿನ ಬೇಗೆಗೆ ಸತ್ತಿವೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಬಾವಲಿ ಪಕ್ಷಿ ಅಲ್ಲ, ಸಸ್ತನಿಯಾಗಿರುವುದರಿಂದ ಹಕ್ಕಿಜ್ವರ ಹರಡುತ್ತದೆ ಎಂಬ ಭೀತಿ ಅಥವಾ ಆತಂಕ ಬೇಡ ಎಂದು ಡಾ. ಸದಾಶಿವ ತಿಳಿಸಿದರು.</p>.<p>ಇಲಾಖೆಯಿಂದ ಬಾವಲಿಗಳು ಮೃತಪಟ್ಟ ಸ್ಥಳಗಳಲ್ಲಿ ಸೋಡಿಯಂ ಹೈಪೋ ಕ್ಲೋರೈಡ್ ಸಿಂಪಡಿಸಲಾಗುತ್ತಿದೆ. ಇದರಿಂದ ವೈರಸ್ ಹರಡದಂತೆ ತಡೆಗಟ್ಟಬಹುದು. ಇವುಗಳ ಮಾದರಿಯನ್ನು ಬೆಂಗಳೂರಿನ ಪ್ರಾಣಿ ಆರೋಗ್ಯ ಮತ್ತು ಜೈವಿಕ ಇಲಾಖೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>